ಬ್ರೇಕಿಂಗ್ ನ್ಯೂಸ್
29-07-23 03:45 pm Udupi Correspondent ಕರಾವಳಿ
ಉಡುಪಿ, ಜುಲೈ 29: ಉಡುಪಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖಾಧಿಕಾರಿಯನ್ನು ಬದಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದ ಮಂಜುನಾಥ್ ಗೌಡ ಅವರು ತನಿಖೆಯಲ್ಲಿ ಲೋಪ ಮಾಡಿದ್ದಾರೆಂದು ಬಿಜೆಪಿ ಆರೋಪಿಸಿ ಪ್ರತಿಭಟನೆ ನಡೆಸಿತ್ತು.
ಬಿಜೆಪಿಯ ಪ್ರತಿಭಟನೆಯ ಬೆನ್ನಲ್ಲೇ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಛಿಂದ್ರ, ತನಿಖಾಧಿಕಾರಿ ಮಂಜುನಾಥ್ ಗೌಡ ಅವರನ್ನು ಬದಲಿಸಿ ಕುಂದಾಪುರದ ಡಿವೈಎಸ್ ಬೆಳ್ಳಿಯಪ್ಪ ಎಂಬುವರಿಂದ ತನಿಖೆಯನ್ನು ನಡೆಸಲು ನಿರ್ಧರಿಸಲಾಗಿದ್ದು, ಅವರಿಗೆ ತನಿಖೆಯ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮತ್ತೊಂದೆಡೆ, ಈ ಪ್ರಕರಣದ ಆರೋಪಿಗಳಾದ ಮೂವರು ವಿದ್ಯಾರ್ಥಿನಿಯರನ್ನು ಜು. 29ರಂದು ವಿಚಾರಣೆಗೆ ಒಳಪಡಿಸಲಾಗಿದೆ. ವಿಚಾರಣೆಯ ವೇಳೆ ವಿದ್ಯಾರ್ಥಿನಿಯರು ಏನು ಹೇಳಿದರು ಎಂಬುದನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಈ ಪ್ರಕರಣದಲ್ಲಿ ವಿದ್ಯಾರ್ಥಿನಿಯರು ಈಗಾಗಲೇ ಜಾಮೀನು ಪಡೆದಿದ್ದಾರೆ.

ಪ್ರಿಯಾಂಕ್ ಖರ್ಗೆ ಕಿಡಿ :
ಉಡುಪಿ ವಿದ್ಯಾರ್ಥಿನಿಯರ ವಿಡಿಯೊ ಚಿತ್ರೀಕರಣ ಪ್ರಕರಣದಲ್ಲಿ ಬಿಜೆಪಿ ತನ್ನ ರಾಜಕೀಯ ಮುಂದುವರಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾದ ನಟಿ ಖುಷ್ಬೂ ಸುಂದರ್ ಅವರೇ ಖುದ್ದಾಗಿ, ಈ ಪ್ರಕರಣದಲ್ಲಿ ಯಾವುದೇ ವಿಡಿಯೋ ಚಿತ್ರೀಕರಣವಾಗಿಲ್ಲ. ವಿಡಿಯೋ ಚಿತ್ರೀಕರಣದ ಸಾಕ್ಷಿಗಳೇ ಸಿಕ್ಕಿಲ್ಲದಿದ್ದಾಗ ಕೇಸ್ ದಾಖಲಿಸಲು ಸಾಧ್ಯವಾಗುವುದೇ ಇಲ್ಲ ಎಂದು ಹೇಳಿದ್ದಾರೆ.

ಶೋಭಾ ಕರಂದ್ಲಾಜೆ ಆರೋಪ:
ಉಡುಪಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಈ ಹಿಂದೆಯೂ ಉಡುಪಿಯ ಆ ವೈದ್ಯಕೀಯ ಕಾಲೇಜಿನಲ್ಲಿ ಇಂಥ ಘಟನೆಗಳು ನಡೆದಿರುವುದಾಗಿ ಹೇಳಲಾಗಿದೆ. ಆ ಕಾಲೇಜಿನ ಹಿಂಬಾಗದ ಕಾಂಪೌಂಡ್ ನ ಬಳಿ ಮೂವರು ಹುಡುಗರು ಬರುತ್ತಿದ್ದರಂತೆ. ಅವರು ಯಾರು ಎಂಬಿತ್ಯಾದಿ ವಿಚಾರಗಳನ್ನು ತನಿಖೆಯಲ್ಲಿ ಪತ್ತೆ ಹಚ್ಚಬೇಕಿದೆ ಎಂದು ಆಗ್ರಹಿಸಿದ್ದಾರೆ.
Udupi college Video case, Investigation police officer changed aftet BJP protest, DYSP Belliappa New officer by SP.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm