ಬ್ರೇಕಿಂಗ್ ನ್ಯೂಸ್
12-07-23 02:15 pm Mangalore Correspondent ಕರಾವಳಿ
ಬೆಳ್ತಂಗಡಿ, ಜುಲೈ 12: ದೈವದ ಜಾಗದ ವಿಚಾರದಲ್ಲಿ ತಗಾದೆ ನಡೆದು ಕೊರಗಜ್ಜನ ಗುಡಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದ ಘಟನೆ ಬೆಳ್ತಂಗಡಿ ತಾಲೂಕು ವೇಣೂರು ಸನಿಹದ ಬಾಡಾರುವಿನಲ್ಲಿ ನಡೆದಿದೆ.
ಬಾಡಾರಿನ ಕೊರಗಕಲ್ಲು ಎಂಬಲ್ಲಿ ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಗುಡಿಯ ವಿಚಾರದಲ್ಲಿ ನಡೆದ ಗಲಾಟೆ ತಾರಕಕ್ಕೇರಿ, ಗುಡಿಯ ಬದಿಯಲ್ಲಿರುವ ನಿವಾಸಿ ಗುಡಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾನೆ.
ಸಾರ್ವಜನಿಕರು ಸ್ವಾಮಿ ಕೊರಗಜ್ಜ ಸಮಿತಿ ರಚಿಸಿ ವರ್ಷಂಪ್ರತಿ ಕೊರಗಜ್ಜನಿಗೆ ಕೋಲ, ಅಗೇಲು ನೀಡಿ ಆರಾಧನೆ ಮಾಡುತ್ತಿದ್ದರು. ಆದರೆ ಕೊರಗಜ್ಜನ ಗುಡಿಯಿರುವ ಸ್ಥಳದ ಬಗ್ಗೆ ಸ್ಥಳೀಯ ವ್ಯಕ್ತಿಯೊಬ್ಬರು ಅದು ತನ್ನ ಜಾಗವೆಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಕಳೆದ ಕೆಲವು ವರ್ಷಗಳಿಂದ ಸ್ವಾಮಿ ಕೊರಗಜ್ಜ ಸಮಿತಿ ಹಾಗೂ ಈ ವ್ಯಕ್ತಿಯ ನಡುವೆ ತಗಾದೆ ಏರ್ಪಟ್ಟಿತ್ತು. ಇಲ್ಲಿ ಆರಾಧನೆಗೆ ಅವಕಾಶ ನೀಡುವುದಿಲ್ಲ ಎಂದು ಆ ವ್ಯಕ್ತಿ ಅಡ್ಡಿ ಪಡಿಸುತ್ತಿದ್ದರು. ಆದರೆ ಪ್ರತೀ ವರ್ಷವರ್ಷ ತಗಾದೆ ಏರ್ಪಟ್ಟಾಗ ಸಂಧಾನವಾಗಿ ಕೊನೆಗೆ ಆರಾಧನೆ ನಡೆಯುತ್ತಿತ್ತು.
ಇದೀಗ ಅಲ್ಲಿಯೇ ಮತ್ತೊಂದು ಕೊರಗಜ್ಜನ ಗುಡಿ ಕಟ್ಟಲು ವ್ಯವಸ್ಥೆ ಮಾಡಿದ್ದರು. ಆದರೆ ಆ ವ್ಯಕ್ತಿ ಇದಕ್ಕೂ ಆಕ್ಷೇಪ ವ್ಯಕ್ತಪಡಿಸಿದಾಗ ಸಮಿತಿಯವರು ಪೊಲೀಸ್ ದೂರು ದಾಖಲಿಸಿದ್ದರು.
ಇದರಿಂದ ಆಕ್ರೋಶಿತ ಸ್ಥಳೀಯ ವ್ಯಕ್ತಿ ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಕೊರಗಜ್ಜನ ಗುಡಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ. ಈ ಕುರಿತು ಸ್ವಾಮಿ ಕೊರಗಜ್ಜ ಸಮಿತಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿ ಮೇಲೆ ಕ್ರಮ ಕೈಗೊಂಡು ಅದೇ ಸ್ಥಳದಲ್ಲಿ ಕೊರಗಜ್ಜನ ಗುಡಿಯ ಪುನರ್ ನಿರ್ಮಾಣ ಮಾಡಿ ಆರಾಧನೆ ನಡೆಸಲು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ.
Mangalore Land dispute fight, man sets Koragajja Sannidhi in fire at Venur, Belthangady.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm