ಬ್ರೇಕಿಂಗ್ ನ್ಯೂಸ್
06-07-23 03:17 pm Mangalore Correspondent ಕರಾವಳಿ
ಉಳ್ಳಾಲ, ಜು.6: ದೇವಿ ಜಾತ್ರೆ ನಡೆಸುವ ನೆಪದಲ್ಲಿ ಅಪರಿಚಿತ ಯುವಕರ ತಂಡವೊಂದು ಕೇಸರಿ ಬಟ್ಟೆ ತೊಟ್ಟು ಮಂಗಳೂರಿನಲ್ಲಿ ರಾತ್ರಿ ವೇಳೆಯೂ ಭಿಕ್ಷಾಟನೆಯಲ್ಲಿ ತೊಡಗಿದ್ದು, ಅನುಮಾನಸ್ಪದ ಯುವಕನನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ತೊಕ್ಕೊಟ್ಟು ಕಾಪಿಕಾಡಿನ ರಾಜ್ ಕೇಟರರ್ಸ್ ಕಚೇರಿಗೆ ನಿನ್ನೆ ರಾತ್ರಿ 8 ಗಂಟೆಗೆ ಖಾವಿ ತೊಟ್ಟಿದ್ದ ಯುವಕನೋರ್ವ ಪ್ರವೇಶಿಸಿ ನಮ್ಮೂರಿನ ದೇವಿ ಜಾತ್ರೆಗೆ ಚಂದಾ ನೀಡುವಂತೆ ಕೇಟರಿಂಗ್ ಮಾಲಕ ರಾಜೇಶ್ ಕಾಪಿಕಾಡು ಅವರಲ್ಲಿ ಕೇಳಿದ್ದಾನೆ. ರಾತ್ರಿ ವೇಳೆ ಬಂದಿದ್ದ ಖಾವಿಧಾರಿ ವ್ಯಕ್ತಿ ಸೊಂಟಕ್ಕೆ ಪ್ಲಾಸ್ಟಿಕ್ ಕೊಡದ ಹುಂಡಿ, ದೇವಿಯ ಫೋಟೊ ಅಳವಡಿಸಿದ್ದನ್ನ ಕಂಡು ಅನುಮಾನದಲ್ಲಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕಕ್ಕಾಬಿಕ್ಕಿಯಾದ ಯುವಕ ತನ್ನ ಹೆಸರು ಮುತ್ತಪ್ಪ, ಹೈದರಾಬಾದ್ ಮೂಲದವನೆಂದು ಹೇಳಿದ್ದ. ಅಲ್ಲದೆ, ಮೂವತ್ತು ಜನ ಮಂಗಳೂರು ನಗರದಲ್ಲಿ ಇದೇ ರೀತಿ ಕಲೆಕ್ಷನ್ ಮಾಡುತ್ತಿರುವುದಾಗಿ ಕನ್ನಡ ಭಾಷೆಯಲ್ಲಿ ಹೇಳಿದ್ದಾನೆ. ಯುವಕನ ಬಳಿ ಮೊಬೈಲ್ ಆಗಲಿ,ಯಾವುದೇ ಗುರುತಿನ ಚೀಟಿ ಇಲ್ಲದನ್ನ ಗಮನಿಸಿದ ರಾಜೇಶ್ ಅವರು ಸ್ಥಳಕ್ಕೆ ಉಳ್ಳಾಲ ಪೊಲೀಸರನ್ನ ಕರೆಸಿದ್ದಾರೆ.
ಹೊರ ಜಿಲ್ಲೆಯ ಖಾವಿಧಾರಿ ಯುವಕನನ್ನ ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಯುವಕ ತಾನು ಜಮಖಂಡಿ ಜಿಲ್ಲೆಯವನೆಂದು ಧ್ವಂದ್ವ ಹೇಳಿಕೆ ನೀಡಿದ್ದಾನೆ. ಹೊರ ಜಿಲ್ಲೆಯ ನಿರುದ್ಯೋಗಿ ಯುವಕರು ಖಾವಿ ವೇಷ ತೊಟ್ಟು ರಾತ್ರಿ ವೇಳೆ ಚಂದಾ ಎತ್ತುವ ಸೋಗಲ್ಲಿ ದರೋಡೆ ಮಾಡಲು ಯೋಜನೆ ರೂಪಿಸಿದ್ದಾರೆಯೇ ಎಂಬ ಅನುಮಾನ ಸ್ಥಳೀಯರಲ್ಲಿ ಮೂಡಿದೆ. ಪೊಲೀಸರು ಸಮರ್ಪಕ ತನಿಖೆ ನಡೆಸಿದರೆ ಅಸಲಿಯತ್ತು ಬೆಳಕಿಗೆ ಬರಬಹುದು. ಇಂತಹ ಖಾವಿಧಾರಿಗಳು ಮನೆಗೆ ಬಂದಲ್ಲಿ ಸಾರ್ವಜನಿಕರು ಜಾಗರೂಕರಾಗಿರುವಂತೆ ಪೊಲೀಸರು ಮನವಿ ಮಾಡಿದ್ದಾರೆ.
Ullal police arrest youths dressed in kesari begging for money at night in suspicious way in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm