ಬ್ರೇಕಿಂಗ್ ನ್ಯೂಸ್
03-11-20 01:55 pm Mangalore Correspondent ಕರಾವಳಿ
ಪುತ್ತೂರು, ನವೆಂಬರ್ 03: ಪುತ್ತೂರು ನಗರಸಭೆ ಅಧ್ಯಕ್ಷರಾಗಿ ಬಿಜೆಪಿಯ ಕೆ. ಜೀವಂಧರ್ ಜೈನ್ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ವಿದ್ಯಾ ಆರ್. ಗೌರಿ ಅವಿರೋಧ ಆಯ್ಕೆಯಾಗಿದ್ದಾರೆ. ಪುತ್ತೂರು ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ಚುನಾವಣಾಧಿಕಾರಿಯಾಗಿ ಪ್ರಕ್ರಿಯೆ ನಡೆಸಿಕೊಟ್ಟರು. ನಗರಸಭಾ ಪೌರಾಯುಕ್ತೆ ರೂಪಾ ಟಿ ಶೆಟ್ಟಿ ಚುನಾವಣಾ ಪ್ರಕ್ರಿಯೆಯಲ್ಲಿ ಸಹಕರಿಸಿದರು.
31 ಸದಸ್ಯ ಬಲದ ಪುತ್ತೂರು ನಗರಸಭೆಯಲ್ಲಿ 25 ಬಿಜೆಪಿ, 5 ಕಾಂಗ್ರೆಸ್ ಹಾಗೂ ಓರ್ವ ಎಸ್ಡಿಪಿಐ ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಜೀವಂಧರ್ ಜೈನ್ ಮತ್ತು ಕಾಂಗ್ರೆಸ್ನಿಂದ ರಾಬಿನ್ ತಾವ್ರೋ ಸ್ಪರ್ಧಿಸಿದ್ದರು. ಜೀವಂಧರ್ ಜೈನ್ ಅವರು ಶಾಸಕರ, ಸಂಸದರ ಮತಗಳು ಸೇರಿದಂತೆ ಒಟ್ಟು 27 ಮತಗಳನ್ನು ಪಡೆದು ವಿಜಯ ಸಾಧಿಸಿದರು. ರಾಬಿನ್ ತಾವ್ರೋ ಅವರಿಗೆ 3 ಮತಗಳು ಲಭಿಸಿದವು. ಕಾಂಗ್ರೆಸಿನ ಇಬ್ಬರು ಸದಸ್ಯರು ಗೈರು ಹಾಜರಾಗಿದ್ದರು. ಎಸ್ಡಿಪಿಐ ಸದಸ್ಯೆ ತಟಸ್ಥರಾಗಿದ್ದರು. ಉಪಾಧ್ಯಕ್ಷರಾಗಿ ಕಾಂಗ್ರೆಸ್ನಿಂದ ಯಾರೂ ಸ್ಪರ್ಧಿಸದ ಹಿನ್ನಲೆಯಲ್ಲಿ ಬಿಜೆಪಿಯ ವಿದ್ಯಾಗೌರಿ ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾ ಪ್ರಕ್ರಿಯೆಯ ಬಳಿಕ ನಡೆದ ಅಭಿನಂದನಾ ಕಾರ್ಯಕ್ರಮ ನಡೆಯಿತು. ಸಂಸದ ನಳಿನ್ ಕುಮಾರ್ ಮತ್ತು ಶಾಸಕ ಸಂಜೀವ ಮಠಂದೂರು ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಶುಭ ಹಾರೈಸಿದರು. ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಬಿಜೆಪಿ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಕ್ಯಾಂಪ್ಕೋ ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಮುಂದಾಳುಗಳಾದ ಗೋಪಾಲಕೃಷ್ಣ ಹೇರಳೆ, ಎಸ್. ಅಪ್ಪಯ್ಯ ಮಣಿಯಾಣಿ, ಆರ್.ಸಿ. ನಾರಾಯಣ ಮತ್ತಿತರರು ಉಪಸ್ಥಿತರಿದ್ದರು.
K Jeevandhar Jain of the BJP was elected as the president of Puttur city municipality while Vidya R Gowri of the same party was elected unopposed to the post of the vice president on Monday November 2.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm