ಬ್ರೇಕಿಂಗ್ ನ್ಯೂಸ್
12-07-23 07:21 pm Mangalore Correspondent ಕರಾವಳಿ
ಉಳ್ಳಾಲ, ಜು.12: ಸಾವಿರಾರು ವಿದ್ಯಾರ್ಥಿಗಳು ಜ್ಞಾನಾರ್ಜನೆಗೈಯುತ್ತಿರುವ ಶಾಲೆಯ ಆವರಣದ ಪಕ್ಕದಲ್ಲೇ ಬಾರ್ & ರೆಸ್ಟೋರೆಂಟ್ ಒಂದು ದಿಢೀರನೆ ಹೆಡೆ ಎತ್ತಿದ್ದು ಮದ್ಯ ಕೇಂದ್ರವನ್ನು ಸ್ಥಳಾಂತರಿಸುವಂತೆ ವಿದ್ಯಾರ್ಥಿಗಳು ಜಿಟಿ, ಜಿಟಿ ಮಳೆಯ ನಡುವಲ್ಲೂ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಳೆಪುಣಿ ಗ್ರಾಮದ ಪುಣ್ಯಕೋಟಿ ನಗರದ ಶಾರದಾ ಗಣಪತಿ ವಿದ್ಯಾಕೇಂದ್ರದ ಆವರಣದ ಬಳಿಯಲ್ಲೇ ಬಾರ್& ರೆಸ್ಟೋರೆಂಟ್ ನಿರ್ಮಾಣಗೊಂಡಿದ್ದು, ನಿಯಮಗಳನ್ನು ಗಾಳಿಗೆ ತೂರಿ ಈ ಬಾರಿಗೆ ಸ್ಥಳೀಯ ಪಂಚಾಯತ್ ಆಡಳಿತವು ನಿರಾಕ್ಷೇಪಣಾ ಪತ್ರ ನೀಡಿರುವುದಾಗಿ ಆರೋಪಗಳು ಕೇಳಿಬಂದಿವೆ. ಬಾರ್ ಅನ್ನು ಕೂಡಲೇ ಸ್ಥಳಾಂತರಿಸುವಂತೆ ಆಗ್ರಹಿಸಿ ಶಾರದಾ ವಿದ್ಯಾಗಣಪತಿ ಶಾಲೆಯ ನೂರಾರು ವಿದ್ಯಾರ್ಥಿಗಳು ಬಾಳೆಪುಣಿ ಪಂಚಾಯತ್ ಗೆ ಮುತ್ತಿಗೆ ಹಾಕಿ ಪಂಚಾಯತ್ ಅಧ್ಯಕ್ಷೆ ರಝಿಯಾ ಅವರಿಗೆ ಮನವಿ ಸಲ್ಲಿಸಿದರು.



ಶಾರದಾ ವಿದ್ಯಾಗಣಪತಿ ಶಾಲಾ ವಿದ್ಯಾರ್ಥಿನಿ ರಶ್ಮಿತಾ ಮಾತನಾಡಿ ಶಾಲಾ ಆವರಣದ ನೂರು ಮೀಟರ್ ವ್ಯಾಪ್ತಿಯೊಳಗಡೆ ಯಾವುದೇ ಮಾದಕ ಪದಾರ್ಥಗಳನ್ನ ಮಾರುವಂತಿಲ್ಲ ಎಂದು ಕಾನೂನು ಇದೆ. ಆದರೆ ಇಲ್ಲಿ ನಿಯಮಗಳನ್ನೆಲ್ಲ ಉಲ್ಲಂಘಿಸಿ ಬಾರ್ ನಿರ್ಮಿಸಲಾಗಿದ್ದು ಇದರಿಂದ ವಿದ್ಯಾರ್ಥಿಗಳ ಮೇಲೆ ಕೆಟ್ಟ ಪರಿಣಾಮ ಬೀರೋದು ಖಂಡಿತ ಎಂದಳು.


ಶಾರದಾ ಗಣಪತಿ ವಿದ್ಯಾಕೇಂದ್ರದ ಸಂಚಾಲಕ ಟಿ.ಜಿ.ರಾಜಾರಾಂ ಭಟ್ ಮಾತನಾಡಿ ಸರಕಾರದ ಮಾರ್ಗಸೂಚಿಗಳನ್ನ ಅವಗಣನೆ ಮಾಡಿ, ಸಾರ್ವಜನಿಕ ಆಕ್ಷೇಪಗಳಿಗೆ ಅವಕಾಶ ನೀಡದೆ ಪಂಚಾಯತ್ ಆಡಳಿತವು ಬಾರ್ ನಿರ್ಮಾಣಕ್ಕೆ ತರಾತುರಿಯಲ್ಲಿ ನಿರಾಕ್ಷೇಪಣಾ ಪತ್ರ ನೀಡಿರುವುದು ಖಂಡನೀಯ. ಸರಕಾರದ ಮಾರ್ಗಸೂಚಿ ಪ್ರಕಾರ ಶಾಲಾ ಆವರಣದ 100 ಮೀಟರ್ ಅಂತರದೊಳಗೆ ಮದ್ಯದಂಗಡಿ ತೆರೆಯಲು ಅವಕಾಶ ಇರೋದಿಲ್ಲ. ಇಲ್ಲಿ ಶಾಲಾ ದ್ವಾರದ 53 ಮೀಟರ್ ಮತ್ತು ಶಾಲಾ ಆವರಣದ 13 ಮೀಟರ್ ಅಂತರದಲ್ಲಿ ಬಾರ್ ನಿರ್ಮಿಸಿ ನಿಯಮಗಳನ್ನ ಗಾಳಿಗೆ ತೂರಲಾಗಿದೆ. ಪಂಚಾಯತ್ ಅಧ್ಯಕ್ಷರು ಮುಂದಿನ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಬಾರ್ ಸ್ಥಳಾಂತರಿಸದಿದ್ದರೆ ಮುಂದೆ ಪ್ರಜಾಪ್ರಭುತ್ವದಡಿಯ ಎಲ್ಲಾ ಹೋರಾಟಕ್ಕೂ ಶಾಲಾಡಳಿತ ತಯಾರಾಗಿದೆ ಎಂದರು. ವಿವಾದಿತ ಬಾರ್ & ರೆಸ್ಟೋರೆಂಟ್ ಮುಂದೆಯೂ ಜಮಾಯಿಸಿದ ವಿದ್ಯಾರ್ಥಿಗಳು ತಮ್ಮ ಆಕ್ರೋಶ ಹೊರ ಹಾಕಿದರು.
Mangalore Permission to open Bar and Restaurant opposite to Sharadha school, students Ghearo Balepuni Gram Panchayat opposing to cancel the permission. Students Ghearo office amid heavy rains.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
18-05-26 10:47 pm
HK News Desk
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
18-05-26 06:49 pm
HK News Staffer
ಇನ್ಸ್ಟಾಮಾರ್ಟ್ ಉದ್ಯೋಗಿ ಲಿಫ್ಟ್ ದುರಂತದಲ್ಲಿ ಸಾವು...
18-05-26 06:47 pm
ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟ; ಚೆನ್ನೈ ಮೂಲದ ಪ್...
18-05-26 06:21 pm
ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಬಹುಕೋಟಿ ವಂಚನೆ; ಸಿಐ...
18-05-26 04:19 pm
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm