ಬ್ರೇಕಿಂಗ್ ನ್ಯೂಸ್
22-07-23 07:34 pm Mangalore Correspondent ಕರಾವಳಿ
ಉಳ್ಳಾಲ, ಜು.22: ಇಂದು ಮಧ್ಯಾಹ್ನ ಬೀಸಿದ ಭಾರೀ ಬಿರುಗಾಳಿಗೆ ತೊಕ್ಕೊಟ್ಟು ಫ್ಲೈ ಓವರ್ ಬಳಿಯ ವಾಣಿಜ್ಯ ಕಟ್ಟಡವೊಂದರ ಮೂರನೇ ಮಹಡಿಯಲ್ಲಿ ಅಳವಡಿಸಿದ್ದ ಬೃಹತ್ ಹೋರ್ಡಿಂಗ್ ಮುರಿದು ಬಿದ್ದ ಪರಿಣಾಮ ಪಾದಚಾರಿ ವೃದ್ಧರೋರ್ವರು ಗಾಯಗೊಂಡಿದ್ದು, ತೊಕ್ಕೊಟ್ಟಿನಲ್ಲಿ ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಶನಿವಾರ ಮಧ್ಯಾಹ್ನ ಬೀಸಿದ ಬಿರುಗಾಳಿಗೆ ತೊಕ್ಕೊಟ್ಟಿನ ಗಂಗಾ ಕಾಂಪ್ಲೆಕ್ಸ್ ನ ಮೂರನೇ ಮಹಡಿಯಲ್ಲಿ ಅಳವಡಿಸಲಾಗಿದ್ದ ಬೃಹತ್ ಹೋರ್ಡಿಂಗ್ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಹೋರ್ಡಿಂಗ್ ಕೆಳಗೆ ಬೀಳದೆ ಕಟ್ಟಡದಲ್ಲೇ ಜೋತು ಬಿದ್ದ ಪರಿಣಾಮ ಯಾವುದೇ ದೊಡ್ಡ ಹಾನಿ ಉಂಟಾಗಿಲ್ಲ. ತೊಕ್ಕೊಟ್ಟು ಒಳಪೇಟೆ ಸಂಪರ್ಕ ರಸ್ತೆಯ ಬದಿಯಲ್ಲಿ ಇರುವ ಕಾಂಪ್ಲೆಕ್ಸ್ ನಲ್ಲಿ ಘಟನೆ ಸಂಭವಿಸಿದೆ. ನಿತ್ಯವೂ ಈ ಭಾಗದಲ್ಲಿ ಜನ ಸಂಚರಿಸುತ್ತಿದ್ದು ಹೋರ್ಡಿಂಗ್ ನೆಲಕ್ಕೆ ಬೀಳದ ಕಾರಣ ಸಂಭಾವ್ಯ ಅನಾಹುತ ತಪ್ಪಿದೆ.



ತೊಕ್ಕೊಟ್ಟು ಒಳಪೇಟೆಯಿಂದ ಹೆದ್ದಾರಿಗೆ ಬರುತ್ತಿದ್ದ ವೃದ್ಧರೋರ್ವರ ಮೈಗೆ ಹೋರ್ಡಿಂಗ್ನ ಕಬ್ಬಿಣದ ಸಲಾಕೆ ಬಿದ್ದು ಗಾಯವಾಗಿದ್ದು ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಟಿ ಜಿಟಿ ಸುರಿಯುತ್ತಿರುವ ಮಳೆಯ ನಡುವೆ ಕ್ರೇನ್ ಮುಖಾಂತರ ಹೋರ್ಡಿಂಗನ್ನ ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದ್ದು ವಾಹನ ಸಂಚಾರದಲ್ಲಿ ವ್ಯತ್ಯಯ ಆಗಿದೆ. ಉಳ್ಳಾಲ ಮತ್ತು ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Heavy winds and rain in Mangalore, huge hoarding falls, traffic blocked at Thokottu.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm