ವಿನಯ ಕುಲಕರ್ಣಿ ಅಪರಾಧಿ ಸ್ಥಾನದಲ್ಲಿದ್ದಾರೆ, ಸಾಕ್ಷ್ಯ ಸಿಕ್ಕಿದ್ದರಿಂದ ಬಂಧಿಸಿದ್ದಾರೆ !

05-11-20 12:28 pm       Mangalore Correspondent   ಕರಾವಳಿ

ಸಿಬಿಐ ಗೆ ಸಾಕ್ಷ್ಯಧ್ಯಾರ ಸಿಕ್ಕಿರುವುದರಿಂದ ವಶಕ್ಕೆ ಪಡೆದಿದ್ದಾರೆ. ಅದರಲ್ಲಿ ನಮ್ಮ ಕೈವಾಡ ಏನಿರುತ್ತೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮಂಗಳೂರು, ನವೆಂಬರ್ 05: ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿರುವ ವಿಚಾರದಲ್ಲಿ ಮಂಗಳೂರಿನಲ್ಲಿ ಸಿ.ಎಂ ಬಿ‌ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.‌

ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅಪರಾಧಿ ಸ್ಥಾನದಲ್ಲಿದ್ದಾರೆ. ಈ ಪ್ರಕರಣದಲ್ಲಿ ಖಚಿತ ಸಾಕ್ಷ್ಯ ಸಿಕ್ಕಿದ್ದರಿಂದ ಸಿಬಿಐ ಅವರನ್ನು ವಶಕ್ಕೆ ಪಡೆದಿದೆ. ಸಿಬಿಐ ಗೆ ಸಾಕ್ಷ್ಯಧ್ಯಾರ ಸಿಕ್ಕಿರುವುದರಿಂದ ವಶಕ್ಕೆ ಪಡೆದಿದ್ದಾರೆ. ಅದರಲ್ಲಿ ನಮ್ಮ ಕೈವಾಡ ಏನಿರುತ್ತೆ ಎಂದು ಪ್ರಶ್ನಿಸಿದ್ದಾರೆ. 

ಯೋಗೀಶ್ ಗೌಡ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬುದು ಎಲ್ಲರ ಅಪೇಕ್ಷೆಯಾಗಿದೆ. ಈಗಲಾದರೂ ನ್ಯಾಯ ಸಿಗಲಿ ಎಂಬುದೇ ನಮ್ಮ ಅಭಿಪ್ರಾಯ. ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ, ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿದೆ.‌ ವಿನಯ್ ಕುಲಕರ್ಣಿ ಬಿಜೆಪಿಗೆ ಸೇರುತ್ತಾರೆ ಎಂಬುದ್ದು ಶುದ್ದ ಸುಳ್ಳು. ಅಂಥ ಯಾವುದೇ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

The CBI has got strong evidence against former minister and Congress leader Vinay Kulkarni said BS Yediyurappa in Mangalore.