ಬ್ರೇಕಿಂಗ್ ನ್ಯೂಸ್
05-07-23 10:01 pm Mangalore Correspondent ಕರಾವಳಿ
ಮಂಗಳೂರು, ಜುಲೈ 5: ಜೂನ್ ತಿಂಗಳ ಅಂತ್ಯಕ್ಕೆ ಆರಂಭಗೊಂಡ ಮುಂಗಾರು ಕಡೆಗೂ ತೀವ್ರತೆ ಪಡೆದಿದೆ. ಕಳೆದ ಎರಡು ದಿನಗಳಿಂದ ಕರಾವಳಿ ಭಾಗದಲ್ಲಿ ಮುಂಗಾರಿನ ಅಬ್ಬರ ಹಳೆಕಾಲದ ರೀತಿಯಲ್ಲೇ ಮರುಕಳಿಸಿದೆ. ಇಡೀ ದಿನವೂ ಎಡೆಬಿಡದೆ ಮಳೆ ಸುರಿಯುವುದು, ನಡು ನಡುವೆ ಬಿರುಸು ಪಡೆಯುವುದು ಮಳೆಗಾಲದ ಉಚ್ಛ್ರಾಯ ಸ್ಥಿತಿ. ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ನೋಡಿದರೆ, ಅದೇ ರೀತಿಯ ಅನುಭವ ಆಗುತ್ತದೆ.
ಹವಾಮಾನ ಇಲಾಖೆಯ ಪ್ರಕಾರ, ಜುಲೈ 4 ಮತ್ತು 5ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿತ್ತು. ಅಂದರೆ, 24 ಗಂಟೆಯಲ್ಲಿ 20 ಸೆಂಟಿ ಮೀಟರಿಗಿಂತ(200 ಮಿಮೀ) ಹೆಚ್ಚು ಮಳೆಯಾಗುತ್ತದೆ ಅನ್ನುವ ಅಂದಾಜು ಹೇಳಲಾಗಿತ್ತು. ಬಹುತೇಕ ಅದೇ ಪ್ರಮಾಣದಲ್ಲಿ ಮಳೆಯಾಗಿದ್ದು, ಜುಲೈ 5ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 101.3 ಮಿಮೀ ಅಂದರೆ, ಹತ್ತು ಸೆಂಟಿ ಮೀಟರ್ ಗಿಂತ ಹೆಚ್ಚು ಮಳೆಯಾಗಿದೆ. ಮೂಡುಬಿದ್ರೆಯಲ್ಲಿ 143 ಮಿಮೀ(14 ಸೆಮೀ) ಅತಿ ಹೆಚ್ಚು ಮಳೆಯಾಗಿದ್ದರೆ, ಆನಂತರ ಬೆಳ್ತಂಗಡಿಯಲ್ಲಿ 114 ಮಿಮೀ, ಬಂಟ್ವಾಳದಲ್ಲಿ 123 ಮಿಮೀ, ಮಂಗಳೂರಿನಲ್ಲಿ 97, ಪುತ್ತೂರಿನಲ್ಲಿ 90, ಸುಳ್ಯದಲ್ಲಿ 70, ಕಡಬದಲ್ಲಿ 77 ಮಿಮೀ ಮಳೆಯಾಗಿದೆ. ವಾಡಿಕೆಯ ಪ್ರಕಾರ, ಈ ಸಮಯದಲ್ಲಿ 38 ಮಿಮೀ ಮಳೆಯಾಗಬೇಕಿದ್ದರೆ, ಇದೀಗ 101 ಮಿಮೀ ಮಳೆ ದಾಖಲಾಗಿದೆ.


ಜುಲೈ 6 ಮತ್ತು 7ರಂದು ಆರೆಂಜ್ ಅಲರ್ಟ್ ನೀಡಲಾಗಿದ್ದು, ಇದರ ಪ್ರಕಾರ, 115 ಮಿಮೀಗಿಂತ 200 ಮಿಮೀ ಮಳೆಯಾಗಬಹುದು ಎಂಬ ಲೆಕ್ಕಾಚಾರ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಿದೆ. ಆದರೆ ಎರಡು ದಿನಗಳಿಂದ ಧಾರಾಕಾರ ಮಳೆಯಾದರೂ, ನದಿಗಳಲ್ಲಿ ನೀರಿನ ಹರಿವು ದೊಡ್ಡ ಮಟ್ಟಿನಲ್ಲಿ ಹೆಚ್ಚಿಗೆಯಾಗಿಲ್ಲ. ಜೂನ್ ತಿಂಗಳಲ್ಲಿ ವಾಡಿಕೆಯ ಮಳೆಯೂ ಬಾರದೇ ಇರುವುದರಿಂದ ಜೂನ್ ಕೊನೆಯ ವರೆಗೂ ಹೆಚ್ಚಿನ ಕಡೆಗಳಲ್ಲಿ ನದಿಗಳಲ್ಲಿ ಹರಿವು ಆರಂಭ ಆಗಿರಲಿಲ್ಲ.

ಮೊನ್ನೆ ಜುಲೈ ಬಳಿಕ ಮಳೆ ತೀವ್ರತೆ ಪಡೆದಿದ್ದು ಈಗಷ್ಟೇ ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ. ಹೀಗಾಗಿ ಎರಡು ದಿನಗಳಲ್ಲಿ ಎಡೆಬಿಡದೆ ಮಳೆ ಬಂದರೂ, ಬಂಟ್ವಾಳದಲ್ಲಿ ನೆರೆ ಆವರಿಸುವ ಸ್ಥಿತಿ ಬಂದಿಲ್ಲ. ತುಂಬೆಯ ಅಣೆಕಟ್ಟಿನಲ್ಲಿ ಇನ್ನೂ ನೀರು ತುಂಬಿಲ್ಲ. ಅಣೆಕಟ್ಟಿನ ಒಟ್ಟು 30 ಗೇಟ್ ಗಳಲ್ಲಿ 15 ಗೇಟನ್ನಷ್ಟೇ ಓಪನ್ ಮಾಡಲಾಗಿದೆ. ಇದಲ್ಲದೆ, ನೇತ್ರಾವತಿ ತುಂಬಿ ಹರಿಯುವ ಮಟ್ಟ 9 ಮೀಟರ್ ಆಗಿದ್ದರೆ, ಈಗ 3.6 ಮೀಟರ್ ಎತ್ತರದಲ್ಲಷ್ಟೇ ನೀರು ಹರಿಯುತ್ತಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
Hevay rain in Mangalore and moodbidri, yet dams not filled with enough water.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm