ಬ್ರೇಕಿಂಗ್ ನ್ಯೂಸ್
            
                        31-07-23 10:51 pm Mangalore Correspondent ಕರಾವಳಿ
            ಮಂಗಳೂರು, ಜುಲೈ 31: ರಸ್ತೆ ನಡುವಿನ ಹೊಂಡ ತಪ್ಪಿಸಲು ಯತ್ನಿಸಿ, ಬೈಕ್ ಸವಾರನೊಬ್ಬ ನಿಂತಿದ್ದ ಓಮ್ನಿ ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ನಗರದ ಬಿಕರ್ನಕಟ್ಟೆ ಬಳಿ ಸಂಭವಿಸಿದೆ.
ಕೋಡಿಕಲ್ ನಿವಾಸಿ, ನಗರದ ಸಂತ ಅಲೋಶಿಯಸ್ ಕಾಲೇಜಿನ ಪದವಿ ವಿದ್ಯಾರ್ಥಿ ಅಂಕಿತ್ ಜಿ.(21) ಮೃತಪಟ್ಟ ಯುವಕ. ಅಂಕಿತ್ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದು ತಂದೆ, ತಾಯಿ ಮತ್ತು ಅಣ್ಣನನ್ನು ಅಗಲಿದ್ದಾರೆ.

ಭಾನುವಾರ ರಾತ್ರಿ 10.30ರ ವೇಳೆಗೆ ಅಂಕಿತ್ ತನ್ನ ಗೆಳೆಯ ಆರ್ಯನ್ ಅವರನ್ನು ಕುಲಶೇಖರದಲ್ಲಿರುವ ಅವರ ಮನೆಗೆ ಬಿಟ್ಟು ಕೋಡಿಕಲ್ ಕಡೆಗೆ ವಾಪಸಾಗುತ್ತಿದ್ದಾಗ ಘಟನೆ ನಡೆದಿದೆ. ಬಿಕರ್ನಕಟ್ಟೆಯ ಮಸೀದಿ ಎದುರು ರಸ್ತೆ ಹೊಂಡ ತಪ್ಪಿಸಲು ಯತ್ನಿಸಿ ರಸ್ತೆ ಬದಿ ನಿಲ್ಲಿಸಿದ್ದ ಆಮ್ನಿ ಕಾರಿನ ಹಿಂಬದಿಗೆ ಢಿಕ್ಕಿಯಾಗಿತ್ತು. ಅಂಕಿತ್ ಬೈಕ್ನಿಂದ ಚರಂಡಿಗೆ ಬಿದ್ದು ಗಾಯಗೊಂಡಿದ್ದರೆ, ಬೈಕ್ ಪಲ್ಟಿಯಾಗಿ ರಸ್ತೆ ಪಕ್ಕದ ನರ್ಸರಿಯ ಗೇಟಿಗೆ ಡಿಕ್ಕಿ ಹೊಡೆದು ನಿಂತಿತ್ತು. ತಲೆಗೆ ಗಂಭೀರ ಸ್ವರೂಪದ ಗಾಯಗೊಂಡ ಅಂಕಿತ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಸ್ಪತ್ರೆಯಲ್ಲೇ ಅಂಕಿತ್ ಮೃತಪಟ್ಟಿದ್ದರು. ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜುಲೈ 18ರಂದು ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿ ಪೆಟ್ರೋಲ್ ಪಂಪ್ ಸಮೀಪ ಹೊಂಡ ತಪ್ಪಿಸಲು ಯತ್ನಿಸಿದ್ದ ದ್ವಿಚಕ್ರ ಸವಾರನಿಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದ ಘಟನೆ ನಡೆದಿತ್ತು. ಮಂಗಳೂರಿನಲ್ಲಿ ರಸ್ತೆ ಹೊಂಡದ ಕಾರಣಕ್ಕೆ ಎರಡನೇ ಬಲಿಯಾಗಿದೆ.
            
            
            Mangalore Pothole Accident, 21 year old boy dies in order to avoid pothole at Bikarnakatte. The deceased has been identified as Ankith G. The accident happened at 10:30 night on Sunday. A bike rider was killed as he lost control over the bike he was riding in a bid to avoid a pothole and crashed into a parked van late night on Sunday July 30 near Infant Jesus Church entrance opposite Pramod Nursery.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm