ಬ್ರೇಕಿಂಗ್ ನ್ಯೂಸ್
15-07-23 07:24 pm Mangalore Correspondent ಕರಾವಳಿ
ಮಂಗಳೂರು, ಜುಲೈ 15: ತುಳುನಾಡಿನ ಆರಾಧ್ಯ ದೈವ ಕೊರಗಜ್ಜ ಹಾಗೂ ಬಿಜೆಪಿ ಶಾಸಕ ಭರತ್ ಶೆಟ್ಟಿ ಬಗ್ಗೆ ಅವಹೇಳನಕಾರಿ ಬರಹಗಳನ್ನು ಬರೆದು ಹಿಂದುಗಳ ಭಾವನೆಗೆ ಧಕ್ಕೆ ತರುವುದು ಮತ್ತು ಕೋಮು ಪ್ರಚೋದನೆ ಮಾಡುವ ದುಷ್ಕೃತ್ಯಗಳು ಜಾಲತಾಣದಲ್ಲಿ ಕಂಡುಬರುತ್ತಿವೆ. ಇನ್ಸ್ಟಾ ಗ್ರಾಮ್ ನಲ್ಲಿ ಬ್ಯಾರಿ ಕಿಂಗ್ ಹಾಗು ಇನ್ನಿತರ ಖಾತೆಗಳಲ್ಲಿ ಈ ರೀತಿಯ ಪೋಸ್ಟ್ ಹರಿಯಬಿಡುತ್ತಿದ್ದು ಇವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಮಂಗಳೂರು ಉತ್ತರ ಕ್ಷೇತ್ರದ ಯುವಮೋರ್ಚಾ ಮಂಡಲ ವತಿಯಿಂದ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಗೆ ದೂರು ನೀಡಲಾಗಿದೆ.
ಈ ಕುರಿತು ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಉತ್ತರ ಕ್ಷೇತ್ರದ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ, ಹಿಂದುಗಳ ಭಾವನೆಗೆ ಧಕ್ಕೆ ತರುವ ರೀತಿ ಅಥವಾ ನಮ್ಮ ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕುವುದನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು. ಇದರ ಹಿಂದಿರುವ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಬೇಕು. ಇಂತಹ ಪೋಸ್ಟ್ ಗಳನ್ನು ಷೇರ್ ಮಾಡುವವರ ವಿರುದ್ಧ ಸೈಬರ್ ಕ್ರೈಂ ಕಾನೂನಿನ ಅನ್ವಯ ಕೇಸು ದಾಖಲಿಸಬೇಕು. ಕೋಮುಗಲಭೆಗೆ ಪ್ರಚೋದನೆ ನೀಡಿ, ಸಮಾಜದಲ್ಲಿ ಶಾಂತಿ ಕದಡುವ ಉದ್ದೇಶ ಇದರ ಹಿಂದಿದೆ. ಪೊಲೀಸ್ ಇಲಾಖೆ ಎಚ್ಚತ್ತು ಕ್ರಮ ಕೈಗೊಳ್ಳದೇ ಇದ್ದರೆ ಎಲ್ಲ ಪೊಲೀಸ್ ಠಾಣೆಗಳ ಮುಂದೆಯೂ ಪ್ರತಿಭಟನೆ ನಡೆಸಬೇಕಾದೀತು ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಬ್ಯಾರಿ ಕಿಂಗ್ ಹೆಸರಿನಲ್ಲಿ ತನ್ನ ವಿರುದ್ಧ ಮಾನಹಾನಿ ಪೋಸ್ಟ್ ಹಾಕುತ್ತಿರುವ ಬಗ್ಗೆ ಶಾಸಕ ಡಾಕ್ಟರ್ ಭರತ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದು ತೆರೆಮರೆಯಲ್ಲಿ ಕುಳಿತು ಕೆಲಸ ಮಾಡುವ ಕಾಣದ ಕೈಗಳ ದುಷ್ಕ್ರತ್ಯಗಳನ್ನು ಹೇಗೆ ನಿಲ್ಲಿಸಬೇಕು ಎಂಬುದು ತನಗೆ ತಿಳಿದಿದೆ ಎಂದು ಹೇಳಿದ್ದಾರೆ.
Facebook named after Beary King post deformative post against MLA Bharath Shetty, complaint filed by BJP Yuvamorcha in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm