ಬ್ರೇಕಿಂಗ್ ನ್ಯೂಸ್
10-07-23 07:57 pm Mangalore Correspondent ಕರಾವಳಿ
ಮಂಗಳೂರು, ಜುಲೈ 10: ದಿಗಂಬರ ಜೈನ ಮುನಿಯನ್ನು ಹತ್ಯೆಗೈದ ಘಟನೆಯನ್ನು ಖಂಡಿಸಿ ಮಂಗಳೂರಿನಲ್ಲಿ ಜೈನ ಸಮಾಜದ ಪ್ರತಿನಿಧಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಅಲ್ಲದೆ, ಕೃತ್ಯದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ.
ಮೂಡುಬಿದ್ರೆ ಬಸದಿಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನೇತೃತ್ವದಲ್ಲಿ ನಗರದ ಮಿನಿ ವಿಧಾನಸೌಧ ಬಳಿ ಸೇರಿದ ಸಮುದಾಯದ ಪ್ರತಿನಿಧಿಗಳು ಜಿಲ್ಲಾಧಿಕಾರಿ ಕಚೇರಿ ವರೆಗೆ ಮೌನ ಮೆರವಣಿಗೆ ನಡೆಸಿದ್ದಾರೆ. ಯಾವುದೇ ಲೌಕಿಕ ಸಂಬಂಧಗಳನ್ನು ಇಟ್ಟುಕೊಳ್ಳದೆ, ಕೇವಲ ಆಧ್ಯಾತ್ಮ ಜೀವನ ನಡೆಸುತ್ತಿದ್ದ ದಿಗಂಬರ ಜೈನ ಮುನಿಗಳನ್ನು ಈ ರೀತಿ ಹತ್ಯೆ ನಡೆಸಿರುವುದು ಅತ್ಯಂತ ಹೇಯ ಕೃತ್ಯ. ಕೃತ್ಯದಲ್ಲಿ ಯಾರೇ ಭಾಗಿಯಾಗರಲಿ, ಅವರಿಗೆ ಶೀಘ್ರದಲ್ಲಿ ಗಲ್ಲು ಶಿಕ್ಷೆಯಾಗಬೇಕು. ಮುಂದೆ ಈ ರೀತಿಯ ಕೃತ್ಯ ಆಗದಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಜೈನ ಸಮಾಜದ ಸಂತರಿಗೆ ಭದ್ರತೆ ನೀಡಬೇಕು ಎಂದು ಇದೇ ವೇಳೆ ಮಾತನಾಡಿದ ಜೈನ್ ಮಿಲನ್ ಮಾಜಿ ಅಧ್ಯಕ್ಷ ಪುಷ್ಪರಾಜ್ ಜೈನ್ ಆಗ್ರಹಿಸಿದ್ದಾರೆ.


ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮಾತನಾಡಿ, ನಾಗರಿಕ ಸಮಾಜ ತಲೆತಗ್ಗಿಸುವ ರೀತಿಯ ಕೃತ್ಯ ನಡೆದಿದೆ. ಅಮಾಯಕ ಅದರಲ್ಲೂ ಎಲ್ಲವನ್ನೂ ಬಿಟ್ಟ ದಿಗಂಬರನಾಗಿದ್ದ ಸಂತರೊಬ್ಬರನ್ನು ಕೊಲ್ಲುವುದು ಧರ್ಮಕ್ಕಾಗಿ ಜೀವನ ಸವೆಸುತ್ತಿರುವ ಸಂತರಲ್ಲಿ ಭಯ ಮೂಡಿಸಿದೆ. ಇದಕ್ಕಾಗಿ ಜೈನ ಸಮಾಜದ ಆಶ್ರಮಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಬೇಕು. ಕೃತ್ಯದ ತನಿಖೆ ಬಗ್ಗೆ ವಿಶೇಷ ತನಿಖಾ ತಂಡ ಮತ್ತು ವಿಶೇಷ ನ್ಯಾಯಾಧೀಶರನ್ನು ನೇಮಕ ಮಾಡಬೇಕು ಎಂದು ಹೇಳಿದರು.


ಜೈನ್ ಮಿಲನ್ ಸಂಘದ ಸುದರ್ಶನ್ ಜೈನ್ ಪ್ರಸ್ತಾವಿಸಿ, ನಾವು ಈ ಬಗ್ಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸುತ್ತೇವೆ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಜೊತೆಗೆ, ಜೈನ ಸಮುದಾಯದ ಸಂತರಿಗೆ ಮುಂದೆ ಯಾವತ್ತೂ ಈ ರೀತಿಯಾಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾ ಮೆರವಣಿಗೆಯಲ್ಲಿ ಮಹಿಳೆಯರು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.
Jain Monk Murder, Jain Community in Mangalore hold protest, demand hanging of Accused. The protest was lead by Moodabidri Basati Priest.Days after the murder of Jain seer Acharya Kamakumar Nandi Maharaj in Karnataka’s Belagavi district, the BJP and a few right-wing groups Monday demanded a Central Bureau Investigation (CBI) probe into the crime.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm