ಬ್ರೇಕಿಂಗ್ ನ್ಯೂಸ್
06-07-23 10:28 am Mangalore Correspondent ಕರಾವಳಿ
ಉಳ್ಳಾಲ, ಜು.6: ಕಳೆದ ಮೂರು ದಿನಗಳಿಂದ ನಿರಂತರ ಸುರಿಯುತ್ತಿರುವ ಗಾಳಿ, ಮಳೆಗೆ ತಲಪಾಡಿ ದೇವಿನಗರದ ಶಾರದಾ ವಿದ್ಯಾಲಯದ ಆರು ಅಂತಸ್ತಿನ ಕಟ್ಟಡದ ಮೇಲೆ ಅಳವಡಿಸಲಾಗಿದ್ದ ಭಾರೀ ಗಾತ್ರದ ಶೀಟ್ ಮೇಲ್ಛಾವಣಿ ಹಾರಿ ಕೆಳಗೆ ಬಿದ್ದಿದ್ದು ಶಾಲೆಗೆ ರಜೆ ಇದ್ದ ಕಾರಣ ಸಂಭವನೀಯ ಅನಾಹುತ ತಪ್ಪಿದೆ.
ಬುಧವಾರ ಬೆಳಗ್ಗೆ 9 ಗಂಟೆ ವೇಳೆಗೆ ಘಟನೆ ನಡೆದಿದೆ. ದೇವಿನಗರದ ಶಾರದಾ ವಿದ್ಯಾಲಯದ ಕ್ಯಾಂಪಸ್ ಒಳಗಿನ ಆರು ಅಂತಸ್ತಿನ ಶಾಲಾ ಕಟ್ಟಡದ ಮೇಲೆ ಇತ್ತೀಚೆಗೆ ಅಳವಡಿಸಲಾಗಿದ್ದ ಭಾರೀ ಗಾತ್ರದ ಶೀಟ್ ಛಾವಣಿ ಉರುಳಿ ಕೆಳಗೆ ಬಿದ್ದಿದೆ. ಶೀಟ್ ಅಳವಡಿಸಲು ಹಾಕಲಾಗಿದ್ದ ಭಾರೀ ಗಾತ್ರದ ಕಬ್ಬಿಣದ ಸಲಾಕೆಗಳು ಮುರಿದು ಕೆಳಗೆ ಬಿದ್ದಿದ್ದು ಅನೇಕ ವಾಹನಗಳು ಜಖಂಗೊಂಡಿವೆ.
ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ಜಿಲ್ಲಾಡಳಿತವು ಶಾಲಾ, ಕಾಲೇಜುಗಳಿಗೆ ರಜೆ ನೀಡಿದ್ದರಿಂದ ನಿನ್ನೆ ವಿದ್ಯಾರ್ಥಿಗಳು ಶಾಲೆಗೆ ಬಂದಿರಲಿಲ್ಲ. ಹಾಗಾಗಿ ಸಂಭವನೀಯ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಶಾಲಾಡಳಿತವು ಕ್ರೇನ್ ಮುಖೇನ ಧರೆಗುರುಳಿರುವ ಶೀಟ್, ಕಬ್ಬಿಣದ ಸಲಾಕೆಗಳನ್ನು ತರಾತುರಿಯಲ್ಲಿ ತೆರವುಗೊಳಿಸುವ ಕಾರ್ಯ ನಡೆಸುತ್ತಿದೆ.
ಧರ್ಮ, ಸಂಸ್ಕೃತಿಯ ಶಿಕ್ಷಣದ ನೆಪದಲ್ಲಿ ಎಲ್.ಕೆ.ಜಿ ಮಕ್ಕಳಿಂದಲೇ ಲಕ್ಷಗಟ್ಟಲೆ ಶುಲ್ಕ ಪೀಕಿಸುತ್ತಿರುವ ಶಾರದಾ ವಿದ್ಯಾಲಯದ ಇಂತಹ ಬೇಜವ್ದಾರಿತನಕ್ಕೆ ವಿದ್ಯಾರ್ಥಿಗಳ ಪೋಷಕರೇ ಗರಂ ಆಗಿದ್ದಾರೆ. ಜಿಲ್ಲಾಡಳಿತವು ಶಾಲಾಡಳಿತದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
Heavy rain in Mangalore, Massive Roofing sheet collpases from 6th floor at Talapady Sharada Vidyalaya school. As the schools and colleges have been declared holiday no casualties have been reported.
21-05-25 05:42 pm
Bangalore Correspondent
Kumki elephants, Pawan Kalyan, Cm Siddaramaia...
21-05-25 02:35 pm
ED Raids, Parameshwar College, Ranya Rao: ಹೋಂ...
21-05-25 01:50 pm
KG Halli Police Sub inspector Nagraj, Wife su...
21-05-25 12:12 pm
Accident in Vijaypura, 5 Killed, VRL volvo bu...
21-05-25 11:33 am
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
21-05-25 07:17 pm
Mangalore Correspondent
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
ಕೊಂಡಾಣ ಜಾತ್ರೆಯಲ್ಲಿ ಮುತ್ತಣ್ಣ ಶೆಟ್ಟಿ ಮುಂಡಾಸು ಕಟ...
20-05-25 06:59 pm
Manipal Rain, Udupi: ಕರಾವಳಿಯಲ್ಲಿ ದಿಢೀರ್ ಮಳೆಗಾ...
20-05-25 02:03 pm
Job Scam Mangalore, Police Suspend, Hireglow...
19-05-25 11:07 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm