ಬ್ರೇಕಿಂಗ್ ನ್ಯೂಸ್
24-07-23 08:20 pm Mangalore Correspondent ಕರಾವಳಿ
ಮಂಗಳೂರು, ಜುಲೈ 24: ಒಂದು ಕೈಲಿ ಮೊಬೈಲ್ ಹಿಡ್ಕೊಂಡು ಇನ್ನೊಂದು ಕೈಯಲ್ಲಿ ಸ್ಟೇರಿಂಗ್ ತಿರುಗಿಸುವ ಸಿಟ್ ಬಸ್ ಚಾಲಕರು ಮಂಗಳೂರಿನಲ್ಲಿ ಹಲವರಿದ್ದಾರೆ. ಈ ಬಗ್ಗೆ ಪ್ರಯಾಣಿಕರು ಚಾಲಕರು, ನಿರ್ವಾಹಕರ ಜೊತೆ ವಾಗ್ವಾದ ನಡೆಸಿದ್ದೂ ಇದೆ. ತಲಪಾಡಿಯಿಂದ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲಿ ಮೊಬೈಲ್ ಹಿಡ್ಕೊಂಡು ನಿರ್ಲಕ್ಷ್ಯದಿಂದ ಡ್ರೈವಿಂಗ್ ಮಾಡ್ತಿದ್ದ ಚಾಲಕನ ವಿಡಿಯೋ ಸೆರೆಯಾಗಿತ್ತು.
ಈ ಬಗ್ಗೆ ಹೆಡ್ ಲೈನ್ ಕರ್ನಾಟಕ ಸುದ್ದಿ ಬಿತ್ತರಿಸಿದ ಬೆನ್ನಲ್ಲೇ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಗದಾಪ್ರಹಾರ ಮಾಡಿದ್ದಾರೆ. ಬಸ್ಸನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಜಪ್ತಿ ಮಾಡಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಬಸ್ ಚಾಲಕನ ಚಾಲನಾ ಪರವಾನಗಿಯನ್ನು ರದ್ದುಪಡಿಸುವಂತೆ ಆರ್ಟಿಓ ಅಧಿಕಾರಿಗಳಿಗೆ ಶಿಫಾರಸು ಮಾಡಿದ್ದಾರೆ. ಬಸ್ ಚಾಲಕ ತನ್ನ ಆಂಡ್ರಾಯ್ಡ್ ಮೊಬೈಲನ್ನು ನೋಡುತ್ತ ಸ್ಟೇರಿಂಗ್ ತಿರುಗಿಸುತ್ತಾ, ಬಸ್ಸಿನಲ್ಲಿದ್ದ ಪ್ರಯಾಣಿಕರ ಜೀವದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.


ಪೊಲೀಸ್ ಕಮಿಷನರ್ ತುರ್ತು ಕ್ರಮ ಜರುಗಿಸುವ ಮೂಲಕ ನಿರ್ಲಕ್ಷ್ಯದ ಚಾಲನೆ ಮಾಡುವ ಬಸ್ ಚಾಲಕರಿಗೆ ಬಿಸಿ ಮುಟ್ಟಿಸಿದ್ದಾರೆ. ಮಂಗಳೂರು- ಮೂಡುಬಿದ್ರೆ ಸಂಚರಿಸುವ ಎಕ್ಸ್ ಪ್ರೆಸ್ ಬಸ್ಸುಗಳ ಚಾಲಕರು ಕೂಡ ಈ ರೀತಿ ಮೊಬೈಲ್ ನೋಡುತ್ತ ಬಸ್ ಚಲಾಯಿಸುವ ಬಗ್ಗೆ ಇತ್ತೀಚೆಗೆ ಪ್ರಯಾಣಿಕರು ದೂರಿಕೊಂಡಿದ್ದರು. ವಿಡಿಯೋ, ಫೋಟೋ ಸಾಕ್ಷ್ಯ ಇದ್ದರೆ, ಕ್ರಮ ಜರುಗಿಸಬಹುದೆಂದು ಸಂಚಾರಿ ಠಾಣೆ ಪೊಲೀಸರು ತಿಳಿಸಿದ್ದರು. ಇದೀಗ ತಮ್ಮ ಮೊಬೈಲನ್ನೇ ಚಾಲಕನ ನಿರ್ಲಕ್ಷ್ಯದ ವಿರುದ್ಧ ಪ್ರಯಾಣಿಕರು ಪ್ರಯೋಗಿಸಿದ್ದು ವಿಡಿಯೋ ಸೆರೆ ಹಿಡಿದು ಜಾಲತಾಣವನ್ನೇ ಮಾಧ್ಯಮ ಮಾಡಿಕೊಂಡಿದ್ದಾರೆ. ಬಸ್, ಇನ್ನಿತರ ವಾಹನಗಳಲ್ಲಿ ಮೊಬೈಲಿನಲ್ಲಿ ಮಾತನಾಡುತ್ತ, ನಿರ್ಲಕ್ಷ್ಯದಿಂದ ಸಾಗುವ ವಾಹನ ಚಾಲಕರಿಗೆ ಪೊಲೀಸ್ ಕಮಿಷನರ್ ನೀಡಿರುವ ಪ್ರಹಾರ ಬೆನ್ನಿಗೆ ಬರೆ ಎಳೆದಂತಾಗಿದೆ.
We appreciate #Mangalore City #Police Commissioner #KuldeepJains prompt action against the bus driver of route no. 42 for using his mobile device for kilometres while operating the vehicle. The bus has been seized, and DL to be cancelled. @alokkumar6994 @compolmlr pic.twitter.com/Pt19pkrh4I
— Headline Karnataka (@hknewsonline) July 24, 2023
Headline Karnataka Impact, Antony travels Bus seized after bus driver seen using mobile phone, Licence to be cancelled. Headline Karnataka reported news where a bus driver was seen using a mobile phone while driving route no. 42 bus to Talapady from Mangalore. Police Commissioner Kuldeep Jain, seized the bus right away, he stated that the bus driver's licence would be suspended.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm