ಬ್ರೇಕಿಂಗ್ ನ್ಯೂಸ್
16-07-23 04:11 pm Mangalore Correspondent ಕರಾವಳಿ
ಮಂಗಳೂರು, ಜುಲೈ 16: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಗಳ ಪತ್ತೆಗಾಗಿ ಮತ್ತೆ ಎನ್ಐಎ ಅಧಿಕಾರಿಗಳು ಎಚ್ಚರಿಕೆ ನೀಡಿದ್ದು ಕೋರ್ಟಿಗೆ ಶರಣಾಗಲು ಆಗಸ್ಟ್ 18ರ ಗಡುವು ನೀಡಿದ್ದಾರೆ.
ಆಗಸ್ಟ್ 18 ರೊಳಗೆ ಬೆಂಗಳೂರಿನ ಎನ್ಐಎ ಕೋರ್ಟಿಗೆ ಶರಣಾಗುವಂತೆ ಸೂಚಿಸಿ ಎನ್ಐಎ ಅಧಿಕಾರಿಗಳು ಆರೋಪಿಗಳ ಮನೆ ಗೋಡೆ, ಸಾರ್ವಜನಿಕ ಪ್ರದೇಶದಲ್ಲಿ ವಾರಂಟ್ ನೋಟಿಸ್ ಅಂಟಿಸಿದ್ದಾರೆ. ಸುಳ್ಯದ ಆಸುಪಾಸು ಮತ್ತು ಬೆಳ್ಳಾರೆಯಲ್ಲಿರುವ ಆರೋಪಿಗಳ ಮನೆಗಳಿಗೆ ಅಧಿಕಾರಿಗಳು ಭೇಟಿ ನೀಡಿದ್ದು ಕೋರ್ಟ್ ವಾರಂಟ್ ಬಗ್ಗೆ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಸ್ಥಳೀಯ ಪೊಲೀಸರ ನೆರವಿನಲ್ಲಿ ಆಗಸ್ಟ್ 18ರೊಳಗೆ ಕೋರ್ಟಿಗೆ ಶರಣಾಗಲು ಧ್ವನಿ ವರ್ಧಕದ ಮೂಲಕ ಪ್ರಕಟಣೆ ನೀಡಿದ್ದಾರೆ.



ಈ ಹಿಂದೆ ಜೂನ್ 30ರ ಒಳಗೆ ಕೋರ್ಟಿಗೆ ಶರಣಾಗದಿದ್ದರೆ ಆರೋಪಿಗಳ ಮನೆ, ಆಸ್ತಿ ಮುಟ್ಟುಗೋಲು ಹಾಕುವುದಾಗಿ ಎನ್ಐಎ ಎಚ್ಚರಿಕೆ ನೀಡಿತ್ತು. ಅಲ್ಲದೆ, ಆರೋಪಿಗಳು ಎಲ್ಲಿದ್ದಾರೆಂದು ಸುಳಿವು ಕೊಟ್ಟವರಿಗೆ ನಗದು ಬಹುಮಾನದ ಘೋಷಣೆ ನೀಡಿದ್ದಾರೆ.
ಎಫ್ಐಆರ್ ನಲ್ಲಿ ಗುರುತಿಸಲ್ಪಟ್ಟ ಆರೋಪಿಗಳಾದ ಮುಸ್ತಫಾ ಪೈಚಾರ್, ಅಬುಬಕ್ಕರ್ ಸಿದ್ದಿಕ್, ಉಮ್ಮರ್ ಫಾರುಕ್, ಕೋಡಾಜೆ ಮಹಮ್ಮದ್ ಶರೀಫ್, ಮಸೂದ್ ಅಗ್ನಾಡಿ ಎಂಬವರ ಪತ್ತೆಗಾಗಿ ಮತ್ತೊಂದು ಗಡುವು ನೀಡಿದ್ದಾರೆ. ಈ ಹಿಂದಿನ ಗಡುವು ಕಳೆದರೂ ಆರೋಪಿಗಳ ಸುಳಿವು ಸಿಗದೇ ಇದ್ದುದರಿಂದ ಆ ಪೈಕಿ ಕೆಲವರು ವಿದೇಶಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿತ್ತು. ಇದೀಗ ಗಡುವು ವಿಸ್ತರಿಸಲಾಗಿದ್ದು ಆಸ್ತಿ ಮುಟ್ಟುಗೋಲು ಹಾಕಲು ತಯಾರಿ ನಡೆಸಿದ್ಯಾ ಎನ್ನುವ ಅನುಮಾನ ಹುಟ್ಟಿಸಿದೆ.
Final calling for accused of Praveen Nettaru by NIA in Sullia.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm