ಬ್ರೇಕಿಂಗ್ ನ್ಯೂಸ್
03-11-20 01:55 pm Mangalore Correspondent ಕರಾವಳಿ
ಪುತ್ತೂರು, ನವೆಂಬರ್ 03: ಪುತ್ತೂರು ನಗರಸಭೆ ಅಧ್ಯಕ್ಷರಾಗಿ ಬಿಜೆಪಿಯ ಕೆ. ಜೀವಂಧರ್ ಜೈನ್ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ವಿದ್ಯಾ ಆರ್. ಗೌರಿ ಅವಿರೋಧ ಆಯ್ಕೆಯಾಗಿದ್ದಾರೆ. ಪುತ್ತೂರು ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ಚುನಾವಣಾಧಿಕಾರಿಯಾಗಿ ಪ್ರಕ್ರಿಯೆ ನಡೆಸಿಕೊಟ್ಟರು. ನಗರಸಭಾ ಪೌರಾಯುಕ್ತೆ ರೂಪಾ ಟಿ ಶೆಟ್ಟಿ ಚುನಾವಣಾ ಪ್ರಕ್ರಿಯೆಯಲ್ಲಿ ಸಹಕರಿಸಿದರು.
31 ಸದಸ್ಯ ಬಲದ ಪುತ್ತೂರು ನಗರಸಭೆಯಲ್ಲಿ 25 ಬಿಜೆಪಿ, 5 ಕಾಂಗ್ರೆಸ್ ಹಾಗೂ ಓರ್ವ ಎಸ್ಡಿಪಿಐ ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಜೀವಂಧರ್ ಜೈನ್ ಮತ್ತು ಕಾಂಗ್ರೆಸ್ನಿಂದ ರಾಬಿನ್ ತಾವ್ರೋ ಸ್ಪರ್ಧಿಸಿದ್ದರು. ಜೀವಂಧರ್ ಜೈನ್ ಅವರು ಶಾಸಕರ, ಸಂಸದರ ಮತಗಳು ಸೇರಿದಂತೆ ಒಟ್ಟು 27 ಮತಗಳನ್ನು ಪಡೆದು ವಿಜಯ ಸಾಧಿಸಿದರು. ರಾಬಿನ್ ತಾವ್ರೋ ಅವರಿಗೆ 3 ಮತಗಳು ಲಭಿಸಿದವು. ಕಾಂಗ್ರೆಸಿನ ಇಬ್ಬರು ಸದಸ್ಯರು ಗೈರು ಹಾಜರಾಗಿದ್ದರು. ಎಸ್ಡಿಪಿಐ ಸದಸ್ಯೆ ತಟಸ್ಥರಾಗಿದ್ದರು. ಉಪಾಧ್ಯಕ್ಷರಾಗಿ ಕಾಂಗ್ರೆಸ್ನಿಂದ ಯಾರೂ ಸ್ಪರ್ಧಿಸದ ಹಿನ್ನಲೆಯಲ್ಲಿ ಬಿಜೆಪಿಯ ವಿದ್ಯಾಗೌರಿ ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾ ಪ್ರಕ್ರಿಯೆಯ ಬಳಿಕ ನಡೆದ ಅಭಿನಂದನಾ ಕಾರ್ಯಕ್ರಮ ನಡೆಯಿತು. ಸಂಸದ ನಳಿನ್ ಕುಮಾರ್ ಮತ್ತು ಶಾಸಕ ಸಂಜೀವ ಮಠಂದೂರು ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಶುಭ ಹಾರೈಸಿದರು. ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಬಿಜೆಪಿ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಕ್ಯಾಂಪ್ಕೋ ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಮುಂದಾಳುಗಳಾದ ಗೋಪಾಲಕೃಷ್ಣ ಹೇರಳೆ, ಎಸ್. ಅಪ್ಪಯ್ಯ ಮಣಿಯಾಣಿ, ಆರ್.ಸಿ. ನಾರಾಯಣ ಮತ್ತಿತರರು ಉಪಸ್ಥಿತರಿದ್ದರು.
K Jeevandhar Jain of the BJP was elected as the president of Puttur city municipality while Vidya R Gowri of the same party was elected unopposed to the post of the vice president on Monday November 2.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm