ಬ್ರೇಕಿಂಗ್ ನ್ಯೂಸ್
13-07-23 10:35 pm Mangalore Correspondent ಕರಾವಳಿ
ಮಂಗಳೂರು,ಜು.13: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಡಿ 2023ರ ಜುಲೈನಿಂದ ಐದು ಕೆಜಿ ಅಕ್ಕಿ ಬದಲು ನೇರ ನಗದು ವರ್ಗಾವಣೆಗೆ ಚಾಲನೆ ನೀಡಲಾಗಿದೆ. ಅದರಂತೆ, ಮೊದಲ ಕಂತಿನಲ್ಲಿ ದಕ್ಷಿಣ ಕನ್ನಡ ಸೇರಿ ಐದು ಜಿಲ್ಲೆಗಳಿಗೆ ಜುಲೈ 13ರಂದು ರಾಜ್ಯ ಸರ್ಕಾರ ಆಯಾ ಜಿಲ್ಲೆಯ ಪಡಿತರ ಇಲಾಖೆಗೆ ನಗದು ರವಾನೆಯಾಗಿದೆ.
ಈ ಮೂಲಕ ಅಂತ್ಯೋದಯ (3ಕ್ಕಿಂತ ಹೆಚ್ಚು ಸದಸ್ಯರಿರುವ ಅಂತ್ಯೋದಯ ಪಡಿತರ ಚೀಟಿಗಳು) ಹಾಗೂ ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಯಜಮಾನನ ಖಾತೆಗೆ ಜಮೆ ಮಾಡಲು ದಕ್ಷಿಣ ಕನ್ನಡ ಜಿಲ್ಲೆಯ 2,15,322 ಪಡಿತರ ಚೀಟಿಗಳಿಗೆ 15.02 ಕೋಟಿ ರೂ. ಬಿಡುಗಡೆಯಾಗಿದೆ.
ದ.ಕ. ಜಿಲ್ಲೆಯಲ್ಲಿನ 37,801 ಪಡಿತರ ಚೀಟಿಗಳ ಬ್ಯಾಂಕ್ ಖಾತೆಗಳು ನಿಷ್ಕ್ರಿಯಗೊಂಡಿದ್ದು, ಇಂತಹ ಪಡಿತರ ಚೀಟಿದಾರರು ತಮ್ಮ ಬ್ಯಾಂಕ್ ಖಾತೆಯನ್ನು ಇದೇ ಜುಲೈ 20ರೊಳಗೆ ಸಕ್ರಿಯಗೊಳಿಸಿದಲ್ಲಿ 2023ರ ಆಗಸ್ಟ್ ಮಾಹೆಯಲ್ಲಿ ನಗದು ವರ್ಗಾವಣೆಗೆ ಅರ್ಹರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ. ಇಲ್ಲದೇ ಇದ್ದರೆ ಜುಲೈ ತಿಂಗಳ ನೇರ ನಗದು ಪಡೆಯಲು ಅರ್ಹತೆ ಸಿಗುವುದಿಲ್ಲ.
ಬಿಪಿಎಲ್ ಪಡಿತರ ಕುಟುಂಬದ ಪ್ರತಿ ಸದಸ್ಯನಿಗೆ ತಲಾ 170 ರೂ.ನಂತೆ ಕಾರ್ಡ್ ನಲ್ಲಿ ನಮೂದಾಗಿರುವ ಸದಸ್ಯರ ಸಂಖ್ಯೆಗೆ ತಕ್ಕಂತೆ ಕುಟುಂಬದ ಯಜಮಾನನ ಖಾತೆಗೆ ನಗದು ಜಮಾ ಆಗಲಿದೆ. ಆದರೆ ಜಿಲ್ಲೆಯಲ್ಲಿ 37 ಸಾವಿರದಷ್ಟು ಗ್ರಾಹಕರ ಬ್ಯಾಂಕ್ ಖಾತೆಗಳು ನಿಷ್ಕ್ರಿಯ ಆಗಿರುವ ಮಾಹಿತಿಯನ್ನು ಜಿಲ್ಲಾಡಳಿತ ನೀಡಿದೆ.
Dakshina Kannada gets 15 crore cash instead of Rice from Congress government, 37 bank accounts found with error.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 11:27 am
Mangalore Correspondent
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm