ಬ್ರೇಕಿಂಗ್ ನ್ಯೂಸ್
05-07-23 03:14 pm Mangalore Correspondent ಕರಾವಳಿ
ಉಳ್ಳಾಲ, ಜು.5: ಭಾರೀ ಮಳೆಗೆ ಸೋಮೇಶ್ವರದ ರೈಲ್ವೇ ನಿಲ್ದಾಣದ ಬಳಿ ವಾಸವಿದ್ದ ಬಡ ವಿಧವೆಯರಿಬ್ಬರ ಮನೆ ಕುಸಿದು ಬಿದ್ದಿದೆ. ಅಪಾಯದಲ್ಲಿದ್ದ ಮನೆಯ ದುರಸ್ತಿಗಾಗಿ ಕುಟಂಬವನ್ನ ಮೊದಲೇ ಸ್ಥಳಾಂತರಿಸಿದ್ದರಿಂದ ಪ್ರಾಣಾಪಾಯ ತಪ್ಪಿದೆ.
ಸೋಮೇಶ್ವರದ ಉಳ್ಳಾಲ ರೈಲ್ವೇ ನಿಲ್ದಾಣದ ಹಿಂಬದಿಯ ವಿಧವೆ ಶೋಭಾ ಅವರ ಮನೆ ನಿನ್ನೆ ರಾತ್ರಿ ಸುರಿದ ಗಾಳಿ, ಮಳೆಗೆ ಉರುಳಿ ಬಿದ್ದಿದೆ. ಶೋಭಾ ಅವರ ಪತಿ ಕೆಲವು ವರ್ಷಗಳ ಹಿಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಆಬಳಿಕ ಶೋಭಾ ಅವರು ತನ್ನ ಸಹೋದರ ವಸಂತ್ ಮತ್ತು ಆತನ ಪತ್ನಿ ಹೇಮಾ ಜೊತೆ ವಾಸವಿದ್ದರು. ವರ್ಷದ ಹಿಂದೆ ಮನೆಗೆ ಆಧಾರ ಸ್ತಂಭವಾಗಿದ್ದ ಶೋಭಾರ ತಮ್ಮ ವಸಂತ್ ಅವರೂ ನೀರಿಗೆ ಬಿದ್ದು ಆಕಸ್ಮಿಕವಾಗಿ ಮೃತಪಟ್ಟಿದ್ದರು.



ಶೋಭಾ ಅವರು ತನ್ನ ತಮ್ಮನ ಪತ್ನಿ ಹೇಮಾ ಮತ್ತು ಆಕೆಯ ಏಕೈಕ ಗಂಡು ಮಗು ಜೊತೆ ಹರಕಲು, ಮುರುಕಲು ಮನೆಯಲ್ಲಿ ವಾಸವಿದ್ದರು. ಈ ಬಡ ಕುಟುಂಬದ ಬಗ್ಗೆ ಮರುಕಪಟ್ಟ ಸ್ಥಳೀಯ ರಕ್ತೇಶ್ವರಿ ಬಳಗದವರು ಮನೆಯ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳುವ ಸಲುವಾಗಿ ಕುಟುಂಬವನ್ನ ಹತ್ತಿರದ ಮನೆಯೊಂದಕ್ಕೆ ಸ್ಥಳಾಂತರಿಸಿದ್ದರು. ಘಟನೆ ನಡೆದ ಸಂದರ್ಭ ಕುಟುಂಬ ಸದಸ್ಯರು ಮನೆಯಲ್ಲಿರದ ಕಾರಣ ಪ್ರಾಣ ಹಾನಿ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಸೋಮೇಶ್ವರ ಪುರಸಭಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಡ ವಿಧವೆಯರ ಕುಟುಂಬಕ್ಕೆ ಸುಸಜ್ಜಿತ ಮನೆ ನಿರ್ಮಿಸಲು ರಕ್ತೇಶ್ವರಿ ಬಳಗದ ಸದಸ್ಯರು ಮುಂದಾಗಿದ್ದು ಕುಟುಂಬಕ್ಕೆ ಸರಕಾರ ಮತ್ತು ದಾನಿಗಳ ಸಹಕಾರ ಯಾಚಿಸಿದ್ದಾರೆ.
Heavy Rains in Mangalore, House of Widow collapsed due to heavys winds at Someshwar in Ullal. Schools and colleges have been delcared holiday due to heavy rains in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm