ಬ್ರೇಕಿಂಗ್ ನ್ಯೂಸ್
03-11-20 02:19 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 03: ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನಕ್ಕೆ ಹೋದ ಅನುಭವ ಆಗುತ್ತದೆ ಎಂದು ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಆರೆಸ್ಸೆಸ್ ಮುಖಂಡ ಪ್ರಭಾಕರ ಭಟ್, ತಮ್ಮ ಹೇಳಿಕೆಗೆ ಬದ್ಧನಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ.
ನನ್ನ ಹೇಳಿಕೆ ನೂರಕ್ಕೆ ನೂರು ಸತ್ಯ. ಎಲ್ಲರೂ ಬಾಯಿ ಮಾತಿನಲ್ಲಿ ಹೇಳುವುದನ್ನು ನಾನು ಭಾಷಣದಲ್ಲಿ ಹೇಳಿದ್ದೇನೆ. ಹಿಂದು ಸಮಾಜವನ್ನು ಎಚ್ಚರಿಸಲು ಈ ಹೇಳಿಕೆ ನೀಡಿದ್ದೇನೆಯೇ ಹೊರತು ಬೇರೇನೂ ಉದ್ದೇಶವಿಲ್ಲ. ಉಳ್ಳಾಲ ಭಾಗದಲ್ಲಿ ಕಳೆದ 20 ವರ್ಷಗಳಿಂದ ಒಂದೇ ವರ್ಗದವರು ಶಾಸಕರಾಗಿ ಬರುತ್ತಿದ್ದಾರೆ. ತಾಕತ್ತಿದ್ದರೆ ಕಾಂಗ್ರೆಸಿನವರು ಹಿಂದು ವ್ಯಕ್ತಿಯನ್ನು ಅಲ್ಲಿ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಲಿ. ಆಮೇಲೆ ನನ್ನ ಹೇಳಿಕೆ ಬಗ್ಗೆ ವಿಮರ್ಶೆ ಮಾಡುತ್ತೇನೆ ಎಂದು ಕಲ್ಲಡ್ಕ ಸವಾಲು ಹಾಕಿದ್ದಾರೆ.
ಪಾಕಿಸ್ತಾನ ಉದಯವಾಗುವುದಕ್ಕಿಂತ ಮೊದಲಿನ ಸ್ಥಿತಿ ಈಗ ಉಳ್ಳಾಲದಲ್ಲಿದೆ. ಕೇರಳದ ಮಲಪ್ಪುರಂ ಜಿಲ್ಲೆ ನಮ್ಮ ದೇಶದ ಒಳಗಿದ್ದರೂ ಅದು ಈಗ ನಮ್ಮ ಕೈಯಲ್ಲಿಲ್ಲ. ಇದೇ ರೀತಿ ಮುಂದಿನ 15 ವರ್ಷದಲ್ಲಿ ಉಳ್ಳಾಲದ ಸ್ಥಿತಿಯಾಗುತ್ತದೆ. ಅದರಲ್ಲಿ ಎರಡು ಮಾತಿಲ್ಲ ಎಂದು ಖಡಕ್ಕಾಗಿಯೇ ಕಲ್ಲಡ್ಕ ಪ್ರಭಾಕರ ಭಟ್ ತನ್ನ ಮಾತಿನ ಬಗ್ಗೆ ಬದ್ಧತೆ ಪ್ರದರ್ಶಿಸಿದ್ದಾರೆ.
ಎರಡು ದಿನಗಳ ಹಿಂದೆ ತಲಪಾಡಿ ಬಳಿಯ ಕಿನ್ಯದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಲ್ಲಡ್ಕ ಭಟ್, ಹಿಂದು ಜನಸಂಖ್ಯೆ ಕಡಿಮೆಯಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸುತ್ತಾ ಪಾಕಿಸ್ತಾನ ಉಗಮದ ಬಗ್ಗೆ ಹೇಳಿದ್ದರು. ಅವರ ವರ್ಗ ಹೆಚ್ಚಾದಾಗ ಪಾಕ್ ಉದಯವಾಗಿತ್ತು. ಈಗ ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನಕ್ಕೆ ಹೋದಂತಾಗುತ್ತದೆ ಎಂದು ಹೇಳಿದ್ದರು.
Stirring yet another controversty, RSS leader Kalladka Bhat said that the Muslim-dominated Ullal constituency has become 'like Pakistan'. If not Give rise to a Hindu leader as a MLA from ullal he said.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm