ಬ್ರೇಕಿಂಗ್ ನ್ಯೂಸ್
12-07-23 02:15 pm Mangalore Correspondent ಕರಾವಳಿ
ಬೆಳ್ತಂಗಡಿ, ಜುಲೈ 12: ದೈವದ ಜಾಗದ ವಿಚಾರದಲ್ಲಿ ತಗಾದೆ ನಡೆದು ಕೊರಗಜ್ಜನ ಗುಡಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದ ಘಟನೆ ಬೆಳ್ತಂಗಡಿ ತಾಲೂಕು ವೇಣೂರು ಸನಿಹದ ಬಾಡಾರುವಿನಲ್ಲಿ ನಡೆದಿದೆ.
ಬಾಡಾರಿನ ಕೊರಗಕಲ್ಲು ಎಂಬಲ್ಲಿ ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಗುಡಿಯ ವಿಚಾರದಲ್ಲಿ ನಡೆದ ಗಲಾಟೆ ತಾರಕಕ್ಕೇರಿ, ಗುಡಿಯ ಬದಿಯಲ್ಲಿರುವ ನಿವಾಸಿ ಗುಡಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾನೆ.
ಸಾರ್ವಜನಿಕರು ಸ್ವಾಮಿ ಕೊರಗಜ್ಜ ಸಮಿತಿ ರಚಿಸಿ ವರ್ಷಂಪ್ರತಿ ಕೊರಗಜ್ಜನಿಗೆ ಕೋಲ, ಅಗೇಲು ನೀಡಿ ಆರಾಧನೆ ಮಾಡುತ್ತಿದ್ದರು. ಆದರೆ ಕೊರಗಜ್ಜನ ಗುಡಿಯಿರುವ ಸ್ಥಳದ ಬಗ್ಗೆ ಸ್ಥಳೀಯ ವ್ಯಕ್ತಿಯೊಬ್ಬರು ಅದು ತನ್ನ ಜಾಗವೆಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಕಳೆದ ಕೆಲವು ವರ್ಷಗಳಿಂದ ಸ್ವಾಮಿ ಕೊರಗಜ್ಜ ಸಮಿತಿ ಹಾಗೂ ಈ ವ್ಯಕ್ತಿಯ ನಡುವೆ ತಗಾದೆ ಏರ್ಪಟ್ಟಿತ್ತು. ಇಲ್ಲಿ ಆರಾಧನೆಗೆ ಅವಕಾಶ ನೀಡುವುದಿಲ್ಲ ಎಂದು ಆ ವ್ಯಕ್ತಿ ಅಡ್ಡಿ ಪಡಿಸುತ್ತಿದ್ದರು. ಆದರೆ ಪ್ರತೀ ವರ್ಷವರ್ಷ ತಗಾದೆ ಏರ್ಪಟ್ಟಾಗ ಸಂಧಾನವಾಗಿ ಕೊನೆಗೆ ಆರಾಧನೆ ನಡೆಯುತ್ತಿತ್ತು.
ಇದೀಗ ಅಲ್ಲಿಯೇ ಮತ್ತೊಂದು ಕೊರಗಜ್ಜನ ಗುಡಿ ಕಟ್ಟಲು ವ್ಯವಸ್ಥೆ ಮಾಡಿದ್ದರು. ಆದರೆ ಆ ವ್ಯಕ್ತಿ ಇದಕ್ಕೂ ಆಕ್ಷೇಪ ವ್ಯಕ್ತಪಡಿಸಿದಾಗ ಸಮಿತಿಯವರು ಪೊಲೀಸ್ ದೂರು ದಾಖಲಿಸಿದ್ದರು.
ಇದರಿಂದ ಆಕ್ರೋಶಿತ ಸ್ಥಳೀಯ ವ್ಯಕ್ತಿ ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಕೊರಗಜ್ಜನ ಗುಡಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ. ಈ ಕುರಿತು ಸ್ವಾಮಿ ಕೊರಗಜ್ಜ ಸಮಿತಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿ ಮೇಲೆ ಕ್ರಮ ಕೈಗೊಂಡು ಅದೇ ಸ್ಥಳದಲ್ಲಿ ಕೊರಗಜ್ಜನ ಗುಡಿಯ ಪುನರ್ ನಿರ್ಮಾಣ ಮಾಡಿ ಆರಾಧನೆ ನಡೆಸಲು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ.
Mangalore Land dispute fight, man sets Koragajja Sannidhi in fire at Venur, Belthangady.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm