ಬ್ರೇಕಿಂಗ್ ನ್ಯೂಸ್
06-07-23 03:17 pm Mangalore Correspondent ಕರಾವಳಿ
ಉಳ್ಳಾಲ, ಜು.6: ದೇವಿ ಜಾತ್ರೆ ನಡೆಸುವ ನೆಪದಲ್ಲಿ ಅಪರಿಚಿತ ಯುವಕರ ತಂಡವೊಂದು ಕೇಸರಿ ಬಟ್ಟೆ ತೊಟ್ಟು ಮಂಗಳೂರಿನಲ್ಲಿ ರಾತ್ರಿ ವೇಳೆಯೂ ಭಿಕ್ಷಾಟನೆಯಲ್ಲಿ ತೊಡಗಿದ್ದು, ಅನುಮಾನಸ್ಪದ ಯುವಕನನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ತೊಕ್ಕೊಟ್ಟು ಕಾಪಿಕಾಡಿನ ರಾಜ್ ಕೇಟರರ್ಸ್ ಕಚೇರಿಗೆ ನಿನ್ನೆ ರಾತ್ರಿ 8 ಗಂಟೆಗೆ ಖಾವಿ ತೊಟ್ಟಿದ್ದ ಯುವಕನೋರ್ವ ಪ್ರವೇಶಿಸಿ ನಮ್ಮೂರಿನ ದೇವಿ ಜಾತ್ರೆಗೆ ಚಂದಾ ನೀಡುವಂತೆ ಕೇಟರಿಂಗ್ ಮಾಲಕ ರಾಜೇಶ್ ಕಾಪಿಕಾಡು ಅವರಲ್ಲಿ ಕೇಳಿದ್ದಾನೆ. ರಾತ್ರಿ ವೇಳೆ ಬಂದಿದ್ದ ಖಾವಿಧಾರಿ ವ್ಯಕ್ತಿ ಸೊಂಟಕ್ಕೆ ಪ್ಲಾಸ್ಟಿಕ್ ಕೊಡದ ಹುಂಡಿ, ದೇವಿಯ ಫೋಟೊ ಅಳವಡಿಸಿದ್ದನ್ನ ಕಂಡು ಅನುಮಾನದಲ್ಲಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕಕ್ಕಾಬಿಕ್ಕಿಯಾದ ಯುವಕ ತನ್ನ ಹೆಸರು ಮುತ್ತಪ್ಪ, ಹೈದರಾಬಾದ್ ಮೂಲದವನೆಂದು ಹೇಳಿದ್ದ. ಅಲ್ಲದೆ, ಮೂವತ್ತು ಜನ ಮಂಗಳೂರು ನಗರದಲ್ಲಿ ಇದೇ ರೀತಿ ಕಲೆಕ್ಷನ್ ಮಾಡುತ್ತಿರುವುದಾಗಿ ಕನ್ನಡ ಭಾಷೆಯಲ್ಲಿ ಹೇಳಿದ್ದಾನೆ. ಯುವಕನ ಬಳಿ ಮೊಬೈಲ್ ಆಗಲಿ,ಯಾವುದೇ ಗುರುತಿನ ಚೀಟಿ ಇಲ್ಲದನ್ನ ಗಮನಿಸಿದ ರಾಜೇಶ್ ಅವರು ಸ್ಥಳಕ್ಕೆ ಉಳ್ಳಾಲ ಪೊಲೀಸರನ್ನ ಕರೆಸಿದ್ದಾರೆ.
ಹೊರ ಜಿಲ್ಲೆಯ ಖಾವಿಧಾರಿ ಯುವಕನನ್ನ ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಯುವಕ ತಾನು ಜಮಖಂಡಿ ಜಿಲ್ಲೆಯವನೆಂದು ಧ್ವಂದ್ವ ಹೇಳಿಕೆ ನೀಡಿದ್ದಾನೆ. ಹೊರ ಜಿಲ್ಲೆಯ ನಿರುದ್ಯೋಗಿ ಯುವಕರು ಖಾವಿ ವೇಷ ತೊಟ್ಟು ರಾತ್ರಿ ವೇಳೆ ಚಂದಾ ಎತ್ತುವ ಸೋಗಲ್ಲಿ ದರೋಡೆ ಮಾಡಲು ಯೋಜನೆ ರೂಪಿಸಿದ್ದಾರೆಯೇ ಎಂಬ ಅನುಮಾನ ಸ್ಥಳೀಯರಲ್ಲಿ ಮೂಡಿದೆ. ಪೊಲೀಸರು ಸಮರ್ಪಕ ತನಿಖೆ ನಡೆಸಿದರೆ ಅಸಲಿಯತ್ತು ಬೆಳಕಿಗೆ ಬರಬಹುದು. ಇಂತಹ ಖಾವಿಧಾರಿಗಳು ಮನೆಗೆ ಬಂದಲ್ಲಿ ಸಾರ್ವಜನಿಕರು ಜಾಗರೂಕರಾಗಿರುವಂತೆ ಪೊಲೀಸರು ಮನವಿ ಮಾಡಿದ್ದಾರೆ.
Ullal police arrest youths dressed in kesari begging for money at night in suspicious way in Mangalore.
21-05-25 09:16 pm
Bangalore Correspondent
CM Siddaramaiah, Rain, Visit: ಮಳೆ ಹಾನಿ ಪ್ರದೇಶ...
21-05-25 05:42 pm
Kumki elephants, Pawan Kalyan, Cm Siddaramaia...
21-05-25 02:35 pm
ED Raids, Parameshwar College, Ranya Rao: ಹೋಂ...
21-05-25 01:50 pm
KG Halli Police Sub inspector Nagraj, Wife su...
21-05-25 12:12 pm
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
21-05-25 07:17 pm
Mangalore Correspondent
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
ಕೊಂಡಾಣ ಜಾತ್ರೆಯಲ್ಲಿ ಮುತ್ತಣ್ಣ ಶೆಟ್ಟಿ ಮುಂಡಾಸು ಕಟ...
20-05-25 06:59 pm
Manipal Rain, Udupi: ಕರಾವಳಿಯಲ್ಲಿ ದಿಢೀರ್ ಮಳೆಗಾ...
20-05-25 02:03 pm
Job Scam Mangalore, Police Suspend, Hireglow...
19-05-25 11:07 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm