ಬ್ರೇಕಿಂಗ್ ನ್ಯೂಸ್
21-07-23 03:34 pm Mangalore Correspondent ಕರಾವಳಿ
ಮಂಗಳೂರು, ಜುಲೈ 21: ನೈತಿಕ ಪೊಲೀಸ್ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಬಜರಂಗದಳ ಕಾರ್ಯಕರ್ತರಿಗೆ ಪೊಲೀಸರು ನೋಟೀಸ್ ನೀಡಿದ್ದು, ನಿಮ್ಮನ್ನು ಯಾಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡಬಾರದು ಎಂದು ಪ್ರಶ್ನೆ ಮಾಡಿದ್ದಾರೆ.
ಇತ್ತೀಚೆಗೆ ಮರೋಳಿಯಲ್ಲಿ ನಡೆದಿದ್ದ ಹೋಳಿ ಆಚರಣೆಗೆ ಅಡ್ಡಿ ಪಡಿಸಿದ್ದು ಮತ್ತು ಕಂಕನಾಡಿಯಲ್ಲಿ ಸುಲ್ತಾನ್ ಗೋಲ್ಡ್ ಜುವೆಲ್ಲರಿಗೆ ನುಗ್ಗಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಬಾಲಚಂದ್ರ ಅತ್ತಾವರ, ಗಣೇಶ್ ಅತ್ತಾವರ ಮತ್ತು ಜಯಪ್ರಕಾಶ್ ಶಕ್ತಿನಗರ ಎಂಬ ಮೂವರ ವಿರುದ್ಧ ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ.
ಈ ಬಗ್ಗೆ ಸ್ಥಳೀಯ ಠಾಣೆಗಳ ಇನ್ಸ್ ಪೆಕ್ಟರ್ ಗಳು ನೀಡಿರುವ ವರದಿ ಆಧರಿಸಿ ಈ ಮೂವರನ್ನು ಮಂಗಳೂರು ನಗರ ಪೊಲೀಸ್ ವಿಭಾಗದ ಡಿಸಿಪಿ ಅಂಶುಕುಮಾರ್ ಮುಂದೆ ಹಾಜರಾಗಲು ನೋಟೀಸ್ ನೀಡಲಾಗಿದೆ. ಪದೇ ಪದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವುದು, ಅಪರಾಧಗಳಿಗೆ ಪರೋಕ್ಷವಾಗಿ ಸಹಾಯ ಮಾಡುವುದು, ಸಮಾಜದಲ್ಲಿ ಭೀತಿಯ ವಾತಾವರಣ ಸೃಷ್ಟಿಸುತ್ತಿದ್ದಾರೆಂಬ ಕಾರಣವೊಡ್ಡಿ ಈ ಮೂವರಿಗೆ ನೋಟೀಸ್ ನೀಡಲಾಗಿದೆ. ಮಂಗಳೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ರೀತಿಯ ಕ್ರಮ ಅನಿವಾರ್ಯ ಎಂದು ಆಯಾ ಠಾಣೆಗಳ ವ್ಯಾಪ್ತಿಯ ಅಧಿಕಾರಿಗಳು ಕಮಿಷನರಿಗೆ ವರದಿ ಮಾಡಿದ್ದರು. ಇದರಂತೆ ಜುಲೈ 21 ಅಥವಾ ಅದರ ಒಳಗೆ ಬಂದು ಲಿಖಿತ ಸ್ಪಷ್ಟನೆ ನೀಡುವಂತೆ ನೋಟೀಸ್ ನೀಡಲಾಗಿದೆ.

ಯಾವ ಸಂಘಟನೆಯವರು ಗೊತ್ತಿಲ್ಲ– ಕಮಿಷನರ್
ಈ ಬಗ್ಗೆ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅವರಲ್ಲಿ ಕೇಳಿದಾಗ, ಅಪರಾಧ ಕೃತ್ಯಗಳಲ್ಲಿ ತೊಡಗಿದವರು ನಮಗೆ ಆರೋಪಿಗಳು ಅಷ್ಟೇ. ಅವರು ಯಾವ ಸಂಘಟನೆಯವರು, ಅವರ ಹಿನ್ನೆಲೆಯೇನು ನಮಗೆ ಗೊತ್ತಿಲ್ಲ. ಪದೇ ಪದೇ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡವರ ವಿರುದ್ಧ ಕ್ರಮ ಜರುಗಿಸುತ್ತಿದ್ದೇವೆ. ನೈತಿಕ ಪೊಲೀಸ್ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರ ಮೇಲೆ ಪ್ರಸ್ತಾವನೆ ಬಂದಿದೆ. ಹೀಗಾಗಿ ಒಂದು ವರ್ಷದಲ್ಲಿ 60 ಮಂದಿಯನ್ನು ಗಡೀಪಾರು ಮಾಡಲು ಪಟ್ಟಿ ಮಾಡಿದ್ದೇವೆ. ಆ ಪೈಕಿ ಹಲವು ಸಂಘಟನೆಯವರು ಇರಬಹುದು. ಇಂಥವರ ವಿರುದ್ಧ ರೌಡಿ ಶೀಟ್ ತೆರೆಯೋದು, ಗೂಂಡಾ ಕಾಯ್ದೆ ಹೇರುವ ಪ್ರಕ್ರಿಯೆಯೂ ಆಗಲಿದೆ. ಜಿಲ್ಲೆಯ ಶಾಂತಿ ಕಾಪಾಡುವ ದೃಷ್ಟಿಯಿಂದ ಈ ರೀತಿಯ ಕ್ರಮ ಯಾವಾಗಲೂ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.
Moral Policing in Mangalore, three bajarang dal activist issued exile notice from Police Commissioner. Three who were booked in various moral policing cases have been issued notice to leave the district.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm