ಬ್ರೇಕಿಂಗ್ ನ್ಯೂಸ್
05-07-23 10:47 pm Mangalore Correspondent ಕರಾವಳಿ
ಮಂಗಳೂರು, ಜುಲೈ 5: ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿ, ಮೀನುಗಾರಿಕೆ, ನದಿ, ಸಮುದ್ರಕ್ಕೆ ಇಳಿಯುವುದನ್ನು ನಿಷೇಧಿಸಿದ್ದರೂ, ಹರೇಕಳದ ಮೀನುಗಾರನೊಬ್ಬ ದುಸ್ಸಾಹಸ ಮಾಡಿದ್ದು ಅಪಾಯದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾನೆ.
ಬುಧವಾರ ಬೆಳಗ್ಗೆ ನೇತ್ರಾವತಿ ನದಿಯಲ್ಲಿ ಉಳ್ಳಾಲದ ಹರೇಕಳದ ಮೀನುಗಾರನೊಬ್ಬ ದೋಣಿಯಲ್ಲಿ ಮೀನು ಹಿಡಿಯಲು ಹೋಗಿದ್ದ. ಮಧ್ಯಾಹ್ನ ವೇಳೆಗೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದು, ದೋಣಿಯನ್ನು ಬದಿಗೆ ಸರಿಸುವ ಯತ್ನದಲ್ಲಿದ್ದಾಗಲೇ ದೋಣಿ ನೀರಿನಲ್ಲಿ ಮಗುಚಿ ಬಿದ್ದಿದೆ. ಹರೇಕಳ- ಅಡ್ಯಾರ್ ನಡುವೆ ಕಟ್ಟಿರುವ ಹೊಸ ಸೇತುವೆಯ ಬಳಿಯಲ್ಲೇ ಘಟನೆ ನಡೆದಿದ್ದು, ಮೀನುಗಾರ ದುಸ್ಸಾಹಸ ಮೆರೆದಿದ್ದನ್ನು ಸ್ಥಳೀಯರು ನೋಡಿದ್ದಾರೆ.
ಕೂಡಲೇ ಸ್ಥಳದಲ್ಲಿದ್ದ ಯುವಕರು ಮೀನುಗಾರನಿಗೆ ಹಗ್ಗ ಇಳಿಸಿ, ರಕ್ಷಿಸುವ ಯತ್ನ ಮಾಡಿದ್ದಾರೆ. ದೋಣಿಯನ್ನು ಬಿಟ್ಟು ಮೀನುಗಾರ ಸೇತುವೆಯ ಮೂಲಕ ಮೇಲಕ್ಕೇರಿದ್ದು, ಅಪಾಯದಿಂದ ಪಾರಾಗಿದ್ದಾನೆ. ತುಂಬೆಯ ಡ್ಯಾಮಿನಲ್ಲಿ ಗೇಟ್ ಓಪನ್ ಮಾಡಿದ್ದರಿಂದ ನದಿಯಲ್ಲಿ ಒಮ್ಮಿಂದೊಮ್ಮೆಗೆ ನೀರಿನ ಪ್ರಮಾಣ ಏರಿಕೆಯಾಗಿತ್ತು. ಅಡ್ಯಾರ್ ಭಾಗದಲ್ಲಿ ಮೀನು ಹಿಡಿಯುತ್ತಿದ್ದ ಮೀನುಗಾರ ದೋಣಿಯನ್ನು ಬದಿಗೆ ಸರಿಸುವ ಯತ್ನದಲ್ಲಿದ್ದಾಗಲೇ ನೀರಿನಲ್ಲಿ ಸಿಲುಕಿದ್ದು ಅಪಾಯಕ್ಕೀಡಾಗಿದ್ದ. ಯುವಕನ ರಕ್ಷಣೆ ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದೆ.
The boat of a youth who went fishing by boat despite warnings of Red Alert by the weather department capsized. He was rescued by the residents of Harekala. The incident happened below Harekala-Adyar bridge in the Netravati river on Wednesday July 5.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 11:26 am
Mangalore Correspondent
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm