ಬ್ರೇಕಿಂಗ್ ನ್ಯೂಸ್
08-07-23 10:38 pm Mangalore Correspondent ಕರಾವಳಿ
ಬಂಟ್ವಾಳ, ಜುಲೈ 8: ಗುಡ್ಡ ಜರಿದು ಮಹಿಳೆ ಬಲಿಯಾದ ಸಜಿಪಮುನ್ನೂರು ಗ್ರಾಮದ ನಂದಾವರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದ್ದು ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಮಾಜಿ ಸಚಿವ ರಮಾನಾಥ ರೈ ಜೊತೆಗೆ ಸಚಿವರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಸ್ಥಳೀಯರ ಜೊತೆಗೆ ಮಾತುಕತೆ ನಡೆಸಿದರು. ಭೇಟಿ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಸಚಿವ ದಿನೇಶ್ ಗುಂಡೂರಾವ್, ಈಗಾಗಲೇ ಸರಕಾರದಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ. ಮನೆ ರಿಪೇರಿಗೆ ಕೂಡ ಪರಿಹಾರ ಕಲ್ಪಿಸುವ ಬಗ್ಗೆ ವ್ಯವಸ್ಥೆ ಮಾಡಲು ಸೂಚಿಸಿದ್ದೇನೆ. ಅದಕ್ಕೆ ಏನೆಲ್ಲ ಆಗಬೇಕು ಎಂದು ಸ್ಥಳೀಯ ಅಧಿಕಾರಿಗಳಲ್ಲಿ ವರದಿ ಕೇಳಿದ್ದೇನೆ ಎಂದರು.
ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಹೆಣ್ಮಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರಕಾರ ಭರಿಸಲಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಅವರನ್ನು ಆಸ್ಪತ್ರೆಗೆ ಹೋಗಿ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ್ದೇನೆ. ಘಟನೆ ನಡೆದ ಪ್ರದೇಶದಲ್ಲಿ ಇನ್ನೂ ಹಲವಾರು ಮನೆಗಳು ಅಪಾಯದಲ್ಲಿವೆ. ಈ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದ್ದು ಅಪಾಯಕ್ಕೀಡಾದವರನ್ನು ಸ್ಥಳಾಂತರಿಸಲು ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ. ಗುಡ್ಡ ಕುಸಿತ ಆಗದಂತೆ ತಡೆಗೋಡೆ ನಿರ್ಮಾಣದ ಬಗ್ಗೆ ಚಿಂತನೆ ನಡೆಸಲಾಗಿದೆ.
ತಡೆಗೋಡೆ ನಿರ್ಮಾಣಕ್ಕೆ ಕ್ರಿಯಾಯೋಜನೆ ತಯಾರಿಸಲು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ. ನಂದಾವರದಲ್ಲಿ ನಿನ್ನೆ ಬೆಳಗ್ಗೆ ನಡೆದಿದ್ದ ಗುಡ್ಡ ಕುಸಿತ ಘಟನೆಯಲ್ಲಿ ಮನೆಯೊಳಗೆ ಸಿಲುಕಿದ್ದ ಮಹಿಳೆ ಝರೀನಾ(46) ಸಾವನ್ನಪ್ಪಿದ್ದರು. ಝರೀನಾ ಅವರ ಪುತ್ರಿ ಶಫಾ(20) ರನ್ನು ಸ್ಥಳೀಯರು ಸೇರಿ ರಕ್ಷಣೆ ಮಾಡಿದ್ದರು.
ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಬೆಳ್ತಂಗಡಿಯಲ್ಲಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಿದ್ದರು. ಇದಕ್ಕೂ ಮುನ್ನ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Rain related mishaps in Mangalore Dinesh Gundu Rao Karnataka Minister warns govt officials against laxity. Officials dealing with rain-related calamities will be directly responsible for any lapses on their part in taking precautionary measures in affected areas, Dakshina Kannada district-in-charge Minister Dinesh Gundu Rao has said.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 11:27 am
Mangalore Correspondent
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm