ಬ್ರೇಕಿಂಗ್ ನ್ಯೂಸ್
13-07-23 10:35 pm Mangalore Correspondent ಕರಾವಳಿ
ಮಂಗಳೂರು,ಜು.13: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಡಿ 2023ರ ಜುಲೈನಿಂದ ಐದು ಕೆಜಿ ಅಕ್ಕಿ ಬದಲು ನೇರ ನಗದು ವರ್ಗಾವಣೆಗೆ ಚಾಲನೆ ನೀಡಲಾಗಿದೆ. ಅದರಂತೆ, ಮೊದಲ ಕಂತಿನಲ್ಲಿ ದಕ್ಷಿಣ ಕನ್ನಡ ಸೇರಿ ಐದು ಜಿಲ್ಲೆಗಳಿಗೆ ಜುಲೈ 13ರಂದು ರಾಜ್ಯ ಸರ್ಕಾರ ಆಯಾ ಜಿಲ್ಲೆಯ ಪಡಿತರ ಇಲಾಖೆಗೆ ನಗದು ರವಾನೆಯಾಗಿದೆ.
ಈ ಮೂಲಕ ಅಂತ್ಯೋದಯ (3ಕ್ಕಿಂತ ಹೆಚ್ಚು ಸದಸ್ಯರಿರುವ ಅಂತ್ಯೋದಯ ಪಡಿತರ ಚೀಟಿಗಳು) ಹಾಗೂ ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಯಜಮಾನನ ಖಾತೆಗೆ ಜಮೆ ಮಾಡಲು ದಕ್ಷಿಣ ಕನ್ನಡ ಜಿಲ್ಲೆಯ 2,15,322 ಪಡಿತರ ಚೀಟಿಗಳಿಗೆ 15.02 ಕೋಟಿ ರೂ. ಬಿಡುಗಡೆಯಾಗಿದೆ.
ದ.ಕ. ಜಿಲ್ಲೆಯಲ್ಲಿನ 37,801 ಪಡಿತರ ಚೀಟಿಗಳ ಬ್ಯಾಂಕ್ ಖಾತೆಗಳು ನಿಷ್ಕ್ರಿಯಗೊಂಡಿದ್ದು, ಇಂತಹ ಪಡಿತರ ಚೀಟಿದಾರರು ತಮ್ಮ ಬ್ಯಾಂಕ್ ಖಾತೆಯನ್ನು ಇದೇ ಜುಲೈ 20ರೊಳಗೆ ಸಕ್ರಿಯಗೊಳಿಸಿದಲ್ಲಿ 2023ರ ಆಗಸ್ಟ್ ಮಾಹೆಯಲ್ಲಿ ನಗದು ವರ್ಗಾವಣೆಗೆ ಅರ್ಹರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ. ಇಲ್ಲದೇ ಇದ್ದರೆ ಜುಲೈ ತಿಂಗಳ ನೇರ ನಗದು ಪಡೆಯಲು ಅರ್ಹತೆ ಸಿಗುವುದಿಲ್ಲ.
ಬಿಪಿಎಲ್ ಪಡಿತರ ಕುಟುಂಬದ ಪ್ರತಿ ಸದಸ್ಯನಿಗೆ ತಲಾ 170 ರೂ.ನಂತೆ ಕಾರ್ಡ್ ನಲ್ಲಿ ನಮೂದಾಗಿರುವ ಸದಸ್ಯರ ಸಂಖ್ಯೆಗೆ ತಕ್ಕಂತೆ ಕುಟುಂಬದ ಯಜಮಾನನ ಖಾತೆಗೆ ನಗದು ಜಮಾ ಆಗಲಿದೆ. ಆದರೆ ಜಿಲ್ಲೆಯಲ್ಲಿ 37 ಸಾವಿರದಷ್ಟು ಗ್ರಾಹಕರ ಬ್ಯಾಂಕ್ ಖಾತೆಗಳು ನಿಷ್ಕ್ರಿಯ ಆಗಿರುವ ಮಾಹಿತಿಯನ್ನು ಜಿಲ್ಲಾಡಳಿತ ನೀಡಿದೆ.
Dakshina Kannada gets 15 crore cash instead of Rice from Congress government, 37 bank accounts found with error.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm