ಬ್ರೇಕಿಂಗ್ ನ್ಯೂಸ್
12-07-23 07:21 pm Mangalore Correspondent ಕರಾವಳಿ
ಉಳ್ಳಾಲ, ಜು.12: ಸಾವಿರಾರು ವಿದ್ಯಾರ್ಥಿಗಳು ಜ್ಞಾನಾರ್ಜನೆಗೈಯುತ್ತಿರುವ ಶಾಲೆಯ ಆವರಣದ ಪಕ್ಕದಲ್ಲೇ ಬಾರ್ & ರೆಸ್ಟೋರೆಂಟ್ ಒಂದು ದಿಢೀರನೆ ಹೆಡೆ ಎತ್ತಿದ್ದು ಮದ್ಯ ಕೇಂದ್ರವನ್ನು ಸ್ಥಳಾಂತರಿಸುವಂತೆ ವಿದ್ಯಾರ್ಥಿಗಳು ಜಿಟಿ, ಜಿಟಿ ಮಳೆಯ ನಡುವಲ್ಲೂ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಳೆಪುಣಿ ಗ್ರಾಮದ ಪುಣ್ಯಕೋಟಿ ನಗರದ ಶಾರದಾ ಗಣಪತಿ ವಿದ್ಯಾಕೇಂದ್ರದ ಆವರಣದ ಬಳಿಯಲ್ಲೇ ಬಾರ್& ರೆಸ್ಟೋರೆಂಟ್ ನಿರ್ಮಾಣಗೊಂಡಿದ್ದು, ನಿಯಮಗಳನ್ನು ಗಾಳಿಗೆ ತೂರಿ ಈ ಬಾರಿಗೆ ಸ್ಥಳೀಯ ಪಂಚಾಯತ್ ಆಡಳಿತವು ನಿರಾಕ್ಷೇಪಣಾ ಪತ್ರ ನೀಡಿರುವುದಾಗಿ ಆರೋಪಗಳು ಕೇಳಿಬಂದಿವೆ. ಬಾರ್ ಅನ್ನು ಕೂಡಲೇ ಸ್ಥಳಾಂತರಿಸುವಂತೆ ಆಗ್ರಹಿಸಿ ಶಾರದಾ ವಿದ್ಯಾಗಣಪತಿ ಶಾಲೆಯ ನೂರಾರು ವಿದ್ಯಾರ್ಥಿಗಳು ಬಾಳೆಪುಣಿ ಪಂಚಾಯತ್ ಗೆ ಮುತ್ತಿಗೆ ಹಾಕಿ ಪಂಚಾಯತ್ ಅಧ್ಯಕ್ಷೆ ರಝಿಯಾ ಅವರಿಗೆ ಮನವಿ ಸಲ್ಲಿಸಿದರು.
ಶಾರದಾ ವಿದ್ಯಾಗಣಪತಿ ಶಾಲಾ ವಿದ್ಯಾರ್ಥಿನಿ ರಶ್ಮಿತಾ ಮಾತನಾಡಿ ಶಾಲಾ ಆವರಣದ ನೂರು ಮೀಟರ್ ವ್ಯಾಪ್ತಿಯೊಳಗಡೆ ಯಾವುದೇ ಮಾದಕ ಪದಾರ್ಥಗಳನ್ನ ಮಾರುವಂತಿಲ್ಲ ಎಂದು ಕಾನೂನು ಇದೆ. ಆದರೆ ಇಲ್ಲಿ ನಿಯಮಗಳನ್ನೆಲ್ಲ ಉಲ್ಲಂಘಿಸಿ ಬಾರ್ ನಿರ್ಮಿಸಲಾಗಿದ್ದು ಇದರಿಂದ ವಿದ್ಯಾರ್ಥಿಗಳ ಮೇಲೆ ಕೆಟ್ಟ ಪರಿಣಾಮ ಬೀರೋದು ಖಂಡಿತ ಎಂದಳು.
ಶಾರದಾ ಗಣಪತಿ ವಿದ್ಯಾಕೇಂದ್ರದ ಸಂಚಾಲಕ ಟಿ.ಜಿ.ರಾಜಾರಾಂ ಭಟ್ ಮಾತನಾಡಿ ಸರಕಾರದ ಮಾರ್ಗಸೂಚಿಗಳನ್ನ ಅವಗಣನೆ ಮಾಡಿ, ಸಾರ್ವಜನಿಕ ಆಕ್ಷೇಪಗಳಿಗೆ ಅವಕಾಶ ನೀಡದೆ ಪಂಚಾಯತ್ ಆಡಳಿತವು ಬಾರ್ ನಿರ್ಮಾಣಕ್ಕೆ ತರಾತುರಿಯಲ್ಲಿ ನಿರಾಕ್ಷೇಪಣಾ ಪತ್ರ ನೀಡಿರುವುದು ಖಂಡನೀಯ. ಸರಕಾರದ ಮಾರ್ಗಸೂಚಿ ಪ್ರಕಾರ ಶಾಲಾ ಆವರಣದ 100 ಮೀಟರ್ ಅಂತರದೊಳಗೆ ಮದ್ಯದಂಗಡಿ ತೆರೆಯಲು ಅವಕಾಶ ಇರೋದಿಲ್ಲ. ಇಲ್ಲಿ ಶಾಲಾ ದ್ವಾರದ 53 ಮೀಟರ್ ಮತ್ತು ಶಾಲಾ ಆವರಣದ 13 ಮೀಟರ್ ಅಂತರದಲ್ಲಿ ಬಾರ್ ನಿರ್ಮಿಸಿ ನಿಯಮಗಳನ್ನ ಗಾಳಿಗೆ ತೂರಲಾಗಿದೆ. ಪಂಚಾಯತ್ ಅಧ್ಯಕ್ಷರು ಮುಂದಿನ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಬಾರ್ ಸ್ಥಳಾಂತರಿಸದಿದ್ದರೆ ಮುಂದೆ ಪ್ರಜಾಪ್ರಭುತ್ವದಡಿಯ ಎಲ್ಲಾ ಹೋರಾಟಕ್ಕೂ ಶಾಲಾಡಳಿತ ತಯಾರಾಗಿದೆ ಎಂದರು. ವಿವಾದಿತ ಬಾರ್ & ರೆಸ್ಟೋರೆಂಟ್ ಮುಂದೆಯೂ ಜಮಾಯಿಸಿದ ವಿದ್ಯಾರ್ಥಿಗಳು ತಮ್ಮ ಆಕ್ರೋಶ ಹೊರ ಹಾಕಿದರು.
Mangalore Permission to open Bar and Restaurant opposite to Sharadha school, students Ghearo Balepuni Gram Panchayat opposing to cancel the permission. Students Ghearo office amid heavy rains.
21-05-25 09:16 pm
Bangalore Correspondent
CM Siddaramaiah, Rain, Visit: ಮಳೆ ಹಾನಿ ಪ್ರದೇಶ...
21-05-25 05:42 pm
Kumki elephants, Pawan Kalyan, Cm Siddaramaia...
21-05-25 02:35 pm
ED Raids, Parameshwar College, Ranya Rao: ಹೋಂ...
21-05-25 01:50 pm
KG Halli Police Sub inspector Nagraj, Wife su...
21-05-25 12:12 pm
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
21-05-25 11:09 pm
HK News Desk
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
Dr M A Saleem New DG&IGP: ಡಿಜಿಪಿ ಅಲೋಕ್ ಮೋಹನ್...
21-05-25 07:17 pm
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm