ಬ್ರೇಕಿಂಗ್ ನ್ಯೂಸ್
10-07-23 07:57 pm Mangalore Correspondent ಕರಾವಳಿ
ಮಂಗಳೂರು, ಜುಲೈ 10: ದಿಗಂಬರ ಜೈನ ಮುನಿಯನ್ನು ಹತ್ಯೆಗೈದ ಘಟನೆಯನ್ನು ಖಂಡಿಸಿ ಮಂಗಳೂರಿನಲ್ಲಿ ಜೈನ ಸಮಾಜದ ಪ್ರತಿನಿಧಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಅಲ್ಲದೆ, ಕೃತ್ಯದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ.
ಮೂಡುಬಿದ್ರೆ ಬಸದಿಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನೇತೃತ್ವದಲ್ಲಿ ನಗರದ ಮಿನಿ ವಿಧಾನಸೌಧ ಬಳಿ ಸೇರಿದ ಸಮುದಾಯದ ಪ್ರತಿನಿಧಿಗಳು ಜಿಲ್ಲಾಧಿಕಾರಿ ಕಚೇರಿ ವರೆಗೆ ಮೌನ ಮೆರವಣಿಗೆ ನಡೆಸಿದ್ದಾರೆ. ಯಾವುದೇ ಲೌಕಿಕ ಸಂಬಂಧಗಳನ್ನು ಇಟ್ಟುಕೊಳ್ಳದೆ, ಕೇವಲ ಆಧ್ಯಾತ್ಮ ಜೀವನ ನಡೆಸುತ್ತಿದ್ದ ದಿಗಂಬರ ಜೈನ ಮುನಿಗಳನ್ನು ಈ ರೀತಿ ಹತ್ಯೆ ನಡೆಸಿರುವುದು ಅತ್ಯಂತ ಹೇಯ ಕೃತ್ಯ. ಕೃತ್ಯದಲ್ಲಿ ಯಾರೇ ಭಾಗಿಯಾಗರಲಿ, ಅವರಿಗೆ ಶೀಘ್ರದಲ್ಲಿ ಗಲ್ಲು ಶಿಕ್ಷೆಯಾಗಬೇಕು. ಮುಂದೆ ಈ ರೀತಿಯ ಕೃತ್ಯ ಆಗದಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಜೈನ ಸಮಾಜದ ಸಂತರಿಗೆ ಭದ್ರತೆ ನೀಡಬೇಕು ಎಂದು ಇದೇ ವೇಳೆ ಮಾತನಾಡಿದ ಜೈನ್ ಮಿಲನ್ ಮಾಜಿ ಅಧ್ಯಕ್ಷ ಪುಷ್ಪರಾಜ್ ಜೈನ್ ಆಗ್ರಹಿಸಿದ್ದಾರೆ.
ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮಾತನಾಡಿ, ನಾಗರಿಕ ಸಮಾಜ ತಲೆತಗ್ಗಿಸುವ ರೀತಿಯ ಕೃತ್ಯ ನಡೆದಿದೆ. ಅಮಾಯಕ ಅದರಲ್ಲೂ ಎಲ್ಲವನ್ನೂ ಬಿಟ್ಟ ದಿಗಂಬರನಾಗಿದ್ದ ಸಂತರೊಬ್ಬರನ್ನು ಕೊಲ್ಲುವುದು ಧರ್ಮಕ್ಕಾಗಿ ಜೀವನ ಸವೆಸುತ್ತಿರುವ ಸಂತರಲ್ಲಿ ಭಯ ಮೂಡಿಸಿದೆ. ಇದಕ್ಕಾಗಿ ಜೈನ ಸಮಾಜದ ಆಶ್ರಮಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಬೇಕು. ಕೃತ್ಯದ ತನಿಖೆ ಬಗ್ಗೆ ವಿಶೇಷ ತನಿಖಾ ತಂಡ ಮತ್ತು ವಿಶೇಷ ನ್ಯಾಯಾಧೀಶರನ್ನು ನೇಮಕ ಮಾಡಬೇಕು ಎಂದು ಹೇಳಿದರು.
ಜೈನ್ ಮಿಲನ್ ಸಂಘದ ಸುದರ್ಶನ್ ಜೈನ್ ಪ್ರಸ್ತಾವಿಸಿ, ನಾವು ಈ ಬಗ್ಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸುತ್ತೇವೆ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಜೊತೆಗೆ, ಜೈನ ಸಮುದಾಯದ ಸಂತರಿಗೆ ಮುಂದೆ ಯಾವತ್ತೂ ಈ ರೀತಿಯಾಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾ ಮೆರವಣಿಗೆಯಲ್ಲಿ ಮಹಿಳೆಯರು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.
Jain Monk Murder, Jain Community in Mangalore hold protest, demand hanging of Accused. The protest was lead by Moodabidri Basati Priest.Days after the murder of Jain seer Acharya Kamakumar Nandi Maharaj in Karnataka’s Belagavi district, the BJP and a few right-wing groups Monday demanded a Central Bureau Investigation (CBI) probe into the crime.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 11:27 am
Mangalore Correspondent
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm