ಬ್ರೇಕಿಂಗ್ ನ್ಯೂಸ್
30-07-23 03:16 pm Udupi Correspondent ಕರಾವಳಿ
ಉಡುಪಿ, ಜುಲೈ 30: ಇತ್ತೀಚೆಗೆ ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತ ವೀಕ್ಷಣೆ ವೇಳೆ ಆಯತಪ್ಪಿ ಬಿದ್ದು ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಭಾನುವಾರ ಬೆಳಗ್ಗೆ ಪತ್ತೆಯಾಗಿದೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್ ನಗರ ಸುಣ್ಣದ ಹಳ್ಳಿ ನಿವಾಸಿ ಶರತ್ ಕುಮಾರ್ (23) ಮೃತಪಟ್ಟವರು. ಕಳೆದೆರಡು ದಿನಗಳಿಂದ ಘಟ್ಟ ಪ್ರದೇಶದಲ್ಲಿ ಮಳೆ ಇಳಿಮುಖವಾಗಿದ್ದು ನೀರಿನ ಹರಿವು ಕಡಿಮೆಯಾಗಿದೆ. ಎನ್ ಡಿಆರ್ ಎಫ್ ಸಿಬಂದಿ ಹುಡುಕಾಡುತ್ತಿದ್ದಾಗ ಶರತ್ ಬಿದ್ದ ಜಾಗದಿಂದ 200 ಮೀಟರ್ ದೂರದ ಕಲ್ಲು ಬಂಡೆಯೊಳಗೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಶರತ್ ಒಂದು ವಾರದ ಹಿಂದೆ ಕಳೆದ ಭಾನುವಾರ (ಜು.23ರಂದು) ಸ್ನೇಹಿತನೊಂದಿಗೆ ಅರಶಿನಗುಂಡಿ ಜಲಪಾತ ವೀಕ್ಷಣೆಗೆ ಬಂದಿದ್ದರು. ಮಧ್ಯಾಹ್ನ 3:30ರ ಸುಮಾರಿಗೆ ಜಲಪಾತ ಬಳಿ ಬಂಡೆಯ ಮೇಲೆ ನಿಂತಿದ್ದ ಶರತ್ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದು ಸೌಪರ್ಣಿಕಾ ನದಿಯ ಸೆಳೆತಕ್ಕೆ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದರು. ಜಲಪಾತಕ್ಕೆ ಬೀಳುತ್ತಿದ್ದ ದೃಶ್ಯಗಳು ಸ್ನೇಹಿತನ ಮೊಬೈಲ್ ನಲ್ಲಿ ಸೆರೆಯಾಗಿತ್ತು.
ಶರತ್ ಅವರೊಂದಿಗಿದ್ದ ಸ್ನೇಹಿತ ಮಾಹಿತಿ ನೀಡಿದ ತರುವಾಯ ಆತನ ಪತ್ತೆಗೆ ಶೋಧ ಕಾರ್ಯ ಬಿರುಸುಗೊಂಡಿತ್ತು. ಕೊಲ್ಲೂರು ಠಾಣೆ ಉಪನಿರೀಕ್ಷಕಿಯರಾದ ಜಯಶ್ರೀ, ಸುಧಾರಾಣಿ, ಠಾಣೆ ಸಿಬ್ಬಂದಿ, ಅರಣ್ಯ ಇಲಾಖೆ, ಎಸ್.ಡಿ.ಆರ್.ಎಫ್ ತಂಡ, ಉಡುಪಿ, ಬೈಂದೂರು, ಕುಂದಾಪುರ ಅಗ್ನಿಶಾಮಕ ತಂಡದ ನೇತೃತ್ವದಲ್ಲಿ ಕಳೆದ ಒಂದು ವಾರದಿಂದ ವಿಪರೀತ ಮಳೆ, ಜಿಗಣೆ ಕಾಟದ ನಡುವೆ ಕಾರ್ಯಾಚರಣೆ ನಡೆಸಲಾಗಿತ್ತು.
Arashinagundi falls missing sharath body found 200 meters below the falls in the rocks. The body was found wedged underneath a rock. Sharath, hailing from Bhadravathi, had visited Arashinagundi Falls on July 23 for sightseeing.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm