ಬ್ರೇಕಿಂಗ್ ನ್ಯೂಸ್
12-07-23 02:15 pm Mangalore Correspondent ಕರಾವಳಿ
ಬೆಳ್ತಂಗಡಿ, ಜುಲೈ 12: ದೈವದ ಜಾಗದ ವಿಚಾರದಲ್ಲಿ ತಗಾದೆ ನಡೆದು ಕೊರಗಜ್ಜನ ಗುಡಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದ ಘಟನೆ ಬೆಳ್ತಂಗಡಿ ತಾಲೂಕು ವೇಣೂರು ಸನಿಹದ ಬಾಡಾರುವಿನಲ್ಲಿ ನಡೆದಿದೆ.
ಬಾಡಾರಿನ ಕೊರಗಕಲ್ಲು ಎಂಬಲ್ಲಿ ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಗುಡಿಯ ವಿಚಾರದಲ್ಲಿ ನಡೆದ ಗಲಾಟೆ ತಾರಕಕ್ಕೇರಿ, ಗುಡಿಯ ಬದಿಯಲ್ಲಿರುವ ನಿವಾಸಿ ಗುಡಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾನೆ.
ಸಾರ್ವಜನಿಕರು ಸ್ವಾಮಿ ಕೊರಗಜ್ಜ ಸಮಿತಿ ರಚಿಸಿ ವರ್ಷಂಪ್ರತಿ ಕೊರಗಜ್ಜನಿಗೆ ಕೋಲ, ಅಗೇಲು ನೀಡಿ ಆರಾಧನೆ ಮಾಡುತ್ತಿದ್ದರು. ಆದರೆ ಕೊರಗಜ್ಜನ ಗುಡಿಯಿರುವ ಸ್ಥಳದ ಬಗ್ಗೆ ಸ್ಥಳೀಯ ವ್ಯಕ್ತಿಯೊಬ್ಬರು ಅದು ತನ್ನ ಜಾಗವೆಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಕಳೆದ ಕೆಲವು ವರ್ಷಗಳಿಂದ ಸ್ವಾಮಿ ಕೊರಗಜ್ಜ ಸಮಿತಿ ಹಾಗೂ ಈ ವ್ಯಕ್ತಿಯ ನಡುವೆ ತಗಾದೆ ಏರ್ಪಟ್ಟಿತ್ತು. ಇಲ್ಲಿ ಆರಾಧನೆಗೆ ಅವಕಾಶ ನೀಡುವುದಿಲ್ಲ ಎಂದು ಆ ವ್ಯಕ್ತಿ ಅಡ್ಡಿ ಪಡಿಸುತ್ತಿದ್ದರು. ಆದರೆ ಪ್ರತೀ ವರ್ಷವರ್ಷ ತಗಾದೆ ಏರ್ಪಟ್ಟಾಗ ಸಂಧಾನವಾಗಿ ಕೊನೆಗೆ ಆರಾಧನೆ ನಡೆಯುತ್ತಿತ್ತು.
ಇದೀಗ ಅಲ್ಲಿಯೇ ಮತ್ತೊಂದು ಕೊರಗಜ್ಜನ ಗುಡಿ ಕಟ್ಟಲು ವ್ಯವಸ್ಥೆ ಮಾಡಿದ್ದರು. ಆದರೆ ಆ ವ್ಯಕ್ತಿ ಇದಕ್ಕೂ ಆಕ್ಷೇಪ ವ್ಯಕ್ತಪಡಿಸಿದಾಗ ಸಮಿತಿಯವರು ಪೊಲೀಸ್ ದೂರು ದಾಖಲಿಸಿದ್ದರು.
ಇದರಿಂದ ಆಕ್ರೋಶಿತ ಸ್ಥಳೀಯ ವ್ಯಕ್ತಿ ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಕೊರಗಜ್ಜನ ಗುಡಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ. ಈ ಕುರಿತು ಸ್ವಾಮಿ ಕೊರಗಜ್ಜ ಸಮಿತಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿ ಮೇಲೆ ಕ್ರಮ ಕೈಗೊಂಡು ಅದೇ ಸ್ಥಳದಲ್ಲಿ ಕೊರಗಜ್ಜನ ಗುಡಿಯ ಪುನರ್ ನಿರ್ಮಾಣ ಮಾಡಿ ಆರಾಧನೆ ನಡೆಸಲು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ.
Mangalore Land dispute fight, man sets Koragajja Sannidhi in fire at Venur, Belthangady.
20-07-25 08:35 pm
Bangalore Correspondent
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
Rcb, Bangalore: ಪೊಲೀಸರು 'ಆರ್ಸಿಬಿ ಸೇವಕರು' ಎಂಬ...
19-07-25 03:05 pm
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
20-07-25 03:06 pm
Mangaluru Correspondent
MRPL, MP Brijesh Chowta, Mangalore: MRPL ಹಸಿರ...
19-07-25 10:01 pm
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm