ಬ್ರೇಕಿಂಗ್ ನ್ಯೂಸ್
16-07-23 04:11 pm Mangalore Correspondent ಕರಾವಳಿ
ಮಂಗಳೂರು, ಜುಲೈ 16: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಗಳ ಪತ್ತೆಗಾಗಿ ಮತ್ತೆ ಎನ್ಐಎ ಅಧಿಕಾರಿಗಳು ಎಚ್ಚರಿಕೆ ನೀಡಿದ್ದು ಕೋರ್ಟಿಗೆ ಶರಣಾಗಲು ಆಗಸ್ಟ್ 18ರ ಗಡುವು ನೀಡಿದ್ದಾರೆ.
ಆಗಸ್ಟ್ 18 ರೊಳಗೆ ಬೆಂಗಳೂರಿನ ಎನ್ಐಎ ಕೋರ್ಟಿಗೆ ಶರಣಾಗುವಂತೆ ಸೂಚಿಸಿ ಎನ್ಐಎ ಅಧಿಕಾರಿಗಳು ಆರೋಪಿಗಳ ಮನೆ ಗೋಡೆ, ಸಾರ್ವಜನಿಕ ಪ್ರದೇಶದಲ್ಲಿ ವಾರಂಟ್ ನೋಟಿಸ್ ಅಂಟಿಸಿದ್ದಾರೆ. ಸುಳ್ಯದ ಆಸುಪಾಸು ಮತ್ತು ಬೆಳ್ಳಾರೆಯಲ್ಲಿರುವ ಆರೋಪಿಗಳ ಮನೆಗಳಿಗೆ ಅಧಿಕಾರಿಗಳು ಭೇಟಿ ನೀಡಿದ್ದು ಕೋರ್ಟ್ ವಾರಂಟ್ ಬಗ್ಗೆ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಸ್ಥಳೀಯ ಪೊಲೀಸರ ನೆರವಿನಲ್ಲಿ ಆಗಸ್ಟ್ 18ರೊಳಗೆ ಕೋರ್ಟಿಗೆ ಶರಣಾಗಲು ಧ್ವನಿ ವರ್ಧಕದ ಮೂಲಕ ಪ್ರಕಟಣೆ ನೀಡಿದ್ದಾರೆ.
ಈ ಹಿಂದೆ ಜೂನ್ 30ರ ಒಳಗೆ ಕೋರ್ಟಿಗೆ ಶರಣಾಗದಿದ್ದರೆ ಆರೋಪಿಗಳ ಮನೆ, ಆಸ್ತಿ ಮುಟ್ಟುಗೋಲು ಹಾಕುವುದಾಗಿ ಎನ್ಐಎ ಎಚ್ಚರಿಕೆ ನೀಡಿತ್ತು. ಅಲ್ಲದೆ, ಆರೋಪಿಗಳು ಎಲ್ಲಿದ್ದಾರೆಂದು ಸುಳಿವು ಕೊಟ್ಟವರಿಗೆ ನಗದು ಬಹುಮಾನದ ಘೋಷಣೆ ನೀಡಿದ್ದಾರೆ.
ಎಫ್ಐಆರ್ ನಲ್ಲಿ ಗುರುತಿಸಲ್ಪಟ್ಟ ಆರೋಪಿಗಳಾದ ಮುಸ್ತಫಾ ಪೈಚಾರ್, ಅಬುಬಕ್ಕರ್ ಸಿದ್ದಿಕ್, ಉಮ್ಮರ್ ಫಾರುಕ್, ಕೋಡಾಜೆ ಮಹಮ್ಮದ್ ಶರೀಫ್, ಮಸೂದ್ ಅಗ್ನಾಡಿ ಎಂಬವರ ಪತ್ತೆಗಾಗಿ ಮತ್ತೊಂದು ಗಡುವು ನೀಡಿದ್ದಾರೆ. ಈ ಹಿಂದಿನ ಗಡುವು ಕಳೆದರೂ ಆರೋಪಿಗಳ ಸುಳಿವು ಸಿಗದೇ ಇದ್ದುದರಿಂದ ಆ ಪೈಕಿ ಕೆಲವರು ವಿದೇಶಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿತ್ತು. ಇದೀಗ ಗಡುವು ವಿಸ್ತರಿಸಲಾಗಿದ್ದು ಆಸ್ತಿ ಮುಟ್ಟುಗೋಲು ಹಾಕಲು ತಯಾರಿ ನಡೆಸಿದ್ಯಾ ಎನ್ನುವ ಅನುಮಾನ ಹುಟ್ಟಿಸಿದೆ.
Final calling for accused of Praveen Nettaru by NIA in Sullia.
21-05-25 09:16 pm
Bangalore Correspondent
CM Siddaramaiah, Rain, Visit: ಮಳೆ ಹಾನಿ ಪ್ರದೇಶ...
21-05-25 05:42 pm
Kumki elephants, Pawan Kalyan, Cm Siddaramaia...
21-05-25 02:35 pm
ED Raids, Parameshwar College, Ranya Rao: ಹೋಂ...
21-05-25 01:50 pm
KG Halli Police Sub inspector Nagraj, Wife su...
21-05-25 12:12 pm
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
21-05-25 09:30 pm
Mangalore Correspondent
Dr M A Saleem New DG&IGP: ಡಿಜಿಪಿ ಅಲೋಕ್ ಮೋಹನ್...
21-05-25 07:17 pm
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
ಕೊಂಡಾಣ ಜಾತ್ರೆಯಲ್ಲಿ ಮುತ್ತಣ್ಣ ಶೆಟ್ಟಿ ಮುಂಡಾಸು ಕಟ...
20-05-25 06:59 pm
Manipal Rain, Udupi: ಕರಾವಳಿಯಲ್ಲಿ ದಿಢೀರ್ ಮಳೆಗಾ...
20-05-25 02:03 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm