ಬ್ರೇಕಿಂಗ್ ನ್ಯೂಸ್
23-07-23 05:20 pm Mangalore Correspondent ಕರಾವಳಿ
ಮಂಗಳೂರು, ಜುಲೈ 23: ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗಿದ್ದು, ಕುಮಾರಧಾರಾ, ನೇತ್ರಾವತಿ ನದಿಗಳು ಕಡೆಗೂ ತುಂಬಿ ಹರಿದಿವೆ. ಕುಕ್ಕೆ ಸುಬ್ರಹ್ಮಣ್ಯ ಬಳಿ ಹರಿಯುವ ಕುಮಾರಧಾರ ನದಿಯಲ್ಲಿ ನೆರೆ ಬಂದಿದ್ದು, ದೇವಸ್ಥಾನ ಮಹಾದ್ವಾರದ ಬಳಿಯ ಸ್ನಾನಘಟ್ಟ ಭಾನುವಾರ ಬೆಳಗ್ಗೆಯೇ ಮುಳುಗಡೆಯಾಗಿದೆ.
ಧರ್ಮಸ್ಥಳದಲ್ಲಿ ನೇತ್ರಾವತಿ ನದಿಯೂ ತುಂಬಿ ಹರಿದಿದ್ದು, ಸ್ನಾನಘಟ್ಟ ಮುಳುಗಡೆಯಾಗಿದ್ದರಿಂದ ಜನರು ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಪಶ್ಚಿಮ ಘಟ್ಟದಲ್ಲಿ ಮಳೆ ಕೊರತೆಯಾಗಿದ್ದರಿಂದ ಈ ಬಾರಿಯ ಮಳೆಗಾಲದಲ್ಲಿ ಮೊದಲ ಬಾರಿ ತಡವಾಗಿಯಾದರೂ ಕುಮಾರಧಾರ ಮತ್ತು ನೇತ್ರಾವತಿ ನದಿ ತುಂಬಿಕೊಂಡಿದೆ. ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನಲ್ಲಿ ಭಾರೀ ಮಳೆಯಾಗಿದ್ದು, ಈ ಭಾಗದ ಸಣ್ಣ ಸಣ್ಣ ಹೊಳೆಗಳು ಉಕ್ಕಿ ಹರಿದಿವೆ.



2019ರಲ್ಲಿ ಬೆಟ್ಟಗಳ ನಡುವೆ ಸ್ಫೋಟಗೊಂಡು ಉಕ್ಕಿ ಹರಿದಿದ್ದ ಹರಿಹರ ಮತ್ತು ಕಡಮಕಲ್ ಎಸ್ಟೇಟ್ ಬಳಿಯ ಹೊಳೆಯಲ್ಲಿಯೂ ಭಾರೀ ನೀರು ಬಂದಿದ್ದು, ಈ ಭಾಗದ ನಿವಾಸಿಗಳು ಹಿಂದಿನ ರೀತಿಯಲ್ಲೇ ಬೆಟ್ಟ ಸ್ಫೋಟಗೊಳ್ಳುತ್ತಾ ಅನ್ನುವ ಆತಂಕದಲ್ಲಿದ್ದಾರೆ. ಸುಳ್ಯದ ಪಯಸ್ವಿನಿ ನದಿಯೂ ತುಂಬಿಕೊಂಡಿದ್ದು, ಭಾರೀ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಬೆಳ್ತಂಗಡಿಯಲ್ಲಿ ಭಾರೀ ಮಳೆಯಾಗಿದ್ದರಿಂದ ನೇತ್ರಾವತಿ ನದಿ ಬಂಟ್ವಾಳದ ಪಾಣೆಮಂಗಳೂರು, ಆಲಡ್ಕ ಪರಿಸರದಲ್ಲಿ ಪ್ರವಾಹ ಸೃಷ್ಟಿಸಿದೆ. ಆಲಡ್ಕ ಪರಿಸರದಲ್ಲಿ ನೇತ್ರಾವತಿ ನದಿ ನೀರು ಮನೆಗಳಿಗೆ ನುಗ್ಗಿದ್ದು, ಅಲ್ಲಿನ ನಿವಾಸಿಗಳನ್ನು ಗಂಜಿಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ.



ಬಂಟ್ವಾಳ, ಮಂಗಳೂರಿನಲ್ಲಿ ಭಾನುವಾರ ಮಳೆ ಕಡಿಮೆಯಾಗಿದ್ದು, ಬೆಳ್ತಂಗಡಿ, ಧರ್ಮಸ್ಥಳ, ಚಾರ್ಮಾಡಿ, ಸುಳ್ಯ ತಾಲೂಕಿನ ಬ್ರಹ್ಮಗಿರಿ, ಕೊಡಗಿನ ಭಾಗದಲ್ಲಿ ಭಾರೀ ಮಳೆಯಾಗಿದೆ. ಇದರಿಂದಾಗಿ ನದಿಗಳು ಭೋರ್ಗರೆಯುತ್ತ ಹರಿದಿದೆ. ಇದೇ ರೀತಿ ಮಳೆಯಾದಲ್ಲಿ ಸೋಮವಾರದ ಹೊತ್ತಿಗೆ ನೇತ್ರಾವತಿ ಅಪಾಯದ ಮಟ್ಟ ಮೀರಿ ಹರಿಯುವ ಸಾಧ್ಯತೆಯಿದೆ. ಭಾನುವಾರ ಸಂಜೆಯ ವೇಳೆಗೆ ಬಂಟ್ವಾಳದಲ್ಲಿ ಏಳುವರೆ ಮೀಟರ್ ಎತ್ತರದಲ್ಲಿ ಹರಿದಿದ್ದು, ಅಪಾಯದ ಮಟ್ಟ 9 ಮೀಟರ್ ಆಗಿದೆ. ಈಗಲೇ ಹಲವು ಕಡೆ ನದಿ ದಡಗಳಲ್ಲಿ ಕೃಷಿ ಭೂಮಿಗೆ ನೀರು ನುಗ್ಗಿದೆ.



ಲೇಡಿಹಿಲ್ ನಲ್ಲಿ ಧರಗುರುಳಿದ ಬೃಹತ್ ಮರ
ಮಂಗಳೂರು ನಗರದ ಲೇಡಿಹಿಲ್ ವೃತ್ತದಲ್ಲಿ ನಿನ್ನೆ ರಾತ್ರಿ ಗಾಳಿ ಮಳೆಗೆ ಬೃಹತ್ ಗಾತ್ರದ ಆಲದ ಮರ ಬುಡ ಸಮೇತ ಉರುಳಿ ಬಿದ್ದಿದೆ. ರಸ್ತೆಗಡ್ಡಲಾಗಿ ಬಿದ್ದ ಮರವನ್ನು ಕತ್ತರಿಸಿ ತೆರವು ಮಾಡುವ ಕಾರ್ಯ ರಾತ್ರಿಯೇ ನಡೆದಿತ್ತು. ತೆರವು ಕಾರ್ಯ ಆಗಿರಲಿಲ್ಲ. ಬೆಳಗ್ಗೆ ಒಂದು ಭಾಗದಲ್ಲಿ ಮರವನ್ನು ಕಡಿದು ರಸ್ತೆಯನ್ನು ಸಂಚಾರಕ್ಕೆ ಬಿಟ್ಟುಕೊಟ್ಟಿದ್ದರು. ಭಾರೀ ಗಾತ್ರದ ಮರವಾಗಿದ್ದರಿಂದ ಪೂರ್ತಿ ತೆರವು ಪ್ರಕ್ರಿಯೆ ಸಾಧ್ಯವಾಗಲಿಲ್ಲ. ರಸ್ತೆ ಕಾಂಕ್ರೀಟ್ ಆದ ಸಂದರ್ಭದಲ್ಲಿ ಮರದ ಸುತ್ತಲೂ ಸಿಮೆಂಟಿನಿಂದ ಮುಚ್ಚಿದ್ದರಿಂದಲೋ ಏನೋ, ಬೇರುಗಳು ಒಣಗಿ ಬುಡಸಮೇತ ಮರ ಉರುಳಿ ಬಿದ್ದಿದೆ.
Heavy rains lash coastal districts Mangalore and Udupi, IMD issues Orange alert, bathing ghat in Subrahmanya submerged in floodwaters. With the Kumaradhara river in spate because of heavy rains across coastal-Malnad Karnataka, the district administration has urged devotees to not visit Kukke Subrahmanya for the time being. The bathing ghat at Kukke Subrahmanya on the banks of the Kumaradhara river was submerged in the floodwaters.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm