ಬ್ರೇಕಿಂಗ್ ನ್ಯೂಸ್
10-07-23 07:57 pm Mangalore Correspondent ಕರಾವಳಿ
ಮಂಗಳೂರು, ಜುಲೈ 10: ದಿಗಂಬರ ಜೈನ ಮುನಿಯನ್ನು ಹತ್ಯೆಗೈದ ಘಟನೆಯನ್ನು ಖಂಡಿಸಿ ಮಂಗಳೂರಿನಲ್ಲಿ ಜೈನ ಸಮಾಜದ ಪ್ರತಿನಿಧಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಅಲ್ಲದೆ, ಕೃತ್ಯದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ.
ಮೂಡುಬಿದ್ರೆ ಬಸದಿಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನೇತೃತ್ವದಲ್ಲಿ ನಗರದ ಮಿನಿ ವಿಧಾನಸೌಧ ಬಳಿ ಸೇರಿದ ಸಮುದಾಯದ ಪ್ರತಿನಿಧಿಗಳು ಜಿಲ್ಲಾಧಿಕಾರಿ ಕಚೇರಿ ವರೆಗೆ ಮೌನ ಮೆರವಣಿಗೆ ನಡೆಸಿದ್ದಾರೆ. ಯಾವುದೇ ಲೌಕಿಕ ಸಂಬಂಧಗಳನ್ನು ಇಟ್ಟುಕೊಳ್ಳದೆ, ಕೇವಲ ಆಧ್ಯಾತ್ಮ ಜೀವನ ನಡೆಸುತ್ತಿದ್ದ ದಿಗಂಬರ ಜೈನ ಮುನಿಗಳನ್ನು ಈ ರೀತಿ ಹತ್ಯೆ ನಡೆಸಿರುವುದು ಅತ್ಯಂತ ಹೇಯ ಕೃತ್ಯ. ಕೃತ್ಯದಲ್ಲಿ ಯಾರೇ ಭಾಗಿಯಾಗರಲಿ, ಅವರಿಗೆ ಶೀಘ್ರದಲ್ಲಿ ಗಲ್ಲು ಶಿಕ್ಷೆಯಾಗಬೇಕು. ಮುಂದೆ ಈ ರೀತಿಯ ಕೃತ್ಯ ಆಗದಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಜೈನ ಸಮಾಜದ ಸಂತರಿಗೆ ಭದ್ರತೆ ನೀಡಬೇಕು ಎಂದು ಇದೇ ವೇಳೆ ಮಾತನಾಡಿದ ಜೈನ್ ಮಿಲನ್ ಮಾಜಿ ಅಧ್ಯಕ್ಷ ಪುಷ್ಪರಾಜ್ ಜೈನ್ ಆಗ್ರಹಿಸಿದ್ದಾರೆ.
ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮಾತನಾಡಿ, ನಾಗರಿಕ ಸಮಾಜ ತಲೆತಗ್ಗಿಸುವ ರೀತಿಯ ಕೃತ್ಯ ನಡೆದಿದೆ. ಅಮಾಯಕ ಅದರಲ್ಲೂ ಎಲ್ಲವನ್ನೂ ಬಿಟ್ಟ ದಿಗಂಬರನಾಗಿದ್ದ ಸಂತರೊಬ್ಬರನ್ನು ಕೊಲ್ಲುವುದು ಧರ್ಮಕ್ಕಾಗಿ ಜೀವನ ಸವೆಸುತ್ತಿರುವ ಸಂತರಲ್ಲಿ ಭಯ ಮೂಡಿಸಿದೆ. ಇದಕ್ಕಾಗಿ ಜೈನ ಸಮಾಜದ ಆಶ್ರಮಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಬೇಕು. ಕೃತ್ಯದ ತನಿಖೆ ಬಗ್ಗೆ ವಿಶೇಷ ತನಿಖಾ ತಂಡ ಮತ್ತು ವಿಶೇಷ ನ್ಯಾಯಾಧೀಶರನ್ನು ನೇಮಕ ಮಾಡಬೇಕು ಎಂದು ಹೇಳಿದರು.
ಜೈನ್ ಮಿಲನ್ ಸಂಘದ ಸುದರ್ಶನ್ ಜೈನ್ ಪ್ರಸ್ತಾವಿಸಿ, ನಾವು ಈ ಬಗ್ಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸುತ್ತೇವೆ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಜೊತೆಗೆ, ಜೈನ ಸಮುದಾಯದ ಸಂತರಿಗೆ ಮುಂದೆ ಯಾವತ್ತೂ ಈ ರೀತಿಯಾಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾ ಮೆರವಣಿಗೆಯಲ್ಲಿ ಮಹಿಳೆಯರು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.
Jain Monk Murder, Jain Community in Mangalore hold protest, demand hanging of Accused. The protest was lead by Moodabidri Basati Priest.Days after the murder of Jain seer Acharya Kamakumar Nandi Maharaj in Karnataka’s Belagavi district, the BJP and a few right-wing groups Monday demanded a Central Bureau Investigation (CBI) probe into the crime.
21-05-25 09:16 pm
Bangalore Correspondent
CM Siddaramaiah, Rain, Visit: ಮಳೆ ಹಾನಿ ಪ್ರದೇಶ...
21-05-25 05:42 pm
Kumki elephants, Pawan Kalyan, Cm Siddaramaia...
21-05-25 02:35 pm
ED Raids, Parameshwar College, Ranya Rao: ಹೋಂ...
21-05-25 01:50 pm
KG Halli Police Sub inspector Nagraj, Wife su...
21-05-25 12:12 pm
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
21-05-25 07:17 pm
Mangalore Correspondent
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
ಕೊಂಡಾಣ ಜಾತ್ರೆಯಲ್ಲಿ ಮುತ್ತಣ್ಣ ಶೆಟ್ಟಿ ಮುಂಡಾಸು ಕಟ...
20-05-25 06:59 pm
Manipal Rain, Udupi: ಕರಾವಳಿಯಲ್ಲಿ ದಿಢೀರ್ ಮಳೆಗಾ...
20-05-25 02:03 pm
Job Scam Mangalore, Police Suspend, Hireglow...
19-05-25 11:07 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm