ಬ್ರೇಕಿಂಗ್ ನ್ಯೂಸ್
06-07-23 03:17 pm Mangalore Correspondent ಕರಾವಳಿ
ಉಳ್ಳಾಲ, ಜು.6: ದೇವಿ ಜಾತ್ರೆ ನಡೆಸುವ ನೆಪದಲ್ಲಿ ಅಪರಿಚಿತ ಯುವಕರ ತಂಡವೊಂದು ಕೇಸರಿ ಬಟ್ಟೆ ತೊಟ್ಟು ಮಂಗಳೂರಿನಲ್ಲಿ ರಾತ್ರಿ ವೇಳೆಯೂ ಭಿಕ್ಷಾಟನೆಯಲ್ಲಿ ತೊಡಗಿದ್ದು, ಅನುಮಾನಸ್ಪದ ಯುವಕನನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ತೊಕ್ಕೊಟ್ಟು ಕಾಪಿಕಾಡಿನ ರಾಜ್ ಕೇಟರರ್ಸ್ ಕಚೇರಿಗೆ ನಿನ್ನೆ ರಾತ್ರಿ 8 ಗಂಟೆಗೆ ಖಾವಿ ತೊಟ್ಟಿದ್ದ ಯುವಕನೋರ್ವ ಪ್ರವೇಶಿಸಿ ನಮ್ಮೂರಿನ ದೇವಿ ಜಾತ್ರೆಗೆ ಚಂದಾ ನೀಡುವಂತೆ ಕೇಟರಿಂಗ್ ಮಾಲಕ ರಾಜೇಶ್ ಕಾಪಿಕಾಡು ಅವರಲ್ಲಿ ಕೇಳಿದ್ದಾನೆ. ರಾತ್ರಿ ವೇಳೆ ಬಂದಿದ್ದ ಖಾವಿಧಾರಿ ವ್ಯಕ್ತಿ ಸೊಂಟಕ್ಕೆ ಪ್ಲಾಸ್ಟಿಕ್ ಕೊಡದ ಹುಂಡಿ, ದೇವಿಯ ಫೋಟೊ ಅಳವಡಿಸಿದ್ದನ್ನ ಕಂಡು ಅನುಮಾನದಲ್ಲಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕಕ್ಕಾಬಿಕ್ಕಿಯಾದ ಯುವಕ ತನ್ನ ಹೆಸರು ಮುತ್ತಪ್ಪ, ಹೈದರಾಬಾದ್ ಮೂಲದವನೆಂದು ಹೇಳಿದ್ದ. ಅಲ್ಲದೆ, ಮೂವತ್ತು ಜನ ಮಂಗಳೂರು ನಗರದಲ್ಲಿ ಇದೇ ರೀತಿ ಕಲೆಕ್ಷನ್ ಮಾಡುತ್ತಿರುವುದಾಗಿ ಕನ್ನಡ ಭಾಷೆಯಲ್ಲಿ ಹೇಳಿದ್ದಾನೆ. ಯುವಕನ ಬಳಿ ಮೊಬೈಲ್ ಆಗಲಿ,ಯಾವುದೇ ಗುರುತಿನ ಚೀಟಿ ಇಲ್ಲದನ್ನ ಗಮನಿಸಿದ ರಾಜೇಶ್ ಅವರು ಸ್ಥಳಕ್ಕೆ ಉಳ್ಳಾಲ ಪೊಲೀಸರನ್ನ ಕರೆಸಿದ್ದಾರೆ.
ಹೊರ ಜಿಲ್ಲೆಯ ಖಾವಿಧಾರಿ ಯುವಕನನ್ನ ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಯುವಕ ತಾನು ಜಮಖಂಡಿ ಜಿಲ್ಲೆಯವನೆಂದು ಧ್ವಂದ್ವ ಹೇಳಿಕೆ ನೀಡಿದ್ದಾನೆ. ಹೊರ ಜಿಲ್ಲೆಯ ನಿರುದ್ಯೋಗಿ ಯುವಕರು ಖಾವಿ ವೇಷ ತೊಟ್ಟು ರಾತ್ರಿ ವೇಳೆ ಚಂದಾ ಎತ್ತುವ ಸೋಗಲ್ಲಿ ದರೋಡೆ ಮಾಡಲು ಯೋಜನೆ ರೂಪಿಸಿದ್ದಾರೆಯೇ ಎಂಬ ಅನುಮಾನ ಸ್ಥಳೀಯರಲ್ಲಿ ಮೂಡಿದೆ. ಪೊಲೀಸರು ಸಮರ್ಪಕ ತನಿಖೆ ನಡೆಸಿದರೆ ಅಸಲಿಯತ್ತು ಬೆಳಕಿಗೆ ಬರಬಹುದು. ಇಂತಹ ಖಾವಿಧಾರಿಗಳು ಮನೆಗೆ ಬಂದಲ್ಲಿ ಸಾರ್ವಜನಿಕರು ಜಾಗರೂಕರಾಗಿರುವಂತೆ ಪೊಲೀಸರು ಮನವಿ ಮಾಡಿದ್ದಾರೆ.
Ullal police arrest youths dressed in kesari begging for money at night in suspicious way in Mangalore.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
18-05-26 10:47 pm
HK News Desk
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm