ಬ್ರೇಕಿಂಗ್ ನ್ಯೂಸ್
06-07-23 04:53 pm Mangalore Correspondent ಕರಾವಳಿ
ಮಂಗಳೂರು , ಜುಲೈ 6: ಕರಾವಳಿಯಲ್ಲಿ ಭಾರೀ ಗಾಳಿ, ಮಳೆ ನಾಲ್ಕನೇ ದಿನವೂ ಮುಂದುವರೆದಿದೆ. ಮೂಡುಬಿದ್ರೆ ಬಳಿಯ ನೆಲ್ಲಿಕಾರಿನ ಮಾಂಟ್ರಾಡಿ ಎಂಬಲ್ಲಿ ವ್ಯಕ್ತಿಯೊಬ್ಬರು ಗುರುವಾರ ಬೆಳಗ್ಗೆ ಕೆರೆಗೆ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ನೆಲ್ಲಿಕಾರು ಗ್ರಾಮ ಪಂಚಾಯಿತಿ ಕಚೇರಿ ಬಳಿಯ ನಿವಾಸಿ ನಿರಂಜನ್ (42) ಮೃತಪಟ್ಡವರು. ವಿಕಲ ಚೇತನರಾಗಿದ್ದ ಅವರು ಅವಿವಾಹಿತರಾಗಿದ್ದರು. ನಿನ್ನೆ ಸಂಜೆಯಿಂದ ಕಾಣೆಯಾಗಿದ್ದ ಬಗ್ಗೆ ಮನೆಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಇಂದು ಬೆಳಗ್ಗೆ ತೋಟದ ಕೆರೆಗೆ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿರಂಜನ್ ತಂದೆ, ತಾಯಿ ತೀರಿಕೊಂಡಿದ್ದು ಸೋದರರು ಕೊರೊನಾ ಸಂದರ್ಭದಲ್ಲಿ ಸಾವಿಗೀಡಾಗಿದ್ದರು. ಆನಂತರ, ಭಾವನ ಅಂಗಡಿಯಲ್ಲಿ ಕೆಲಸ ಮಾಡುತ್ತ ಅವರ ಮನೆಯಲ್ಲೇ ವಾಸವಿದ್ದರು.

ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಬೈಲಾರೆ ಎಂಬಲ್ಲಿ ಭಾರೀ ಮಳೆಯ ಕಾರಣ ಮೂರು ಮನೆಗಳು ಜಲಾವೃತಗೊಂಡಿದೆ. ಕಲ್ಯಾಣಿ ಪೂಜಾರ್ತಿ, ಲಲಿತಾ ಪೂಜಾರ್ತಿ ಹಾಗೂ ಉದಯ ಎಂಬವರ ಮನೆಗಳಿಗೆ ನೀರು ನುಗ್ಗಿದ್ದು ಅಪಾರ ಹಾನಿ ಸಂಭವಿಸಿದೆ.
ಬಂಟ್ವಾಳದ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಮನೆ ಮುಂಭಾಗ ನಿಲ್ಲಿಸಿದ್ದ ಓಮ್ನಿ ಕಾರಿನ ಮೇಲೆ ಮರ ಬಿದ್ದು ವಾಹನ ಸಂಪೂರ್ಣ ಜಖಂಗೊಂಡಿದೆ. ಕೊಡಾಜೆ ನಿವಾಸಿ ಇಸ್ಮಾಯಿಲ್ ಎಂಬವರು ತನ್ನ ಓಮ್ನಿ ಕಾರನ್ನು ಮನೆಯ ಸಮೀಪ ನಿಲ್ಲಿಸಿದ್ದರು. ಮಳೆ ಗಾಳಿಗೆ ಮಾವಿನ ಮರ ಓಮ್ನಿ ಕಾರಿನ ಮೇಲೆ ಉರುಳಿ ಬಿದ್ದಿದೆ. ಇದರಿಂದ ಕಾರು ಸಂಪೂರ್ಣ ಜಖಂಗೊಂಡಿದೆ.
Moodbidri heavy rains, Man dies after falling into lake. Three houses filled with rain water.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm