ಬ್ರೇಕಿಂಗ್ ನ್ಯೂಸ್
16-07-23 04:11 pm Mangalore Correspondent ಕರಾವಳಿ
ಮಂಗಳೂರು, ಜುಲೈ 16: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಗಳ ಪತ್ತೆಗಾಗಿ ಮತ್ತೆ ಎನ್ಐಎ ಅಧಿಕಾರಿಗಳು ಎಚ್ಚರಿಕೆ ನೀಡಿದ್ದು ಕೋರ್ಟಿಗೆ ಶರಣಾಗಲು ಆಗಸ್ಟ್ 18ರ ಗಡುವು ನೀಡಿದ್ದಾರೆ.
ಆಗಸ್ಟ್ 18 ರೊಳಗೆ ಬೆಂಗಳೂರಿನ ಎನ್ಐಎ ಕೋರ್ಟಿಗೆ ಶರಣಾಗುವಂತೆ ಸೂಚಿಸಿ ಎನ್ಐಎ ಅಧಿಕಾರಿಗಳು ಆರೋಪಿಗಳ ಮನೆ ಗೋಡೆ, ಸಾರ್ವಜನಿಕ ಪ್ರದೇಶದಲ್ಲಿ ವಾರಂಟ್ ನೋಟಿಸ್ ಅಂಟಿಸಿದ್ದಾರೆ. ಸುಳ್ಯದ ಆಸುಪಾಸು ಮತ್ತು ಬೆಳ್ಳಾರೆಯಲ್ಲಿರುವ ಆರೋಪಿಗಳ ಮನೆಗಳಿಗೆ ಅಧಿಕಾರಿಗಳು ಭೇಟಿ ನೀಡಿದ್ದು ಕೋರ್ಟ್ ವಾರಂಟ್ ಬಗ್ಗೆ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಸ್ಥಳೀಯ ಪೊಲೀಸರ ನೆರವಿನಲ್ಲಿ ಆಗಸ್ಟ್ 18ರೊಳಗೆ ಕೋರ್ಟಿಗೆ ಶರಣಾಗಲು ಧ್ವನಿ ವರ್ಧಕದ ಮೂಲಕ ಪ್ರಕಟಣೆ ನೀಡಿದ್ದಾರೆ.



ಈ ಹಿಂದೆ ಜೂನ್ 30ರ ಒಳಗೆ ಕೋರ್ಟಿಗೆ ಶರಣಾಗದಿದ್ದರೆ ಆರೋಪಿಗಳ ಮನೆ, ಆಸ್ತಿ ಮುಟ್ಟುಗೋಲು ಹಾಕುವುದಾಗಿ ಎನ್ಐಎ ಎಚ್ಚರಿಕೆ ನೀಡಿತ್ತು. ಅಲ್ಲದೆ, ಆರೋಪಿಗಳು ಎಲ್ಲಿದ್ದಾರೆಂದು ಸುಳಿವು ಕೊಟ್ಟವರಿಗೆ ನಗದು ಬಹುಮಾನದ ಘೋಷಣೆ ನೀಡಿದ್ದಾರೆ.
ಎಫ್ಐಆರ್ ನಲ್ಲಿ ಗುರುತಿಸಲ್ಪಟ್ಟ ಆರೋಪಿಗಳಾದ ಮುಸ್ತಫಾ ಪೈಚಾರ್, ಅಬುಬಕ್ಕರ್ ಸಿದ್ದಿಕ್, ಉಮ್ಮರ್ ಫಾರುಕ್, ಕೋಡಾಜೆ ಮಹಮ್ಮದ್ ಶರೀಫ್, ಮಸೂದ್ ಅಗ್ನಾಡಿ ಎಂಬವರ ಪತ್ತೆಗಾಗಿ ಮತ್ತೊಂದು ಗಡುವು ನೀಡಿದ್ದಾರೆ. ಈ ಹಿಂದಿನ ಗಡುವು ಕಳೆದರೂ ಆರೋಪಿಗಳ ಸುಳಿವು ಸಿಗದೇ ಇದ್ದುದರಿಂದ ಆ ಪೈಕಿ ಕೆಲವರು ವಿದೇಶಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿತ್ತು. ಇದೀಗ ಗಡುವು ವಿಸ್ತರಿಸಲಾಗಿದ್ದು ಆಸ್ತಿ ಮುಟ್ಟುಗೋಲು ಹಾಕಲು ತಯಾರಿ ನಡೆಸಿದ್ಯಾ ಎನ್ನುವ ಅನುಮಾನ ಹುಟ್ಟಿಸಿದೆ.
Final calling for accused of Praveen Nettaru by NIA in Sullia.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am