ಬ್ರೇಕಿಂಗ್ ನ್ಯೂಸ್
29-07-23 12:36 pm Mangalore Correspondent ಕರಾವಳಿ
ಉಳ್ಳಾಲ, ಜು.29: ಅಪರಿಮಿತ ವೇಗದಿಂದ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚತುಷ್ಪಥ ರಸ್ತೆಯ ಡಿವೈಡರ್ನಿಂದ ನೆಗೆದಿದ್ದು ಸ್ಕೂಟರ್ ಸವಾರನೋರ್ವ ಕೂದಲೆಲೆಯ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ರಾ.ಹೆ.66 ರ ತೊಕ್ಕೊಟ್ಟಿನ ಕಾಪಿಕಾಡಿನಲ್ಲಿ ನಡೆದಿದೆ.
ಅಪರಿಮಿತ ವೇಗದಲ್ಲಿ ತೊಕ್ಕೊಟ್ಟಿನಿಂದ ತಲಪಾಡಿಯ ಕಡೆ ಧಾವಿಸುತ್ತಿದ್ದ ಕಾರು ರಾ.ಹೆ.66 ರ ಓವರ್ ಬ್ರಿಡ್ಜ್-ಕಾಪಿಕಾಡು ನಡುವಿನ ಡಿವೈಡರ್ ನಿಂದ ಇನ್ನೊಂದು ಬದಿಯ ರಸ್ತೆಗೆ ನೆಗೆದಿದೆ. ಈ ವೇಳೆ ಕೊಲ್ಯದಿಂದ ತೊಕ್ಕೊಟ್ಟು ಕಡೆ ಸಾಗುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ ಹೊಡೆದಿದ್ದು ಚಾಲಕ ಪವಾಡಸದೃಶವಾಗಿ ಸಣ್ಣ,ಪುಟ್ಟ ಗಾಯಗಳಿಂದ ಪಾರಾಗಿದ್ದಾನೆ.


ಡಿವೈಡರ್ ನೆಗೆದು ಬಲ ಭಾಗದ ರಸ್ತೆಯ ಬದಿಯ ಮೋರಿಯಲ್ಲಿ ಕಾರು ನಿಂತಿದ್ದು ಕಾರಿನ ಚಾಲಕ ಮತ್ತು ಸಹಸವಾರ ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯ ಮುಂದೆಯೇ ಎಸ್ಕೇಪ್ ಆಗಿದ್ದಾರೆ. ಬೆಳಗ್ಗಿನ ವೇಳೆ ಕಾಪಿಕಾಡು ಹೆದ್ದಾರಿಯಲ್ಲಿ ವಾಹನ ದಟ್ಟನೆ ಹೆಚ್ಚಿರುತ್ತದೆ, ಅದೃಷ್ಟವಶಾತ್ ಅಪಘಾತದಿಂದ ಯಾವುದೇ ದುರ್ಘಟನೆ ನಡೆದಿಲ್ಲ. ಕಾರಿನಲ್ಲಿದ್ದವರು ಅಮಲು ಪದಾರ್ಥ ಸೇವಿಸಿದ್ದರೆಂದು ಘಟನಾ ಸ್ಥಳದಲ್ಲಿ ಜಮಾವಣೆಗೊಂಡಿದ್ದ ಜನರು ಪೊಲೀಸರಲ್ಲಿ ದೂರಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Thokottu Kapikad accident, two Wheeler escapes death in an inch after creta car rams scooter
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 07:52 pm
HK News Staffer
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm