ಬ್ರೇಕಿಂಗ್ ನ್ಯೂಸ್
05-07-23 03:14 pm Mangalore Correspondent ಕರಾವಳಿ
ಉಳ್ಳಾಲ, ಜು.5: ಭಾರೀ ಮಳೆಗೆ ಸೋಮೇಶ್ವರದ ರೈಲ್ವೇ ನಿಲ್ದಾಣದ ಬಳಿ ವಾಸವಿದ್ದ ಬಡ ವಿಧವೆಯರಿಬ್ಬರ ಮನೆ ಕುಸಿದು ಬಿದ್ದಿದೆ. ಅಪಾಯದಲ್ಲಿದ್ದ ಮನೆಯ ದುರಸ್ತಿಗಾಗಿ ಕುಟಂಬವನ್ನ ಮೊದಲೇ ಸ್ಥಳಾಂತರಿಸಿದ್ದರಿಂದ ಪ್ರಾಣಾಪಾಯ ತಪ್ಪಿದೆ.
ಸೋಮೇಶ್ವರದ ಉಳ್ಳಾಲ ರೈಲ್ವೇ ನಿಲ್ದಾಣದ ಹಿಂಬದಿಯ ವಿಧವೆ ಶೋಭಾ ಅವರ ಮನೆ ನಿನ್ನೆ ರಾತ್ರಿ ಸುರಿದ ಗಾಳಿ, ಮಳೆಗೆ ಉರುಳಿ ಬಿದ್ದಿದೆ. ಶೋಭಾ ಅವರ ಪತಿ ಕೆಲವು ವರ್ಷಗಳ ಹಿಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಆಬಳಿಕ ಶೋಭಾ ಅವರು ತನ್ನ ಸಹೋದರ ವಸಂತ್ ಮತ್ತು ಆತನ ಪತ್ನಿ ಹೇಮಾ ಜೊತೆ ವಾಸವಿದ್ದರು. ವರ್ಷದ ಹಿಂದೆ ಮನೆಗೆ ಆಧಾರ ಸ್ತಂಭವಾಗಿದ್ದ ಶೋಭಾರ ತಮ್ಮ ವಸಂತ್ ಅವರೂ ನೀರಿಗೆ ಬಿದ್ದು ಆಕಸ್ಮಿಕವಾಗಿ ಮೃತಪಟ್ಟಿದ್ದರು.



ಶೋಭಾ ಅವರು ತನ್ನ ತಮ್ಮನ ಪತ್ನಿ ಹೇಮಾ ಮತ್ತು ಆಕೆಯ ಏಕೈಕ ಗಂಡು ಮಗು ಜೊತೆ ಹರಕಲು, ಮುರುಕಲು ಮನೆಯಲ್ಲಿ ವಾಸವಿದ್ದರು. ಈ ಬಡ ಕುಟುಂಬದ ಬಗ್ಗೆ ಮರುಕಪಟ್ಟ ಸ್ಥಳೀಯ ರಕ್ತೇಶ್ವರಿ ಬಳಗದವರು ಮನೆಯ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳುವ ಸಲುವಾಗಿ ಕುಟುಂಬವನ್ನ ಹತ್ತಿರದ ಮನೆಯೊಂದಕ್ಕೆ ಸ್ಥಳಾಂತರಿಸಿದ್ದರು. ಘಟನೆ ನಡೆದ ಸಂದರ್ಭ ಕುಟುಂಬ ಸದಸ್ಯರು ಮನೆಯಲ್ಲಿರದ ಕಾರಣ ಪ್ರಾಣ ಹಾನಿ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಸೋಮೇಶ್ವರ ಪುರಸಭಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಡ ವಿಧವೆಯರ ಕುಟುಂಬಕ್ಕೆ ಸುಸಜ್ಜಿತ ಮನೆ ನಿರ್ಮಿಸಲು ರಕ್ತೇಶ್ವರಿ ಬಳಗದ ಸದಸ್ಯರು ಮುಂದಾಗಿದ್ದು ಕುಟುಂಬಕ್ಕೆ ಸರಕಾರ ಮತ್ತು ದಾನಿಗಳ ಸಹಕಾರ ಯಾಚಿಸಿದ್ದಾರೆ.
Heavy Rains in Mangalore, House of Widow collapsed due to heavys winds at Someshwar in Ullal. Schools and colleges have been delcared holiday due to heavy rains in Mangalore.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm