ಬ್ರೇಕಿಂಗ್ ನ್ಯೂಸ್
12-07-23 02:15 pm Mangalore Correspondent ಕರಾವಳಿ
ಬೆಳ್ತಂಗಡಿ, ಜುಲೈ 12: ದೈವದ ಜಾಗದ ವಿಚಾರದಲ್ಲಿ ತಗಾದೆ ನಡೆದು ಕೊರಗಜ್ಜನ ಗುಡಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದ ಘಟನೆ ಬೆಳ್ತಂಗಡಿ ತಾಲೂಕು ವೇಣೂರು ಸನಿಹದ ಬಾಡಾರುವಿನಲ್ಲಿ ನಡೆದಿದೆ.
ಬಾಡಾರಿನ ಕೊರಗಕಲ್ಲು ಎಂಬಲ್ಲಿ ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಗುಡಿಯ ವಿಚಾರದಲ್ಲಿ ನಡೆದ ಗಲಾಟೆ ತಾರಕಕ್ಕೇರಿ, ಗುಡಿಯ ಬದಿಯಲ್ಲಿರುವ ನಿವಾಸಿ ಗುಡಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾನೆ.
ಸಾರ್ವಜನಿಕರು ಸ್ವಾಮಿ ಕೊರಗಜ್ಜ ಸಮಿತಿ ರಚಿಸಿ ವರ್ಷಂಪ್ರತಿ ಕೊರಗಜ್ಜನಿಗೆ ಕೋಲ, ಅಗೇಲು ನೀಡಿ ಆರಾಧನೆ ಮಾಡುತ್ತಿದ್ದರು. ಆದರೆ ಕೊರಗಜ್ಜನ ಗುಡಿಯಿರುವ ಸ್ಥಳದ ಬಗ್ಗೆ ಸ್ಥಳೀಯ ವ್ಯಕ್ತಿಯೊಬ್ಬರು ಅದು ತನ್ನ ಜಾಗವೆಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಕಳೆದ ಕೆಲವು ವರ್ಷಗಳಿಂದ ಸ್ವಾಮಿ ಕೊರಗಜ್ಜ ಸಮಿತಿ ಹಾಗೂ ಈ ವ್ಯಕ್ತಿಯ ನಡುವೆ ತಗಾದೆ ಏರ್ಪಟ್ಟಿತ್ತು. ಇಲ್ಲಿ ಆರಾಧನೆಗೆ ಅವಕಾಶ ನೀಡುವುದಿಲ್ಲ ಎಂದು ಆ ವ್ಯಕ್ತಿ ಅಡ್ಡಿ ಪಡಿಸುತ್ತಿದ್ದರು. ಆದರೆ ಪ್ರತೀ ವರ್ಷವರ್ಷ ತಗಾದೆ ಏರ್ಪಟ್ಟಾಗ ಸಂಧಾನವಾಗಿ ಕೊನೆಗೆ ಆರಾಧನೆ ನಡೆಯುತ್ತಿತ್ತು.
ಇದೀಗ ಅಲ್ಲಿಯೇ ಮತ್ತೊಂದು ಕೊರಗಜ್ಜನ ಗುಡಿ ಕಟ್ಟಲು ವ್ಯವಸ್ಥೆ ಮಾಡಿದ್ದರು. ಆದರೆ ಆ ವ್ಯಕ್ತಿ ಇದಕ್ಕೂ ಆಕ್ಷೇಪ ವ್ಯಕ್ತಪಡಿಸಿದಾಗ ಸಮಿತಿಯವರು ಪೊಲೀಸ್ ದೂರು ದಾಖಲಿಸಿದ್ದರು.
ಇದರಿಂದ ಆಕ್ರೋಶಿತ ಸ್ಥಳೀಯ ವ್ಯಕ್ತಿ ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಕೊರಗಜ್ಜನ ಗುಡಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ. ಈ ಕುರಿತು ಸ್ವಾಮಿ ಕೊರಗಜ್ಜ ಸಮಿತಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿ ಮೇಲೆ ಕ್ರಮ ಕೈಗೊಂಡು ಅದೇ ಸ್ಥಳದಲ್ಲಿ ಕೊರಗಜ್ಜನ ಗುಡಿಯ ಪುನರ್ ನಿರ್ಮಾಣ ಮಾಡಿ ಆರಾಧನೆ ನಡೆಸಲು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ.
Mangalore Land dispute fight, man sets Koragajja Sannidhi in fire at Venur, Belthangady.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am