ಬ್ರೇಕಿಂಗ್ ನ್ಯೂಸ್
01-08-23 02:45 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಎರಡನೇ ಬಾರಿಗೆ ಸಿಎಂ ಆದಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಮಾನ ನಿಲ್ದಾಣದಲ್ಲಿ ಹೂಗುಚ್ಛ ನೀಡಲು ಮಹಿಳಾ ನಾಯಕಿಯರು ಪೈಪೋಟಿ ನಡೆಸಿದ್ದು ಇಬ್ಬರು ಕಿತ್ತಾಡಿಕೊಂಡ ಘಟನೆ ವಿಡಿಯೋ ವೈರಲ್ ಆಗಿದೆ.
ಮಂಗಳೂರಿನ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೋ, ಸಿದ್ದರಾಮಯ್ಯ ಕಾರಿನಲ್ಲಿ ಕುಳಿತುಕೊಳ್ಳುತ್ತಿದ್ದಂತೆ ತನ್ನ ಬೆಂಬಲಿಗರ ಜೊತೆ ಜೈಕಾರ ಹಾಕುತ್ತಾ ಹೂಗುಚ್ಛ ನೀಡಲು ಮುಂದೆ ಬಂದಿದ್ದಾರೆ. ಈ ವೇಳೆ, ಮಂಗಳೂರಿನ ಮಾಜಿ ಮೇಯರ್ ಕವಿತಾ ಸನಿಲ್ ಅಡ್ಡ ಬಂದಿದ್ದು ಶಾಲೆಟ್ ಹತ್ತಿರ ಹೋಗದಂತೆ ತಡೆದಿದ್ದಾರೆ. ಶಾಲೆಟ್ ಪಿಂಟೋ ಹೂವಿನ ಮಾಲೆ ಹಾಕಲು ಬಂದಾಗ ಕವಿತಾ ಸನಿಲ್ ದೂಡಿದ್ದು ಇಬ್ಬರ ಕಿತ್ತಾಟಕ್ಕೆ ಸಾಕ್ಷಿಯಾಯಿತು.

ಸಿದ್ದರಾಮಯ್ಯ ಕಾರಿನಲ್ಲಿ ಕುಳಿತುಕೊಳ್ಳುತ್ತಿದ್ದಂತೆ ಮಹಿಳಾ ನಾಯಕಿಯರು ಹೂಮಾಲೆ ಹಾಕಲು ಮುಂದೆ ಬಂದಿದ್ದರು. ಈ ವೇಳೆ, ಸಿದ್ದರಾಮಯ್ಯ ಕಾರಿಗೆ ಕವಿತಾ ಸನಿಲ್ ಅಡ್ಡ ಬಂದಿರುವುದು, ಕಾರು ಹೋದ ಬಳಿಕ ಕವಿತಾ ಮತ್ತು ಶಾಲೆಟ್ ಪಿಂಟೋ ಕಿತ್ತಾಡಿಕೊಂಡಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಇಬ್ಬರು ನಾಯಕಿಯರ ಜಡೆ ಕಿತ್ತಾಟ ನೋಡಿದ ಕಾಂಗ್ರೆಸ್ ನಾಯಕರು ಮುಸಿ ಮುಸಿ ನಕ್ಕಿದ್ದಾರೆ.

ಸಿದ್ದರಾಮಯ್ಯ ವಿಮಾನ ನಿಲ್ದಾಣದ ಒಳಗಿರುವಾಗಲೇ ಶಾಲೆಟ್ ಪಿಂಟೋಗೆ ಒಳಗೆ ಹೋಗಲು ಅವಕಾಶ ಸಿಕ್ಕಿರಲಿಲ್ಲ. ಹೊರಗಡೆ ಇದ್ದೇ ಆಚೀಚೆ ಅಡ್ಡಾಡುತ್ತಿದ್ದರು. ಆನಂತರ, ಸಿದ್ದರಾಮಯ್ಯ ಹೊರಬಂದು ಮಾಧ್ಯಮಕ್ಕೆ ಮಾತನಾಡಿದ ಸಂದರ್ಭದಲ್ಲಿಯೂ ಕವಿತಾ ಸನಿಲ್ ಇತರೇ ಕಾಂಗ್ರೆಸ್ ನಾಯಕರನ್ನು ಬದಿಗೊತ್ತಿ ಸಿದ್ದರಾಮಯ್ಯ ಹತ್ತಿರ ನಿಂತುಕೊಳ್ಳಲು ಯಶಸ್ವಿಯಾಗಿದ್ದರು. ಕೊನೆಗೆ, ಜೈಕಾರ ಕೂಗಿ ಹೂಮಾಲೆ ಹಾಕುವ ಸಂದರ್ಭದಲ್ಲಿಯೂ ಸಿದ್ದರಾಮಯ್ಯಗೆ ಕವಿತಾ ಸನಿಲ್ ತಡೆ ಹಾಕಿದ್ದು ಇತರೇ ನಾಯಕಿಯರನ್ನು ಸಿಟ್ಟಾಗಿಸಿತ್ತು.
CM siddaramaiah in Mangalore, Congress members Kavitha Sanil andnl Sharlet Pinto fight to give garlands and bouquet.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm