ಬ್ರೇಕಿಂಗ್ ನ್ಯೂಸ್
05-07-23 10:01 pm Mangalore Correspondent ಕರಾವಳಿ
ಮಂಗಳೂರು, ಜುಲೈ 5: ಜೂನ್ ತಿಂಗಳ ಅಂತ್ಯಕ್ಕೆ ಆರಂಭಗೊಂಡ ಮುಂಗಾರು ಕಡೆಗೂ ತೀವ್ರತೆ ಪಡೆದಿದೆ. ಕಳೆದ ಎರಡು ದಿನಗಳಿಂದ ಕರಾವಳಿ ಭಾಗದಲ್ಲಿ ಮುಂಗಾರಿನ ಅಬ್ಬರ ಹಳೆಕಾಲದ ರೀತಿಯಲ್ಲೇ ಮರುಕಳಿಸಿದೆ. ಇಡೀ ದಿನವೂ ಎಡೆಬಿಡದೆ ಮಳೆ ಸುರಿಯುವುದು, ನಡು ನಡುವೆ ಬಿರುಸು ಪಡೆಯುವುದು ಮಳೆಗಾಲದ ಉಚ್ಛ್ರಾಯ ಸ್ಥಿತಿ. ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ನೋಡಿದರೆ, ಅದೇ ರೀತಿಯ ಅನುಭವ ಆಗುತ್ತದೆ.
ಹವಾಮಾನ ಇಲಾಖೆಯ ಪ್ರಕಾರ, ಜುಲೈ 4 ಮತ್ತು 5ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿತ್ತು. ಅಂದರೆ, 24 ಗಂಟೆಯಲ್ಲಿ 20 ಸೆಂಟಿ ಮೀಟರಿಗಿಂತ(200 ಮಿಮೀ) ಹೆಚ್ಚು ಮಳೆಯಾಗುತ್ತದೆ ಅನ್ನುವ ಅಂದಾಜು ಹೇಳಲಾಗಿತ್ತು. ಬಹುತೇಕ ಅದೇ ಪ್ರಮಾಣದಲ್ಲಿ ಮಳೆಯಾಗಿದ್ದು, ಜುಲೈ 5ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 101.3 ಮಿಮೀ ಅಂದರೆ, ಹತ್ತು ಸೆಂಟಿ ಮೀಟರ್ ಗಿಂತ ಹೆಚ್ಚು ಮಳೆಯಾಗಿದೆ. ಮೂಡುಬಿದ್ರೆಯಲ್ಲಿ 143 ಮಿಮೀ(14 ಸೆಮೀ) ಅತಿ ಹೆಚ್ಚು ಮಳೆಯಾಗಿದ್ದರೆ, ಆನಂತರ ಬೆಳ್ತಂಗಡಿಯಲ್ಲಿ 114 ಮಿಮೀ, ಬಂಟ್ವಾಳದಲ್ಲಿ 123 ಮಿಮೀ, ಮಂಗಳೂರಿನಲ್ಲಿ 97, ಪುತ್ತೂರಿನಲ್ಲಿ 90, ಸುಳ್ಯದಲ್ಲಿ 70, ಕಡಬದಲ್ಲಿ 77 ಮಿಮೀ ಮಳೆಯಾಗಿದೆ. ವಾಡಿಕೆಯ ಪ್ರಕಾರ, ಈ ಸಮಯದಲ್ಲಿ 38 ಮಿಮೀ ಮಳೆಯಾಗಬೇಕಿದ್ದರೆ, ಇದೀಗ 101 ಮಿಮೀ ಮಳೆ ದಾಖಲಾಗಿದೆ.


ಜುಲೈ 6 ಮತ್ತು 7ರಂದು ಆರೆಂಜ್ ಅಲರ್ಟ್ ನೀಡಲಾಗಿದ್ದು, ಇದರ ಪ್ರಕಾರ, 115 ಮಿಮೀಗಿಂತ 200 ಮಿಮೀ ಮಳೆಯಾಗಬಹುದು ಎಂಬ ಲೆಕ್ಕಾಚಾರ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಿದೆ. ಆದರೆ ಎರಡು ದಿನಗಳಿಂದ ಧಾರಾಕಾರ ಮಳೆಯಾದರೂ, ನದಿಗಳಲ್ಲಿ ನೀರಿನ ಹರಿವು ದೊಡ್ಡ ಮಟ್ಟಿನಲ್ಲಿ ಹೆಚ್ಚಿಗೆಯಾಗಿಲ್ಲ. ಜೂನ್ ತಿಂಗಳಲ್ಲಿ ವಾಡಿಕೆಯ ಮಳೆಯೂ ಬಾರದೇ ಇರುವುದರಿಂದ ಜೂನ್ ಕೊನೆಯ ವರೆಗೂ ಹೆಚ್ಚಿನ ಕಡೆಗಳಲ್ಲಿ ನದಿಗಳಲ್ಲಿ ಹರಿವು ಆರಂಭ ಆಗಿರಲಿಲ್ಲ.

ಮೊನ್ನೆ ಜುಲೈ ಬಳಿಕ ಮಳೆ ತೀವ್ರತೆ ಪಡೆದಿದ್ದು ಈಗಷ್ಟೇ ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ. ಹೀಗಾಗಿ ಎರಡು ದಿನಗಳಲ್ಲಿ ಎಡೆಬಿಡದೆ ಮಳೆ ಬಂದರೂ, ಬಂಟ್ವಾಳದಲ್ಲಿ ನೆರೆ ಆವರಿಸುವ ಸ್ಥಿತಿ ಬಂದಿಲ್ಲ. ತುಂಬೆಯ ಅಣೆಕಟ್ಟಿನಲ್ಲಿ ಇನ್ನೂ ನೀರು ತುಂಬಿಲ್ಲ. ಅಣೆಕಟ್ಟಿನ ಒಟ್ಟು 30 ಗೇಟ್ ಗಳಲ್ಲಿ 15 ಗೇಟನ್ನಷ್ಟೇ ಓಪನ್ ಮಾಡಲಾಗಿದೆ. ಇದಲ್ಲದೆ, ನೇತ್ರಾವತಿ ತುಂಬಿ ಹರಿಯುವ ಮಟ್ಟ 9 ಮೀಟರ್ ಆಗಿದ್ದರೆ, ಈಗ 3.6 ಮೀಟರ್ ಎತ್ತರದಲ್ಲಷ್ಟೇ ನೀರು ಹರಿಯುತ್ತಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
Hevay rain in Mangalore and moodbidri, yet dams not filled with enough water.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm