ಬ್ರೇಕಿಂಗ್ ನ್ಯೂಸ್
01-08-23 01:06 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಭಾರೀ ಕುತೂಹಲ ಮೂಡಿಸಿರುವ ಧರ್ಮಸ್ಥಳದ ಸೌಜನ್ಯಾ ಪ್ರಕರಣದ ಮರು ತನಿಖೆ ಆಗ್ರಹದ ಬಗ್ಗೆ ಸಿಎಂ ಸಿದ್ದರಾಮಯ್ಯ ಅಡ್ಡಗೋಡೆ ಮೇಲೆ ದೀಪ ಇಟ್ಟ ರೀತಿ ಉತ್ತರ ನೀಡಿದ್ದಾರೆ.
ಮರು ತನಿಖೆ ಮಾಡ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ, ಸೌಜನ್ಯಾ ಕೇಸನ್ನು ಈಗಾಗಲೇ ಸಿಬಿಐಗೆ ಕೊಡಲಾಗಿತ್ತು. ತನಿಖೆ ಮಾಡಿ ವರದಿ ಕೊಟ್ಟಿದ್ದಾರೆ. ಈಗ ಸೌಜನ್ಯ ಹೆತ್ತವರು ಮರು ತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಾತ್ಮಕವಾಗಿ ಏನು ಮಾಡಬೇಕು ಅಂತ ನೋಡಬೇಕಾಗತ್ತೆ. ನ್ಯಾಯಾಲಯಕ್ಕೆ ಮತ್ತೆ ಅಪೀಲು ಹಾಕಬೇಕಾಗುತ್ತೆ. ತೀರ್ಪು ಏನಿದೆ ಅಂತ ನೋಡಿದ ಮೇಲೆ ನಿರ್ಧಾರ ಮಾಡ್ತೀವಿ ಎಂದರು.
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ ಖಚಿತ ಎಂದು ಹೇಳಿದ ಸಿದ್ದರಾಮಯ್ಯ, ಸರ್ಕಾರದ ವಿರುದ್ದ ಅಥವ ಯಾರ ವಿರುದ್ಧವೂ ಅವಹೇಳನ ಮಾಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದರು. ಟೀಕೆ ಮಾಡಿದರೂ ಕ್ರಮ ತಗೋತೀರಾ ಎಂದು ಕೇಳಿದ್ದಕ್ಕೆ, ಟೀಕೆ ಮಾಡಿದರೆ ಕ್ರಮ ಅಲ್ಲ, ಸುಳ್ಳು ಸುದ್ದಿ ಹಬ್ಬಿಸಿದರೆ ಮಾತ್ರ ಕ್ರಮ. ಟೀಕೆ ಬೇರೆ, ಸುಳ್ಳು ಸುದ್ದಿ , ವೈಯಕ್ತಿಕ ತೇಜೋವಧೆ ಮಾಡೋದು ಬೇರೆ. ಕುಟುಂಬದ ಬಗ್ಗೆ ಅವಹೇಳನ ಮಾಡಿದ್ರೆ ನೀವು ಬಿಡ್ತೀರಾ ಎಂದು ಮರು ಪ್ರಶ್ನೆ ಹಾಕಿದರು.
ಕಸ್ತೂರಿರಂಗನ್ ವರದಿ ಜಾರಿ ಮಾಡ್ತೀರಾ ಎಂಬ ಪ್ರಶ್ನೆಗೆ, ಆ ಬಗ್ಗೆ ತೀರ್ಮಾನ ಮಾಡಬೇಕಿರೋದು ಕೇಂದ್ರ ಸರ್ಕಾರ. ವರದಿ ರದ್ದು ಮಾಡುವ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ತಗೋಬೇಕು. ಹಾಗಂತ ನಾವು ಪರಿಸರ ರಕ್ಷಣೆಗೆ ಹಿಂದೆ ಬೀಳಲ್ಲ ಎಂದರು.
ಬಿಟ್ ಕಾಯಿನ್ ತನಿಖೆ ಏನಾಯ್ತು ಎಂಬ ಪ್ರಶ್ನೆಗೆ, ಈಗಾಗಲೇ ಎಸ್ಐಟಿ ಮಾಡಿದ್ದೇವೆ, ಅವರು ತನಿಖೆ ಮಾಡಲಿದ್ದಾರೆ ಎಂದರು. ತಿಂಗಳು ಕಳೆದರೂ ಆರೋಪಿಗಳಿಗೆ ನೋಟೀಸ್ ಕೊಟ್ಟಿಲ್ಲ ಯಾಕೆಂಬ ಪ್ರಶ್ನೆಗೆ, ನೋಡೋಣ ಮಾತಾಡ್ತೀನಿ. ಅದು ತನಿಖಾ ತಂಡದ ಕೆಲಸ ಎಂದು ಮುಖ್ಯಮಂತ್ರಿ ಜಾರಿಕೊಂಡರು.
Soujanya case judgement copy yet to be read says CM Siddaramaiah in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm