Mangalore Adyar Accident: ಅಡ್ಯಾರ್ ; ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು

19-07-23 01:23 pm       Mangalore Correspondent   ಕರಾವಳಿ

ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.‌

ಮಂಗಳೂರು, ಜುಲೈ 19: ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.‌

ವಳಚ್ಚಿಲ್ ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ, ಕೇರಳ ಮೂಲದ ಮಹಮ್ಮದ್ ನಶತ್ (21) ಮೃತ ವಿದ್ಯಾರ್ಥಿ. ಯುವಕ ಪಡೀಲ್ ಕಡೆಯಿಂದ ವಳಚ್ಚಿಲ್ ಕಾಲೇಜು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ, ಸ್ಕಿಡ್ ಆಗಿದ್ದು ಡಿವೈಡರ್ ಬಡಿದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ. 

11.40ರ ಸುಮಾರಿಗೆ ಘಟನೆ ನಡೆದಿದ್ದು ಮಂಗಳೂರು ಸಂಚಾರಿ ದಕ್ಷಿಣ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ.‌ ಕೇರಳ ಮೂಲದ ವಿದ್ಯಾರ್ಥಿ ಎನ್ನುವ ಮಾಹಿತಿಯಿದೆ. ಹೆಚ್ಚಿನ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.

ಅತಿ ವೇಗದ ಚಾಲನೆಯಿಂದಲೇ ಅಪಘಾತ ಆಗಿದೆಯೆಂದು ಪೊಲೀಸರು ತಿಳಿಸಿದ್ದಾರೆ. ‌

Mangalore Adyar Bike Accident, valachil Srinivas engineering college students killed on spot. The Deceased has been identified as Mohammed Nashath. The accident occurred while he was on his way to college from Padil.