ಬ್ರೇಕಿಂಗ್ ನ್ಯೂಸ್
15-07-23 07:56 pm Mangalore Correspondent ಕರಾವಳಿ
ಬೆಳ್ತಂಗಡಿ, ಜುಲೈ 15: ಹೆಣ ಸುಡಲು ಸ್ಮಶಾನವಿಲ್ಲದ ಕಾರಣ ಗ್ರಾಮಸ್ಥರು ಗ್ರಾಮ ಪಂಚಾಯತ್ ಮುಂದೆಯೇ ಶವಸಂಸ್ಕಾರಕ್ಕೆ ಮುಂದಾದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯಾದಲ್ಲಿ ನಡೆದಿದೆ. ರುದ್ರಭೂಮಿಗೆ ಜಾಗ ಕಾದಿರಿಸದ ಪಂಚಾಯತ್ ಆಡಳಿತದ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ, ಶವ ಮುಂದಿಟ್ಟು ಪ್ರತಿಭಟನೆ ನಡೆಸಿದ್ದಾರೆ.
ನೆರಿಯಾ ಗ್ರಾಮದ ಜನತಾ ಕಾಲೋನಿಯ ವೃದ್ಧ ವ್ಯಕ್ತಿ ಮೃತಪಟ್ಟಿದ್ದು ಶವ ಸಂಸ್ಕಾರಕ್ಕೆ ಸ್ಥಳವಿಲ್ಲದ ಕಾರಣ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಶವವನ್ನು ಪಂಚಾಯತ್ ಕಚೇರಿ ಮುಂದಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಸ್ಮಶಾನಕ್ಕೆ ಸ್ಥಳ ನಿಗದಿ ಮಾಡದೆ ಹೋದರೆ ಪಂಚಾಯತ್ ಎದುರೇ ಅಂತ್ಯಸಂಸ್ಕಾರ ನಡೆಸುವುದಾಗಿ ಹೇಳಿ, ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಈ ಹಿಂದೆ ಗ್ರಾಮಕ್ಕೊಂದು ಸ್ಮಶಾನಕ್ಕಾಗಿ ಹಲವು ಬಾರಿ ನೆರಿಯಾ ಗ್ರಾಮ ಪಂಚಾಯತ್ ಆಡಳಿತಕ್ಕೆ ಗ್ರಾಮಸ್ಥರು ಮನವಿ ಮಾಡಿದ್ದರು.


ಜನರ ಆಕ್ರೋಶಕ್ಕೆ ಮಣಿದು ಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಆಗಮಿಸಿದ್ದು ರುದ್ರಭೂಮಿಗೆ ಈ ಹಿಂದೆಯೇ ಜಾಗ ನೋಡಿದ್ದಾಗಿ ತಿಳಿಸಿದರು. ಪಕ್ಕದ ಇಟ್ಟಾಡಿ ಎಂಬಲ್ಲಿ ಸ್ಮಶಾನಕ್ಕಾಗಿ ಮೀಸಲಿಟ್ಟ ಸ್ಥಳದ ಪರಿಶೀಲನೆ ನಡೆಸಿದ್ದಾರೆ. ಆದರೆ ಪರಿಶೀಲನೆ ಸಂದರ್ಭದಲ್ಲಿ ಆ ಸ್ಥಳದಲ್ಲಿ ಸ್ಮಶಾನ ಮಾಡಲು ಬಿಡುವುದಿಲ್ಲ ಎಂದು ಸ್ಥಳೀಯರು ಪಟ್ಟು ಹಿಡಿದಿದ್ದಾರೆ.
ಕೊನೆಗೆ, ಪಂಚಾಯತ್ ಸಮೀಪದ ಸರಕಾರಿ ಜಾಗವನ್ನೇ ಸ್ಮಶಾನಕ್ಕಾಗಿ ನಿಗದಿಪಡಿಸಲು ಆದೇಶ ಮಾಡುವುದಾಗಿ ತಹಸೀಲ್ದಾರ್ ತಿಳಿಸಿದ್ದಾರೆ. ಬಳಿಕ ಪ್ರತಿಭಟನೆಯನ್ನು ಹಿಂಪಡೆದ ಗ್ರಾಮಸ್ಥರು, ತಹಸೀಲ್ದಾರ್ ತೋರಿಸಿದ ಸ್ಥಳದಲ್ಲೇ ಅಂತ್ಯಸಂಸ್ಕಾರ ನಡೆಸಿದ್ದಾರೆ.
Due to the lack of cremation in Neria village of Belthangadi taluk, the funeral of the dead is being hampered and the villagers have protested in front of the village panchayat demanding to solve the problem.They protested in Neria saying that even though they have been demanding in several village councils for the last several years, no one is getting any response to the request of the villagers.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am