ಬ್ರೇಕಿಂಗ್ ನ್ಯೂಸ್
25-07-23 12:41 pm Mangalore Correspondent ಕರಾವಳಿ
ಉಳ್ಳಾಲ, ಜು.25: ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿದ್ದು ತಮ್ಮದೇ ಜಿಲ್ಲೆಯ ಶಾಸಕರನ್ನ ಸದನದಿಂದ ಹೊರ ಹಾಕಿ ಸೇಡಿನ ರಾಜಕಾರಣ ನಡೆಸುತ್ತಿದ್ದಾರೆ, ಹಿಂದು ಸಂಘಟನೆಯ ಯುವಕರ ದಮನಕ್ಕಾಗಿ ಜಿಲ್ಲೆಯಲ್ಲಿ ಆ್ಯಂಟಿ ಕಮ್ಯುನಲ್ ಫೋರ್ಸ್ ರಚನೆ ಮಾಡಿದ್ದಾರೆ ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಂಪಲ ಆರೋಪಿಸಿದ್ದಾರೆ.
ತೊಕ್ಕೊಟ್ಟಿನ ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮಂಗಳೂರು ವಿಧಾನಸಭಾ ಕ್ಷೇತ್ರದ ಮತದಾರರು ತಲೆತಗ್ಗಿಸುವ ರೀತಿಯಲ್ಲಿ ಸಭಾಧ್ಯಕ್ಷರು ವಿಧಾನಸಭೆಯಲ್ಲಿ ವರ್ತನೆ ತೋರಿಸಿದ್ದಾರೆ. ಜಿಲ್ಲೆಯಲ್ಲಿ ಸೇಡಿನ ರಾಜಕೀಯ ಮಾಡುವುದರ ಜೊತೆಗೆ ಜಿಲ್ಲೆಯ ಶಾಸಕರಿಗೆ ಅವಮಾನ ಮಾಡುವ ಕಾರ್ಯವಾಗಿದೆ. ಪಕ್ಷದ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪೀಠಕ್ಕೆ ಅಗೌರವ ತೋರುವ ಕೆಲಸ ವಿಧಾನಸಭಾ ಅಧ್ಯಕ್ಷರಿಂದ ಆಗುತ್ತಿದೆ ಎಂದು ಕುಂಪಲ ಆರೋಪಿಸಿದರು.


ಐಎಎಸ್ ಅಧಿಕಾರಿಗಳು ಜನರ ಸೇವೆಗೆಂದು ತೆಗೆದುಕೊಂಡ ಜವಾಬ್ದಾರಿಯನ್ನು ಬದಲಾಯಿಸಿ ಜನಪ್ರತಿನಿಧಿಗಳಿಗೆ ಸೆಕ್ಯುರಿಟಿ ನೀಡಿರುವುದನ್ನ ಖಂಡಿಸುವುದು ಪ್ರತಿಪಕ್ಷದ ಜವಾಬ್ದಾರಿ. ಆದರೆ ಸಾಂವಿಧಾನಿಕವಾಗಿ ಹೇಗೆ ನಡೆದುಕೊಳ್ಳಬೇಕು ಅನ್ನುವ ಜವಾಬ್ದಾರಿಯನ್ನು ಇಟ್ಟುಕೊಳ್ಳಬೇಕಾದ ವಿಧಾನಸಭಾ ಅಧ್ಯಕ್ಷ ಖಾದರ್ ಅವರು ಕಾಂಗ್ರೆಸ್ ಪಕ್ಷದ ಏಜೆಂಟ್ ಆಗಿ ವರ್ತಿಸಿದ್ದಾರೆ. ದ.ಕ. ಜಿಲ್ಲೆಯಲ್ಲಿ ಆ್ಯಂಟಿ ಕಮ್ಯುನಲ್ ಫೋರ್ಸ್ ಕೇವಲ ಹಿಂದೂ ಸಂಘಟನೆಯ ಯುವಕರ ದಮನಕ್ಕೆ ರಚನೆಯಾಗಿದೆ. ಮೂವರು ಹಿಂದೂ ಯುವಕರಿಗೆ ನೋಟೀಸು ನೀಡಿ ಗಡೀಪಾರು ಮಾಡುವ ಕೆಲಸ ಮಾಡಿರುವುದು ಖಂಡನೀಯ. ಉದ್ರೇಕಕಾರಿಯಾಗಿ ಕೋಮುಗಲಭೆಗೆ ಪ್ರಚೋದಿಸುವ ರೀತಿಯಲ್ಲಿ ಕೆಲಸಗಳಾಗುತ್ತಿವೆ ಎಂದು ಆರೋಪಿಸಿದ ಅವರು ಚುನಾವಣೆ ಪೂರ್ವ ಕಂಡೀಷನ್ ಹಾಕಿ ಉಚಿತ ಭಾಗ್ಯಗಳನ್ನ ಕೊಡುವುದನ್ನು ಎಲ್ಲಿಯೂ ಹೇಳಿರಲಿಲ್ಲ. ಆದರೆ ಸದ್ಯ ಉಚಿತ ಭಾಗ್ಯಗಳಿಗಾಗಿ ಜನರನ್ನು ಅಲೆದಾಡಿಸುವ ಕೆಲಸ ರಾಜ್ಯ ಸರಕಾರ ಮಾಡುತ್ತಿದೆ. ರಾಜ್ಯ ಸರಕಾರ ಕೊಡುವ ಯಾವುದೇ ಯೋಜನೆಯೂ ಜನರ ತೆರಿಗೆಯ ಹಣವೇ ಹೊರತು ಕಾಂಗ್ರೆಸ್ ಪಕ್ಷದ ಹಣವಲ್ಲ. ಹಾಲಿನ ಬೆಲೆಯನ್ನು 3 ರೂ. ಏರಿಕೆ ಮಾಡುವ ಮೂಲಕ ಜನರಿಗೆ ದೊಡ್ಡ ಹೊಡೆತವನ್ನು ಸರಕಾರ ನೀಡಿದೆ ಎಂದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಮಾತನಾಡಿ ರಾಜ್ಯ ಕಾಂಗ್ರೆಸ್ ಬ್ರಿಟಿಷರ ದಬ್ಬಾಳಿಕೆಯ ರೀತಿ ನಡೆದುಕೊಳ್ಳುತ್ತಿದೆ. ಅತ್ಯಾಚಾರ, ಕೊಲೆ, ಕಳವು ನಡೆಸಿದ್ದಲ್ಲ. ಕೇವಲ ಹಿಂದೂ ಸಂಘಟನೆಯಲ್ಲಿ ತೊಡಗಿದ್ದಾರೆಂಬ ಕಾರಣಕ್ಕೆ ಯುವಕರನ್ನ ಗಡೀಪಾರು ಮಾಡುವವರು ಮುಂದಿನ ಐದು ವರ್ಷದಲ್ಲಿ ಏನು ಮಾಡಬಹುದು? ಹಿಂದೂ ಯುವಕರ ಗಡೀಪಾರನ್ನು ಪಕ್ಷ ಕಟುವಾಗಿ ಖಂಡಿಸುತ್ತದೆ. ಗ್ಯಾರಂಟಿ ಯೋಜನೆಗಾಗಿ ಮಹಿಳೆಯರ ಸರತಿ ಸಾಲು, ಉಚಿತ ಬಸ್ಸಿಗಾಗಿ ಪೇಚಾಟ, ಸರ್ವರ್ ಸಮಸ್ಯೆ, ವ್ಯವಸ್ಥೆಯೇ ಸರಿಯಿಲ್ಲದೆ ಯೋಜನೆ ಹೇಗೆ ಪೂರೈಸುತ್ತಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪ್ರಮುಖರಾದ ಯಶವಂತ್ ಅಮೀನ್, ಜಿತೇಂದ್ರ ಶೆಟ್ಟಿ ತಲಪಾಡಿ, ಹೇಮಂತ್ ಶೆಟ್ಟಿ ದೇರಳಕಟ್ಟೆ ಮುಂತಾದವರು ಉಪಸ್ಥಿತರಿದ್ದರು.
Bjp Satish Kumpala slams Speaker UT Khader, says has a cogress puppet, Anti Communal wing is to threat Hindu youths he slammed in Mangalore.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 07:52 pm
HK News Staffer
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm