ಬ್ರೇಕಿಂಗ್ ನ್ಯೂಸ್
04-11-20 02:52 pm Udupi Correspondent ಕರಾವಳಿ
ಉಡುಪಿ, ನ.4: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೆಸರಿನಲ್ಲಿ ನಕಲಿ ಇಮೇಲ್ ಐಡಿ ಸೃಷ್ಟಿಸಿ ಮಣಿಪಾಲ ವಿಶ್ವವಿದ್ಯಾನಿಲಯದ ಕುಲಸಚಿವರಿಗೆ ಇ ಮೇಲ್ ಸಂದೇಶ ಕಳುಹಿಸಿ ವಂಚಿಸಲು ಯತ್ನಿಸಿದ ಪ್ರಕರಣ ನಡೆದಿದೆ.
ನ.1ರಂದು ಅಪರಿಚಿತ ವ್ಯಕ್ತಿ ‘ಸಿಎಂ ಕರ್ನಾಟಕ’ ಎಂಬ ನಕಲಿ ಮೇಲ್ ಐಡಿಯನ್ನು ಸೃಷ್ಟಿಸಿ, ಮುಖ್ಯಮಂತ್ರಿ ಕಚೇರಿಯಿಂದ ಇ- ಮೇಲ್ ಕಳುಹಿಸಿದ ರೀತಿ ಮೇಲ್ ಬಂದಿತ್ತು. ಮಣಿಪಾಲ ಅಕಾಡಮಿ ಆಫ್ ಹೈಯರ್ ಎಜ್ಯುಕೇಶನ್(ಮಾಹೆ) ಕುಲಸಚಿವ ಡಾ.ನಾರಾಯಣ ಸಭಾಹಿತ್ ಅವರ ರಿಜಿಸ್ಟಾರ್ ವಿಭಾಗದ ಮೇಲ್ ಐಡಿಗೆ ಇಮೇಲ್ ಸಂದೇಶ ಕಳುಹಿಸಲಾಗಿತ್ತು ಎಂದು ಉಡುಪಿ ಸೈಬರ್ ಠಾಣೆಗೆ ದೂರು ನೀಡಲಾಗಿದೆ.

ಈ ಸಂದೇಶದಲ್ಲಿ ‘ಮಾಹೆಯ ಶಿಕ್ಷಣ ಸಂಸ್ಥೆಗಳನ್ನು ಪುನಾರಂಭಿಸುವುದರ ವಿರುದ್ಧ ಇಲ್ಲಿನ ವಿವಿಧ ದೇಶಗಳ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ದೂರುಗಳು ಬಂದಿವೆ. ಕಾಲೇಜುಗಳನ್ನು ನವೆಂಬರ್/ಡಿಸೆಂಬರ್ನಲ್ಲಿ ಪುನಾರಂಭಿಸಲು ಪರಿಸ್ಥಿತಿ ಸೂಕ್ತವಾಗಿಲ್ಲ. 2021ರ ಜ.2ರ ವರೆಗೆ ತರಗತಿ ಆರಂಭಿಸಬಾರದು. ಒಂದು ವೇಳೆ ಜ.2ರಿಂದ ಪ್ರಾರಂಭಿಸಬೇಕಾದರೆ ವಿದ್ಯಾರ್ಥಿಗಳ ಪೋಷಕರಿಂದ ಒಪ್ಪಿಗೆ ಪಡೆಯಬೇಕು’ ಎಂಬುದಾಗಿ ಮೇಲ್ ಮಾಡಿ ಯಾಮಾರಿಸಿದ್ದಾನೆ.
ಮುಖ್ಯಮಂತ್ರಿ ಹೆಸರಲ್ಲಿ ಸುಳ್ಳು ಇ-ಮೇಲ್ ಐಡಿಯನ್ನು ಸೃಷ್ಟಿಸಿದ್ದಲ್ಲದೆ, ಇಮೇಲ್ ಸಂದೇಶವನ್ನು ಮುಖ್ಯಮಂತ್ರಿಯವರೇ ಕಳುಹಿಸಿರುವ ರೀತಿಯಲ್ಲಿ ಸಂಸ್ಥೆಗೆ ತಪ್ಪು ಮಾಹಿತಿಯನ್ನು ನೀಡಿ ವಂಚಿಸಿರುವುದಾಗಿ ಡಾ.ನಾರಾಯಣ ಸಭಾಹಿತ್ ನೀಡಿರುವ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
A complaint has been lodged by Manipal University in the cyber crime police station for sending fake email in the name of Karnataka CM Yediyurappa.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm