ಬ್ರೇಕಿಂಗ್ ನ್ಯೂಸ್
            
                        21-07-23 03:34 pm Mangalore Correspondent ಕರಾವಳಿ
            ಮಂಗಳೂರು, ಜುಲೈ 21: ನೈತಿಕ ಪೊಲೀಸ್ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಬಜರಂಗದಳ ಕಾರ್ಯಕರ್ತರಿಗೆ ಪೊಲೀಸರು ನೋಟೀಸ್ ನೀಡಿದ್ದು, ನಿಮ್ಮನ್ನು ಯಾಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡಬಾರದು ಎಂದು ಪ್ರಶ್ನೆ ಮಾಡಿದ್ದಾರೆ.
ಇತ್ತೀಚೆಗೆ ಮರೋಳಿಯಲ್ಲಿ ನಡೆದಿದ್ದ ಹೋಳಿ ಆಚರಣೆಗೆ ಅಡ್ಡಿ ಪಡಿಸಿದ್ದು ಮತ್ತು ಕಂಕನಾಡಿಯಲ್ಲಿ ಸುಲ್ತಾನ್ ಗೋಲ್ಡ್ ಜುವೆಲ್ಲರಿಗೆ ನುಗ್ಗಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಬಾಲಚಂದ್ರ ಅತ್ತಾವರ, ಗಣೇಶ್ ಅತ್ತಾವರ ಮತ್ತು ಜಯಪ್ರಕಾಶ್ ಶಕ್ತಿನಗರ ಎಂಬ ಮೂವರ ವಿರುದ್ಧ ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ.
ಈ ಬಗ್ಗೆ ಸ್ಥಳೀಯ ಠಾಣೆಗಳ ಇನ್ಸ್ ಪೆಕ್ಟರ್ ಗಳು ನೀಡಿರುವ ವರದಿ ಆಧರಿಸಿ ಈ ಮೂವರನ್ನು ಮಂಗಳೂರು ನಗರ ಪೊಲೀಸ್ ವಿಭಾಗದ ಡಿಸಿಪಿ ಅಂಶುಕುಮಾರ್ ಮುಂದೆ ಹಾಜರಾಗಲು ನೋಟೀಸ್ ನೀಡಲಾಗಿದೆ. ಪದೇ ಪದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವುದು, ಅಪರಾಧಗಳಿಗೆ ಪರೋಕ್ಷವಾಗಿ ಸಹಾಯ ಮಾಡುವುದು, ಸಮಾಜದಲ್ಲಿ ಭೀತಿಯ ವಾತಾವರಣ ಸೃಷ್ಟಿಸುತ್ತಿದ್ದಾರೆಂಬ ಕಾರಣವೊಡ್ಡಿ ಈ ಮೂವರಿಗೆ ನೋಟೀಸ್ ನೀಡಲಾಗಿದೆ. ಮಂಗಳೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ರೀತಿಯ ಕ್ರಮ ಅನಿವಾರ್ಯ ಎಂದು ಆಯಾ ಠಾಣೆಗಳ ವ್ಯಾಪ್ತಿಯ ಅಧಿಕಾರಿಗಳು ಕಮಿಷನರಿಗೆ ವರದಿ ಮಾಡಿದ್ದರು. ಇದರಂತೆ ಜುಲೈ 21 ಅಥವಾ ಅದರ ಒಳಗೆ ಬಂದು ಲಿಖಿತ ಸ್ಪಷ್ಟನೆ ನೀಡುವಂತೆ ನೋಟೀಸ್ ನೀಡಲಾಗಿದೆ.

ಯಾವ ಸಂಘಟನೆಯವರು ಗೊತ್ತಿಲ್ಲ– ಕಮಿಷನರ್
ಈ ಬಗ್ಗೆ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅವರಲ್ಲಿ ಕೇಳಿದಾಗ, ಅಪರಾಧ ಕೃತ್ಯಗಳಲ್ಲಿ ತೊಡಗಿದವರು ನಮಗೆ ಆರೋಪಿಗಳು ಅಷ್ಟೇ. ಅವರು ಯಾವ ಸಂಘಟನೆಯವರು, ಅವರ ಹಿನ್ನೆಲೆಯೇನು ನಮಗೆ ಗೊತ್ತಿಲ್ಲ. ಪದೇ ಪದೇ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡವರ ವಿರುದ್ಧ ಕ್ರಮ ಜರುಗಿಸುತ್ತಿದ್ದೇವೆ. ನೈತಿಕ ಪೊಲೀಸ್ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರ ಮೇಲೆ ಪ್ರಸ್ತಾವನೆ ಬಂದಿದೆ. ಹೀಗಾಗಿ ಒಂದು ವರ್ಷದಲ್ಲಿ 60 ಮಂದಿಯನ್ನು ಗಡೀಪಾರು ಮಾಡಲು ಪಟ್ಟಿ ಮಾಡಿದ್ದೇವೆ. ಆ ಪೈಕಿ ಹಲವು ಸಂಘಟನೆಯವರು ಇರಬಹುದು. ಇಂಥವರ ವಿರುದ್ಧ ರೌಡಿ ಶೀಟ್ ತೆರೆಯೋದು, ಗೂಂಡಾ ಕಾಯ್ದೆ ಹೇರುವ ಪ್ರಕ್ರಿಯೆಯೂ ಆಗಲಿದೆ. ಜಿಲ್ಲೆಯ ಶಾಂತಿ ಕಾಪಾಡುವ ದೃಷ್ಟಿಯಿಂದ ಈ ರೀತಿಯ ಕ್ರಮ ಯಾವಾಗಲೂ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.
            
            
            Moral Policing in Mangalore, three bajarang dal activist issued exile notice from Police Commissioner. Three who were booked in various moral policing cases have been issued notice to leave the district.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm