ಬ್ರೇಕಿಂಗ್ ನ್ಯೂಸ್
22-07-23 07:48 pm Mangalore Correspondent ಕರಾವಳಿ
ಮಂಗಳೂರು, ಜು.22: ಮಂಗಳೂರಿನ ಜನಪ್ರಿಯ ರೈಲುಗಳಿಗೆ ಕರಾವಳಿ ಕರ್ನಾಟಕದ ಪ್ರಮುಖ ವ್ಯಕ್ತಿಗಳು ಮತ್ತು ಸ್ಥಳಗಳ ಹೆಸರಿಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಸಚಿವರಿಗೆ ಬರೆದ ಪತ್ರದಲ್ಲಿ ಅವರು ಈ ಪ್ರದೇಶದಲ್ಲಿ ಸಂಚರಿಸುವ ರೈಲುಗಳಿಗೆ ಹೊಸ ಹೆಸರುಗಳನ್ನು ಪ್ರಸ್ತಾಪಿಸಿದ್ದಾರೆ.
ಬೆಂಗಳೂರು-ಮಂಗಳೂರು-ಕಣ್ಣೂರು ಎಕ್ಸ್ಪ್ರೆಸ್ ರೈಲಿಗೆ ರಾಣಿ ಅಬ್ಬಕ್ಕ ಎಕ್ಸ್ಪ್ರೆಸ್ ಎಂದು ಹೆಸರಿಡುವಂತೆ ಸಂಸದರು ಮನವಿ ಮಾಡಿದ್ದಾರೆ.
ತಿರುವನಂತಪುರಂ-ಮುಂಬೈ ಎಲ್ಟಿಟಿ ಎಕ್ಸ್ಪ್ರೆಸ್ಗೆ ನೇತ್ರಾವತಿ ಎಕ್ಸ್ಪ್ರೆಸ್ ಮತ್ತು ಎರ್ನಾಕುಲಂ-ಹಜರತ್ ನಿಜಾಮುದ್ದೀನ್ ರೈಲಿಗೆ ಮಂಗಳಾ ಲಕ್ಷದ್ವೀಪ ಎಕ್ಸ್ಪ್ರೆಸ್ ಎಂದು ಹೆಸರಿಡಿ. ಇದರಿಂದ ಪ್ರಯಾಣಿಕರು ತಮ್ಮ ಪ್ರಾದೇಶಿಕ ಹೆಸರುಗಳಿಂದ ರೈಲುಗಳನ್ನು ಸುಲಭವಾಗಿ ಗುರುತಿಸುತ್ತಾರೆ ಎಂದು ಕಟೀಲ್ ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಈ ಎರಡು ರೈಲುಗಳು ಮೊದಲು ಮಂಗಳೂರಿನಿಂದಲೇ ಆರಂಭವಾಗಿದ್ದವು. ಈ ರೈಲುಗಳಿಗೆ ಸ್ಥಳೀಯ ಹೆಸರಿಟ್ಟರೇ ಪ್ರಯಾಣಿಕರು ಸುಲಭವಾಗಿ ಗುರುತಿಸುತ್ತಾರೆ ಎಂದು ಕಟೀಲ್ ಹೇಳಿದ್ದಾರೆ.
ರೈಲುಗಳಿಗೆ ಈ ಪ್ರದೇಶದ ವ್ಯಕ್ತಿಗಳು, ಸ್ಥಳಗಳು ಮತ್ತು ನದಿಗಳ ಹೆಸರನ್ನು ಇಡುವುದರಿಂದ ಕರಾವಳಿ ಜಿಲ್ಲೆಯ ಜನರ ವಿಶ್ವಾಸ ಹೆಚ್ಚುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಇನ್ನು ಬೆಂಗಳೂರಿನಿಂದ ಮಂಗಳೂರಿಗೆ ಮೈಸೂರು ಮಾರ್ಗವಾಗಿ ಸಂಚರಿಸುವ (ರೈಲು ಸಂಖ್ಯೆ 16585/586) ರೈಲಿಗೆ ಮಂಗಳಾದೇವಿ ಎಕ್ಸ್ಪ್ರೆಸ್ ಎಂದು ನಾಮಕರಣ ಮಾಡುವಂತೆ ಕಟೀಲ್ ಅವರು ಮನವಿ ಮಾಡಿದ್ದಾರೆ.
Dakshina Kannada MP Nalin Kumar Kateel has urged union railway minster to name the popular trains of the city after eminent personalities and places of coastal Karnataka. He has written a letter to union railway minster Ashwini Vaishnav in this regard. Nalin urged the minister to name the train that runs between Bengaluru and Kannur via Mangaluru as Rani Abbakka Express.
21-05-25 09:16 pm
Bangalore Correspondent
CM Siddaramaiah, Rain, Visit: ಮಳೆ ಹಾನಿ ಪ್ರದೇಶ...
21-05-25 05:42 pm
Kumki elephants, Pawan Kalyan, Cm Siddaramaia...
21-05-25 02:35 pm
ED Raids, Parameshwar College, Ranya Rao: ಹೋಂ...
21-05-25 01:50 pm
KG Halli Police Sub inspector Nagraj, Wife su...
21-05-25 12:12 pm
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
21-05-25 11:09 pm
HK News Desk
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
Dr M A Saleem New DG&IGP: ಡಿಜಿಪಿ ಅಲೋಕ್ ಮೋಹನ್...
21-05-25 07:17 pm
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm