ಬ್ರೇಕಿಂಗ್ ನ್ಯೂಸ್
31-07-23 10:51 pm Mangalore Correspondent ಕರಾವಳಿ
ಮಂಗಳೂರು, ಜುಲೈ 31: ರಸ್ತೆ ನಡುವಿನ ಹೊಂಡ ತಪ್ಪಿಸಲು ಯತ್ನಿಸಿ, ಬೈಕ್ ಸವಾರನೊಬ್ಬ ನಿಂತಿದ್ದ ಓಮ್ನಿ ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ನಗರದ ಬಿಕರ್ನಕಟ್ಟೆ ಬಳಿ ಸಂಭವಿಸಿದೆ.
ಕೋಡಿಕಲ್ ನಿವಾಸಿ, ನಗರದ ಸಂತ ಅಲೋಶಿಯಸ್ ಕಾಲೇಜಿನ ಪದವಿ ವಿದ್ಯಾರ್ಥಿ ಅಂಕಿತ್ ಜಿ.(21) ಮೃತಪಟ್ಟ ಯುವಕ. ಅಂಕಿತ್ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದು ತಂದೆ, ತಾಯಿ ಮತ್ತು ಅಣ್ಣನನ್ನು ಅಗಲಿದ್ದಾರೆ.

ಭಾನುವಾರ ರಾತ್ರಿ 10.30ರ ವೇಳೆಗೆ ಅಂಕಿತ್ ತನ್ನ ಗೆಳೆಯ ಆರ್ಯನ್ ಅವರನ್ನು ಕುಲಶೇಖರದಲ್ಲಿರುವ ಅವರ ಮನೆಗೆ ಬಿಟ್ಟು ಕೋಡಿಕಲ್ ಕಡೆಗೆ ವಾಪಸಾಗುತ್ತಿದ್ದಾಗ ಘಟನೆ ನಡೆದಿದೆ. ಬಿಕರ್ನಕಟ್ಟೆಯ ಮಸೀದಿ ಎದುರು ರಸ್ತೆ ಹೊಂಡ ತಪ್ಪಿಸಲು ಯತ್ನಿಸಿ ರಸ್ತೆ ಬದಿ ನಿಲ್ಲಿಸಿದ್ದ ಆಮ್ನಿ ಕಾರಿನ ಹಿಂಬದಿಗೆ ಢಿಕ್ಕಿಯಾಗಿತ್ತು. ಅಂಕಿತ್ ಬೈಕ್ನಿಂದ ಚರಂಡಿಗೆ ಬಿದ್ದು ಗಾಯಗೊಂಡಿದ್ದರೆ, ಬೈಕ್ ಪಲ್ಟಿಯಾಗಿ ರಸ್ತೆ ಪಕ್ಕದ ನರ್ಸರಿಯ ಗೇಟಿಗೆ ಡಿಕ್ಕಿ ಹೊಡೆದು ನಿಂತಿತ್ತು. ತಲೆಗೆ ಗಂಭೀರ ಸ್ವರೂಪದ ಗಾಯಗೊಂಡ ಅಂಕಿತ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಸ್ಪತ್ರೆಯಲ್ಲೇ ಅಂಕಿತ್ ಮೃತಪಟ್ಟಿದ್ದರು. ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜುಲೈ 18ರಂದು ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿ ಪೆಟ್ರೋಲ್ ಪಂಪ್ ಸಮೀಪ ಹೊಂಡ ತಪ್ಪಿಸಲು ಯತ್ನಿಸಿದ್ದ ದ್ವಿಚಕ್ರ ಸವಾರನಿಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದ ಘಟನೆ ನಡೆದಿತ್ತು. ಮಂಗಳೂರಿನಲ್ಲಿ ರಸ್ತೆ ಹೊಂಡದ ಕಾರಣಕ್ಕೆ ಎರಡನೇ ಬಲಿಯಾಗಿದೆ.
Mangalore Pothole Accident, 21 year old boy dies in order to avoid pothole at Bikarnakatte. The deceased has been identified as Ankith G. The accident happened at 10:30 night on Sunday. A bike rider was killed as he lost control over the bike he was riding in a bid to avoid a pothole and crashed into a parked van late night on Sunday July 30 near Infant Jesus Church entrance opposite Pramod Nursery.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm