ಬ್ರೇಕಿಂಗ್ ನ್ಯೂಸ್
03-11-20 01:16 pm Mangalore Correspondent ಕರಾವಳಿ
ಉಳ್ಳಾಲ, ನವಂಬರ್ 03 : ಹೇಳುವುದೊಂದು, ಮಾಡುವುದು ಇನ್ನೊಂದು ಅಂತಾರಲ್ಲ.. ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ ಕೇಸ್ ಹಾಕುವ ಟ್ರಾಫಿಕ್ ಪೊಲೀಸರೇ ಕಾನೂನು ಉಲ್ಲಂಘಿಸಿದ ಪ್ರಸಂಗ ತೊಕ್ಕೊಟ್ಟಿನಲ್ಲಿ ನಡೆದಿದೆ.
ತೊಕ್ಕೊಟ್ಟು ಮೇಲ್ಸೇತುವೆ ಕೊನೆಯಲ್ಲಿ ಇತ್ತೀಚೆಗೆ ಅಪಘಾತ ನಡೆದ ಬಳಿಕ ಟ್ರಾಫಿಕ್ ಪೊಲೀಸರು ನಿಗಾ ಇಟ್ಟಿದ್ದಾರೆ. ಅಬಳಿಕ ಉಳ್ಳಾಲಕ್ಕೆ ತಿರುಗುತ್ತಿದ್ದ ಪಾಸಿಂಗ್ ಸೌಲಭ್ಯವನ್ನು ಬಂದ್ ಮಾಡಿದ್ದು ಮುಂದೆ ಹೋಗಿ ತಿರುವು ಪಡೆಯಲು ಅವಕಾಶ ಕೊಡಲಾಗಿದೆ. ಹೀಗಾಗಿ ಉಳ್ಳಾಲದತ್ತ ಹೋಗುವ - ಬರುವ ಜನರು ಸಂಕಷ್ಟ ಪಡುತ್ತಿದ್ದಾರೆ.
ಈ ಮಧ್ಯೆ, ತೊಕ್ಕೊಟ್ಟು- ಕಾಪಿಕಾಡು ಹೆದ್ದಾರಿಯಲ್ಲಿ ( ಕೊಲ್ಯದಿಂದ- ತೊಕ್ಕೊಟ್ಟಿನ ಕಡೆಗೆ) ಪೊಲೀಸರ ವಾಹನ ವಿರುದ್ಧ ದಿಕ್ಕಿನಲ್ಲಿ ಚಲಿಸಿದೆ. ಜನಸಾಮಾನ್ಯರು ಇಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಿಸಿದರೆ ಕಾನೂನು ಪಾಠ ಹೇಳುವ ಪೊಲೀಸರೇ ರೂಲ್ಸ್ ಬ್ರೇಕ್ ಮಾಡಿರುವುದನ್ನ ಕಂಡ ಜನರು ಜನರಿಗೊಂದು, ಪೊಲೀಸರಿಗೊಂದು ಕಾನೂನೇ ಎಂದು ಪ್ರಶ್ನಿಸುವಂತಾಗಿದೆ.


ತೊಕ್ಕೊಟ್ಟು ಓವರ್ ಬ್ರಿಡ್ಜ್ ಕಡೆಯಿಂದ ಎರಡನೇ ಕೊಲ್ಯದ ವರೆಗಿನ ಸುಮಾರು 2 ಕಿ.ಮೀ ರಸ್ತೆಯಲ್ಲಿ ವಾಹನಗಳು ಹೆದ್ದಾರಿ ಕ್ರಾಸ್ ಮಾಡಲು ಯಾವುದೇ ತಿರುವುಗಳಿಲ್ಲ. ಸಂಬಂಧ ಪಟ್ಟ ನವಯುಗ ಕನ್ಸ್ಟ್ರಕ್ಷನ್ ಕಂಪನಿಯವರು ಇದುವರೆಗೂ ಇಲ್ಲಿ ಸರ್ವಿಸ್ ರಸ್ತೆ ನಿರ್ಮಿಸಿಲ್ಲ. ಪರಿಣಾಮ ಕೊಲ್ಯದಿಂದ- ಓವರ್ ಬ್ರಿಡ್ಜ್ ನ ನಡುವೆ ಓಡಾಡುವ ವಾಹನ ಸವಾರರು ಸಮಯದ ಅಭಾವದಿಂದಲೋ, ದುಬಾರಿ ಇಂಧನ ಉಳಿಸುವ ಆಸೆಯಿಂದಲೋ ಇಲ್ಲಿ ನಿತ್ಯವೂ ರಾಂಗ್ ಸೈಡ್ ನಿಂದ ಸಂಚರಿಸಿ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಬಿದ್ದು ಫೈನ್ ಕಟ್ಟಿಸಿಕೊಳ್ತಾರೆ.
ಈ ಪ್ರದೇಶದಲ್ಲಿ ಸರ್ವಿಸ್ ರಸ್ತೆ ಇಲ್ಲದೇ ಇರುವುದೇ ವಾಹನ ಸವಾರರು ರಾಂಗ್ ಸೈಡ್ ಚಲಿಸಲು ಮುಖ್ಯ ಕಾರಣವಾಗಿದ್ದರೂ, ಪೊಲೀಸರು ಸಂಬಂಧ ಪಟ್ಟ ನವಯುಗ ಕಂಪನಿಯ ವಿರುದ್ಧ ಕೇಸ್ ಹಾಕುವ ಧೈರ್ಯ ಮಾಡದೆ ಬಡ ವಾಹನ ಸವಾರರ ಮೇಲೆ ಫೈನ್ ಹಾಕಿ ದರ್ಪ ತೋರಿಸುತ್ತಾರೆ !
ಇಂದು ಟ್ರಾಫಿಕ್ ಪೊಲೀಸರೇ ಈ ರಸ್ತೆಯಲ್ಲಿ ರಾಂಗ್ ಸೈಡಲ್ಲಿ ಸಂಚರಿಸಿ, ಟ್ರಾಫಿಕ್ ಉಲ್ಲಂಘಿಸುವ ಮಂದಿಗೆ ಮಾದರಿಯಾಗಿದ್ದಾರೆ !!
A Traffic Police Jeep violating traffic rules by going on the opposite direction at Thokottu near the bridge has gone viral on social media.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm