ಬ್ರೇಕಿಂಗ್ ನ್ಯೂಸ್
01-08-23 07:11 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಕರಾವಳಿ ಜಿಲ್ಲೆಗೆ ಉದ್ದೇಶಪೂರ್ವಕವಾಗಿ ಕೆಟ್ಟ ಹೆಸರು ತರಲು ಕೋಮುವಾದಿ ಶಕ್ತಿಗಳು ಕೆಲಸ ಮಾಡುತ್ತಿವೆ. ಬೇರೆ ಕಡೆಯ ವಿದ್ಯಾರ್ಥಿಗಳು ಮಂಗಳೂರಿಗೆ ವಿದ್ಯಾರ್ಜನೆಗೆ ಬರಲು ಭಯ ಪಡುತ್ತಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇತ್ತೀಚೆಗೆ ಕೆಲವು ವಿದ್ಯಾರ್ಥಿಗಳು ನನ್ನನ್ನು ಸಂಪರ್ಕಿಸಿ ಆಡ್ಮಿಷನ್ ಆಗಿದೆ, ಕಾಲೇಜಿಗೆ ಹೋಗಲು ಭಯ ಆಗುತ್ತಿದೆ ಎಂದು ಹೇಳಿದ್ದರು. ಅಂತಹ ವಾತಾವರಣ ಇಲ್ಲ. ಹಾಗೇನು ಭಯ ಪಡಬೇಡಿ ಅಂತ ವಿದ್ಯಾರ್ಥಿಗಳನ್ನು ಹೇಳಿ. ಕಳುಹಿಸಿದ್ದೆ ಎಂದು ಹೇಳಿದ ಗುಂಡೂರಾವ್, ಉದ್ದೇಶ ಪೂರ್ವಕವಾಗಿ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಹುನ್ನಾರ ನಡೆಯುತ್ತಿದೆ. ಈ ಕೆಲಸಕ್ಕೆ ಮತೀಯವಾದಿ ಶಕ್ತಿಗಳು ಸಾಥ್ ನೀಡುತ್ತಿವೆ. ನಮ್ಮ ಸರ್ಕಾರ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡೋದಿಲ್ಲ.
ಇದನ್ನು ನೈತಿಕ ಪೊಲೀಸ್ ಅಲ್ಲ, ಅನೈತಿಕ ಪೊಲೀಸ್ ಗಿರಿ ಅಂತಾ ಕರೆಯಬೇಕಾಗುತ್ತದೆ. ಕಾನೂನನ್ನು ಕೈಗೆ ತೆಗೆದುಕೊಳ್ಳೋದು, ಹಲ್ಲೆ ಮಾಡೋದು, ಭಯ ಸೃಷ್ಟಿಸೋದು, ದಬ್ಬಾಳಿಕೆ ನಡೆಸೋದನ್ನು ಸಹಿಸಲು ಸಾಧ್ಯವಿಲ್ಲ. ಪೊಲೀಸರಿಗೆ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಇಂತಹ ಘಟನೆಗಳನ್ನು ಸಹಿಸಲು ಸಾಧ್ಯ ಇಲ್ಲ, ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಅಲ್ಲದೆ ಈ ರೀತಿಯ ಕೆಲಸ ಮಾಡುವವರನ್ನು ಗಡಿಪಾರು ಮಾಡುತ್ತೇವೆ.
ಇಂತಹವರಿಗೆ ಬಿಜೆಪಿ ಶಾಸಕರು ಬೆಂಬಲ ನೀಡುತ್ತಾರೆ ಅಂದ್ರೆ, ಕ್ರಿಮಿನಲ್ ಗಳಿಗೆ ಬಿಜೆಪಿ ಸಪೋರ್ಟ್ ಮಾಡುತ್ತಿದೆ ಎಂದರ್ಥ. ಬಿಜೆಪಿಗೆ ದ.ಕ. ಜಿಲ್ಲೆಯಲ್ಲಿ ಸಾಮರಸ್ಯ ಇರೋದು ಬೇಡ ಅಂತ ಕಾಣುತ್ತದೆ ಎಂದು ಹೇಳಿದರು. ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಮಂಗಳೂರಿಗೆ ಬಂದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಅವರನ್ನು ಸ್ವಾಗತಿಸಿದ ಬಳಿಕ ನೈತಿಕ ಪೊಲೀಸ್ ಗಿರಿ ಹೆಚ್ಚುತ್ತಿರುವ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಸಚಿವರು ಉತ್ತರಿಸಿದರು.
District-in-charge minister Dinesh Gundu Rao said that several communal forces including Sangh Parivar organisations are deliberately conspiring to bring a bad name to the Dakshina Kannada district.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm