ಬ್ರೇಕಿಂಗ್ ನ್ಯೂಸ್
15-07-23 07:56 pm Mangalore Correspondent ಕರಾವಳಿ
ಬೆಳ್ತಂಗಡಿ, ಜುಲೈ 15: ಹೆಣ ಸುಡಲು ಸ್ಮಶಾನವಿಲ್ಲದ ಕಾರಣ ಗ್ರಾಮಸ್ಥರು ಗ್ರಾಮ ಪಂಚಾಯತ್ ಮುಂದೆಯೇ ಶವಸಂಸ್ಕಾರಕ್ಕೆ ಮುಂದಾದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯಾದಲ್ಲಿ ನಡೆದಿದೆ. ರುದ್ರಭೂಮಿಗೆ ಜಾಗ ಕಾದಿರಿಸದ ಪಂಚಾಯತ್ ಆಡಳಿತದ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ, ಶವ ಮುಂದಿಟ್ಟು ಪ್ರತಿಭಟನೆ ನಡೆಸಿದ್ದಾರೆ.
ನೆರಿಯಾ ಗ್ರಾಮದ ಜನತಾ ಕಾಲೋನಿಯ ವೃದ್ಧ ವ್ಯಕ್ತಿ ಮೃತಪಟ್ಟಿದ್ದು ಶವ ಸಂಸ್ಕಾರಕ್ಕೆ ಸ್ಥಳವಿಲ್ಲದ ಕಾರಣ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಶವವನ್ನು ಪಂಚಾಯತ್ ಕಚೇರಿ ಮುಂದಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಸ್ಮಶಾನಕ್ಕೆ ಸ್ಥಳ ನಿಗದಿ ಮಾಡದೆ ಹೋದರೆ ಪಂಚಾಯತ್ ಎದುರೇ ಅಂತ್ಯಸಂಸ್ಕಾರ ನಡೆಸುವುದಾಗಿ ಹೇಳಿ, ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಈ ಹಿಂದೆ ಗ್ರಾಮಕ್ಕೊಂದು ಸ್ಮಶಾನಕ್ಕಾಗಿ ಹಲವು ಬಾರಿ ನೆರಿಯಾ ಗ್ರಾಮ ಪಂಚಾಯತ್ ಆಡಳಿತಕ್ಕೆ ಗ್ರಾಮಸ್ಥರು ಮನವಿ ಮಾಡಿದ್ದರು.
ಜನರ ಆಕ್ರೋಶಕ್ಕೆ ಮಣಿದು ಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಆಗಮಿಸಿದ್ದು ರುದ್ರಭೂಮಿಗೆ ಈ ಹಿಂದೆಯೇ ಜಾಗ ನೋಡಿದ್ದಾಗಿ ತಿಳಿಸಿದರು. ಪಕ್ಕದ ಇಟ್ಟಾಡಿ ಎಂಬಲ್ಲಿ ಸ್ಮಶಾನಕ್ಕಾಗಿ ಮೀಸಲಿಟ್ಟ ಸ್ಥಳದ ಪರಿಶೀಲನೆ ನಡೆಸಿದ್ದಾರೆ. ಆದರೆ ಪರಿಶೀಲನೆ ಸಂದರ್ಭದಲ್ಲಿ ಆ ಸ್ಥಳದಲ್ಲಿ ಸ್ಮಶಾನ ಮಾಡಲು ಬಿಡುವುದಿಲ್ಲ ಎಂದು ಸ್ಥಳೀಯರು ಪಟ್ಟು ಹಿಡಿದಿದ್ದಾರೆ.
ಕೊನೆಗೆ, ಪಂಚಾಯತ್ ಸಮೀಪದ ಸರಕಾರಿ ಜಾಗವನ್ನೇ ಸ್ಮಶಾನಕ್ಕಾಗಿ ನಿಗದಿಪಡಿಸಲು ಆದೇಶ ಮಾಡುವುದಾಗಿ ತಹಸೀಲ್ದಾರ್ ತಿಳಿಸಿದ್ದಾರೆ. ಬಳಿಕ ಪ್ರತಿಭಟನೆಯನ್ನು ಹಿಂಪಡೆದ ಗ್ರಾಮಸ್ಥರು, ತಹಸೀಲ್ದಾರ್ ತೋರಿಸಿದ ಸ್ಥಳದಲ್ಲೇ ಅಂತ್ಯಸಂಸ್ಕಾರ ನಡೆಸಿದ್ದಾರೆ.
Due to the lack of cremation in Neria village of Belthangadi taluk, the funeral of the dead is being hampered and the villagers have protested in front of the village panchayat demanding to solve the problem.They protested in Neria saying that even though they have been demanding in several village councils for the last several years, no one is getting any response to the request of the villagers.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm